AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ನಟ ವಿಜಯ್ ಸೇತುಪತಿ ತಮ್ಮ ನಿರ್ಮಾಣ ಸಂಸ್ಥೆಯಡಿ ತಯಾರಿಸಿದ ಎಲ್ಲಾ ಚಿತ್ರಗಳು ನಷ್ಟ ಅನುಭವಿಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಿನಿಮಾ ಅರ್ಧಕ್ಕೆ ನಿಂತು 1.75 ಕೋಟಿ ನಷ್ಟವಾಗಿದ್ದರೆ, ನಂತರ ನಿರ್ಮಿಸಿದ ‘ಆರೆಂಜ್ ಮಿಠೈ’, ‘ಮೆರ್ಕು ದೊಡರ್ಚಿ ಮಲೈ’ ಸೇರಿದಂತೆ ನಾಲ್ಕು ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ವಿಫಲವಾಗಿ ಹೂಡಿಕೆಯನ್ನೂ ಮರಳಿ ಪಡೆಯಲಿಲ್ಲ.

‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ
ವಿಜಯ್ ಸೇತುಪತಿ
ರಾಜೇಶ್ ದುಗ್ಗುಮನೆ
|

Updated on: Mar 16, 2026 | 11:44 AM

Share

ಸ್ಟಾರ್ ಹೀರೋ ಆಗಿ ಬೆಳೆದ ಬಳಿಕ ಕೆಲವರಿಗೆ ಸಿನಿಮಾ ನಿರ್ಮಾಣ ಮಾಡುವ ಹುಮ್ಮಸ್ಸು ಬರುತ್ತದೆ. ಹಾಗಂತ ಅದನ್ನು ಮಾಡೋದ್ರಲ್ಲಿ ಸ್ವಾರ್ಥ ಇದೆ ಎಂದರ್ಥವಲ್ಲ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿ ಎಂಬುದು ಇದರ ಮುಖ್ಯ ಉದ್ದೇಶ ಆಗಿರುತ್ತದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್​​​ನಲ್ಲಿ ಸೋತಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಭಾರದ್ವಾಜ್ ರಂಗನ್ ಜೊತೆ ‘ಗಲಾಟಾ ಪ್ಲಸ್’ ಅಲ್ಲಿ ಮಾತನಾಡಿದ ವಿಜಯ್ ಸೇತುಪತಿ, ‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನನಗೆ ನಷ್ಟವನ್ನೇ ತಂದಿವೆ’ ಎಂದರು. ಕೆಲವು ನಿರ್ಮಾಪಕರು ಈ ವಿಷಯದಲ್ಲಿ ಓಪನ್ ಆಗಿ ಮಾತನಾಡುವುದಿಲ್ಲ. ಆದರೆ, ವಿಜಯ್ ಸೇತುಪತಿ ಆ ರೀತಿ ಮಾತನಾಡಿಲ್ಲ.

‘ನನ್ನ ಬ್ಯಾನರ್‌ನಲ್ಲಿ ‘ಸಂಗುತೇವನ್’ ಎಂಬ ಚಿತ್ರ ಪ್ರಾರಂಭಿಸಿದ್ದೆ. ಆದರೆ, ಅದು ಅರ್ಧದಲ್ಲೇ ನಿಂತುಹೋಯಿತು. ಇದರಿಂದಾಗಿ 1.75 ಕೋಟಿ ರೂ. ನಷ್ಟವಾಯಿತು. ಅದರ ನಂತರ ನಾನು ನಾಲ್ಕು ಚಿತ್ರಗಳನ್ನು ನಿರ್ಮಿಸಿದೆ. ‘ಆರೆಂಜ್ ಮಿಠೈ’ ‘ಮೆರ್ಕು ದೊಡರ್ಚಿ ಮಲೈ’, ‘ಜಂಗ್’, ‘ಮಹಾಬಾತ್’ ಚಿತ್ರಗಳು. ಇವುಗಳಲ್ಲಿ ಒಂದೂ ನನಗೆ ಯಾವುದೇ ಲಾಭ ತಂದುಕೊಡಲಿಲ್ಲ. ಕನಿಷ್ಠ ಹೂಡಿಕೆಯನ್ನು ಸಹ ಅವರು ಮರಳಿ ಪಡೆಯಲು ವಿಫಲವಾದವು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಜೈಲರ್ 2’ ಸಿನಿಮಾದಿಂದ ಬಾಲಯ್ಯ ಔಟ್? ವಿಜಯ್ ಸೇತುಪತಿಗೆ ದೊಡ್ಡ ಚಾನ್ಸ್

‘ಬಾಕ್ಸ್ ಆಫೀಸ್‌ನಲ್ಲಿ ಅವು ಸೋತರೂ, ಆ ಎಲ್ಲಾ ಸಿನಿಮಾಗಳು ನನಗೆ ಇನ್ನೂ ಇಷ್ಟ. ಅದಕ್ಕಾಗಿಯೇ ನನಗೆ ಅವುಗಳನ್ನು ಮಾಡಲು ಇಷ್ಟ’ ಎಂದು ಅವರು ಹೇಳಿದರು. ಪ್ರಸ್ತುತ ವಿಜಯ್ ಸೇತುಪತಿ ಸಿನಿಮಾ ನಟನೆಯಲ್ಲಿ ಬ್ಯುಸಿ ಇದ್ದಾರೆ. ತಮಿಳು, ತೆಲುಗು ಭಾಷೆಯಲ್ಲಿ ಅವರು ಮಿಂಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು