AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ನಟನ ಸಿನಿಮಾದಲ್ಲಿ ವಿಜಯ್​ ಸೇತುಪತಿ ಮಗ?; ಗುಟ್ಟು ಮಾಡಿದ ನಿರ್ದೇಶಕ

ವಿಜಯ್​ ನಟನೆಯ ‘ಬೀಸ್ಟ್’ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ವಿಜಯ್​ಗೆ ಜತೆಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ನೆಲ್ಸನ್ ದಿಲೀಪ್​ಕುಮಾರ್​ ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದು, ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಸ್ಟಾರ್​ ನಟನ ಸಿನಿಮಾದಲ್ಲಿ ವಿಜಯ್​ ಸೇತುಪತಿ ಮಗ?; ಗುಟ್ಟು ಮಾಡಿದ ನಿರ್ದೇಶಕ
ದಳಪತಿ ವಿಜಯ್​-ವಿಜಯ್​ ಸೇತುಪತಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 26, 2022 | 4:58 PM

Share

ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂದರೆ ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ. ಸಿನಿಮಾ ಹೇಗಿರುತ್ತದೆ? ಸಿನಿಮಾದಲ್ಲಿ ಅವರ ಪಾತ್ರ ಹೇಗಿರುತ್ತದೆ ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಇರುತ್ತದೆ. ಈಗ ತಮಿಳಿನ ಸ್ಟಾರ್​ ನಟ ವಿಜಯ್​ ಸೇತುಪತಿ (Vijay Sethupathi ) ಅವರ ಮಗ ಸೂರ್ಯ ಸೇತುಪತಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ತಮಿಳಿನ ಸ್ಟಾರ್​ ನಟ ‘ದಳಪತಿ’ ವಿಜಯ್ (Thalapathy Vijay)​ ಅಭಿನಯದ ‘ಬೀಸ್ಟ್​’ ಸಿನಿಮಾದಲ್ಲಿ (Beast Movie) ಸೂರ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದಲ್ಲಿ ನಿರ್ದೇಶಕರು ಗುಟ್ಟು ಮಾಡಿದ್ದಾರೆ. ಚಿತ್ರರಂಗಕ್ಕೆ ಸೂರ್ಯ ಎಂಟ್ರಿ ಸುದ್ದಿ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ವಿಜಯ್​ ನಟನೆಯ ‘ಬೀಸ್ಟ್’ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ವಿಜಯ್​ಗೆ ಜತೆಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ನೆಲ್ಸನ್ ದಿಲೀಪ್​ಕುಮಾರ್​ ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದು, ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗಾಗಲೇ ಹಾಡುಗಳ ಮೂಲಕ ಸಿನಿಮಾ ಸದ್ದು ಮಾಡುತ್ತಿದೆ. ಈ ಚಿತ್ರದ ಮೂಲಕ ಸೂರ್ಯ ಸೇತುಪತಿ ಚಿತ್ರರಂಗಕ್ಕೆ ಎಂಟ್ರಿ ಆದರೆ, ಅವರ ವೃತ್ತಿಜೀವನಕ್ಕೆ ಮೈಲೇಜ್​ ಸಿಗಲಿದೆ. ಈ ಮೊದಲು ಸೂರ್ಯ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿದ್ದರು. ಆದರೆ, ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ಇದೇ ಮೊದಲು.

ವಿಜಯ್​ ಸೇತುಪತಿ ಮಗಳು ಶ್ರೀಜಾ ಸೇತುಪತಿ ಕಳೆದ ವರ್ಷ ‘ಮುಘಿಜ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ರೆಜಿನಾ ಹಾಗೂ ಶ್ರೀಜಾ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಿದ ಬೆನ್ನಲ್ಲೇ ಈಗ ಅವರ ಸಹೋದರ ಸೂರ್ಯ ಎಂಟ್ರಿ ಆಗೋಕೆ ಕ್ಷಣಗಣನೆ ಆರಂಭವಾಗಿದೆ.

ಸೂರ್ಯ ಅವರು ‘ದಳಪತಿ’ ವಿಜಯ್​ ಅಭಿನಯದ ‘ಬೀಸ್ಟ್​’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ತುಂಬಾನೇ ವಿಶೇಷವಾಗಿರಲಿದೆ ಎಂದು ವರದಿ ಆಗಿದೆ. ಈಗಲೇ ಈ ಪಾತ್ರದ ಬಗ್ಗೆ ಹೇಳಿದರೆ ಸಸ್ಪೆನ್ಸ್​ ಇರುವುದಿಲ್ಲ ಎಂಬುದು ನಿರ್ದೇಶಕರ ಆಲೋಚನೆ. ಈ ಕಾರಣಕ್ಕೆ ಅವರು ಈ ವಿಚಾರದಲ್ಲಿ ಗುಟ್ಟು ಮಾಡುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.

ವಿಜಯ್​ ಸೇತುಪತಿ ಅವರು ಕಾಲಿವುಡ್​ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಭಿನ್ನ ಪಾತ್ರ ಹಾಗೂ ಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅವರು ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಈಗ ಅವರ ಮಗ ಸೂರ್ಯ ಕೂಡ ಚಿತ್ರರಂಗಕ್ಕೆ ಬರುತ್ತಿರುವುದು ವಿಜಯ್​ ಸೇತುಪತಿ ಅಭಿಮಾನಿಗಳ ಪಾಲಿಗೆ ಖುಷಿಯ ವಿಚಾರ.

‘ದಳಪತಿ’ ವಿಜಯ್​ ಹಾಗೂ ವಿಜಯ್​ ಸೇತುಪತಿ ನಡುವೆ ಒಳ್ಳೆಯ ಬಾಂಧವ್ಯ ಇದೆ. ಕಳೆದ ವರ್ಷ ತೆರೆಗೆ ಬಂದ ‘ಮಾಸ್ಟರ್​’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಈಗ ‘ದಳಪತಿ’ ಜತೆ ಸೇತುಪತಿ ಮಗ ಅಭಿನಯಿಸುತ್ತಿದ್ದಾರೆ. ‘ಬೀಸ್ಟ್’ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪುನೀತ್​ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳು ನಟ ‘ದಳಪತಿ’ ವಿಜಯ್​

ವಿಜಯ್ ಸೇತುಪತಿಯವರನ್ನು ಒದ್ದರೆ ಪ್ರತಿ ಒದೆಗೆ ರೂ. 1,001 ನೀಡುವುದಾಗಿ ಘೋಷಿಸಿದ ಹಿಂದೂ ಮಕ್ಕಳ್ ಕಾಚಿ ಸಂಘಟನೆ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ