AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​​ರ ಕೊಂಡಾಡಿದ ಪರಭಾಷಾ ಸ್ಟಾರ್ ನಟ

Duniya Vijay: ದುನಿಯಾ ವಿಜಯ್, ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ಸಹ. ಸಿನಿಮಾಗಳಲ್ಲಿ ಡ್ಯೂಪ್ ಆಗಿ, ಈಗ ದುನಿಯಾ ವಿಜಯ್ ಅವರು ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ ತೆಲುಗು, ತಮಿಳಿನ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಕೆಲವು ಸ್ಟಾರ್ ನಟರುಗಳ ಸಿನಿಮಾಗಳಲ್ಲಿ ದುನಿಯಾ ವಿಜಯ್ ನಟಿಸಿದ್ದಾರೆ. ಇದೀಗ ತಮಿಳು, ತೆಲುಗಿನಲ್ಲಿ ಬಲು ಜನಪ್ರಿಯರಾಗಿರುವ ಸ್ಟಾರ್ ನಟರೊಬ್ಬರು ದುನಿಯಾ ವಿಜಯ್ ಅವರನ್ನು ಕೊಂಡಾಡಿದ್ದಾರೆ.

ದುನಿಯಾ ವಿಜಯ್​​ರ ಕೊಂಡಾಡಿದ ಪರಭಾಷಾ ಸ್ಟಾರ್ ನಟ
Duniya Vijay
ಮಂಜುನಾಥ ಸಿ.
|

Updated on: Jun 09, 2026 | 4:21 PM

Share

ದುನಿಯಾ ವಿಜಯ್ (Duniya Vijay), ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ಸಹ. ಸಿನಿಮಾಗಳಲ್ಲಿ ಡ್ಯೂಪ್ ಆಗಿ, ಫೈಟರ್ ಆಗಿ ವೃತ್ತಿ ಆರಂಭಿಸಿದ ವಿಜಯ್, ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸುತ್ತಾ ಬಂದು ಸ್ಟಾರ್ ನಟರಾದವರು. ವೃತ್ತಿಯ ಮೇಲಿರುವ ಪ್ರೀತಿ, ಗೌರವ ಮತ್ತು ಶ್ರಮವೇ ಅವರನ್ನು ಇಂದಿನ ಅವರ ಸ್ಥಿತಿಗೆ ಕರೆದು ತಂದು ನಿಲ್ಲಿಸಿದೆ. ಈಗ ದುನಿಯಾ ವಿಜಯ್ ಅವರು ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ ತೆಲುಗು, ತಮಿಳಿನ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಕೆಲವು ಸ್ಟಾರ್ ನಟರುಗಳ ಸಿನಿಮಾಗಳಲ್ಲಿ ದುನಿಯಾ ವಿಜಯ್ ನಟಿಸಿದ್ದಾರೆ. ಇದೀಗ ತಮಿಳು, ತೆಲುಗಿನಲ್ಲಿ ಬಲು ಜನಪ್ರಿಯರಾಗಿರುವ ಸ್ಟಾರ್ ನಟರೊಬ್ಬರು ದುನಿಯಾ ವಿಜಯ್ ಅವರನ್ನು ಕೊಂಡಾಡಿದ್ದಾರೆ.

ದುನಿಯಾ ವಿಜಯ್, ತೆಲುಗಿನ ‘ಸ್ಲಂ ಡಾಗ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾನಲ್ಲಿ ದುನಿಯಾ ವಿಜಯ್ ಸಹ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ‘ಸ್ಲಂ ಡಾಗ್’ ಸಿನಿಮಾನಲ್ಲಿ ವಿಜಯ್ ಸೇತುಪತಿ ನಾಯಕನಾಗಿ ನಟಿಸಿದ್ದಾರೆ. ನಿನ್ನೆಯಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ದುನಿಯಾ ವಿಜಯ್ ಅವರ ಪಾತ್ರಕ್ಕೆ ಮಹತ್ವ ಇರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ನಟ ವಿಜಯ್ ಸೇತುಪತಿ, ವಿಜಯ್ ಅವರ ಪ್ರತಿಭೆ, ವ್ಯಕ್ತಿತ್ವ ಮತ್ತು ಶ್ರಮವನ್ನು ಕೊಂಡಾಡಿದ್ದಾರೆ.

ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಜಯ್ ಸೇತುಪತಿ, ‘ನಾನು ಬಹಳ ವರ್ಷಗಳ ಹಿಂದೆ ಒಂದು ಕನ್ನಡ ಸಿನಿಮಾನಲ್ಲಿ ಹೋಗಿದ್ದೆ, ಆಗಷ್ಟೆ ‘ದುನಿಯಾ’ ಸಿನಿಮಾ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿತ್ತು. ಆಗಲೇ ನನಗೂ ಗೊತ್ತಾಗಿದ್ದು ದುನಿಯಾ ವಿಜಯ್ ಅವರ ಬಗ್ಗೆ. ಈಗ ಅವರೊಟ್ಟಿಗೆ ನಟಿಸುವಾಗ, ಸೆಟ್​​ನಲ್ಲಿ ಅವರ ಶಿಸ್ತು ನೋಡಿ ಆಶ್ಚರ್ಯವಾಯ್ತು. ಅವರು ಬಹಳ ಪ್ರತಿಭಾವಂತ ನಟ. ಅವರೊಟ್ಟಿಗೆ ಕೆಲಸ ಮಾಡಿದ್ದು ನನಗೆ ಬಹಳ ಖುಷಿಯ ವಿಷಯ ಜೊತೆಗೆ ಗೌರವ ಸಹ’ ಎಂದಿದ್ದಾರೆ.

ಇದನ್ನೂ ಓದಿ:ಹಳ್ಳಿಯಲ್ಲಿ ಮಕ್ಕಳ ಜೊತೆ ಆಟ ಆಡಿದ ದುನಿಯಾ ವಿಜಯ್

‘ಅವರು ನಟಿಸುವಾಗ ಪಾತ್ರಕ್ಕೆ ಅವರು ತಯಾರಿ ನಡೆಸಿಕೊಳ್ಳುವ ರೀತಿ. ನಿರ್ದೇಶಕರೊಟ್ಟಿಗೆ ಅವರು ನಡೆಸುವ ಚರ್ಚೆ, ನಿರ್ದೇಶಕರು ಹೇಳಿದ್ದರಲ್ಲೇ ಅವರು ತಮ್ಮತನವನ್ನು ತಂದುಕೊಳ್ಳುವ ರೀತಿ. ಪ್ರತಿ ಶಾಟ್​​ನಲ್ಲೂ ಭಿನ್ನವಾದುದನ್ನು ಕೊಡುವ ಬಯಕೆ ಅವರಲ್ಲಿ ನಾನು ಗಮನಿಸಿದೆ. ಅವರೊಬ್ಬ ಅದ್ಭುತವಾದ ಮನುಷ್ಯ ಜೊತೆಗೆ ಅದ್ಭುತವಾದ ನಟ. ವಿಜಯ್ ಸರ್, ಬಹಳ ಥ್ಯಾಂಕ್ಸ್ ಈ ಸಿನಿಮಾನಲ್ಲಿ ನೀವು ನಮ್ಮೊಂದಿಗೆ ನಟಿಸಿದ್ದಕ್ಕೆ’ ಎಂದಿದ್ದಾರೆ ವಿಜಯ್ ಸೇತುಪತಿ.

ವಿಜಯ್ ಸೇತುಪತಿ ಮಾತ್ರವೇ ಅಲ್ಲದೆ ‘ಸ್ಲಂ ಡಾಗ್’ ಸಿನಿಮಾದ ನಿರ್ದೇಶಕ ಪುರಿ ಜಗನ್ನಾಥ್ ಸಹ ವಿಜಯ್ ಅವರ ನಟನೆಯನ್ನು ಕೊಂಡಾಡಿದ್ದಾರೆ. ‘ಸ್ಲಂ ಡಾಗ್’ ಸಿನಿಮಾ ಭಿಕ್ಷಕ ಮಾಫಿಯಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ವಿಜಯ್ ಸೇತುಪತಿ, ಟಬು, ದುನಿಯಾ ವಿಜಿ ಇನ್ನೂ ಹಲವು ಪ್ರತಿಭಾವಂತ ನಟರಿದ್ದಾರೆ. ಸಿನಿಮಾ ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ