
ಸ್ಟಾರ್ ಹೀರೋ ಆಗಿ ಬೆಳೆದ ಬಳಿಕ ಕೆಲವರಿಗೆ ಸಿನಿಮಾ ನಿರ್ಮಾಣ ಮಾಡುವ ಹುಮ್ಮಸ್ಸು ಬರುತ್ತದೆ. ಹಾಗಂತ ಅದನ್ನು ಮಾಡೋದ್ರಲ್ಲಿ ಸ್ವಾರ್ಥ ಇದೆ ಎಂದರ್ಥವಲ್ಲ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿ ಎಂಬುದು ಇದರ ಮುಖ್ಯ ಉದ್ದೇಶ ಆಗಿರುತ್ತದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್ನಲ್ಲಿ ಸೋತಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.
ಭಾರದ್ವಾಜ್ ರಂಗನ್ ಜೊತೆ ‘ಗಲಾಟಾ ಪ್ಲಸ್’ ಅಲ್ಲಿ ಮಾತನಾಡಿದ ವಿಜಯ್ ಸೇತುಪತಿ, ‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನನಗೆ ನಷ್ಟವನ್ನೇ ತಂದಿವೆ’ ಎಂದರು. ಕೆಲವು ನಿರ್ಮಾಪಕರು ಈ ವಿಷಯದಲ್ಲಿ ಓಪನ್ ಆಗಿ ಮಾತನಾಡುವುದಿಲ್ಲ. ಆದರೆ, ವಿಜಯ್ ಸೇತುಪತಿ ಆ ರೀತಿ ಮಾತನಾಡಿಲ್ಲ.
‘ನನ್ನ ಬ್ಯಾನರ್ನಲ್ಲಿ ‘ಸಂಗುತೇವನ್’ ಎಂಬ ಚಿತ್ರ ಪ್ರಾರಂಭಿಸಿದ್ದೆ. ಆದರೆ, ಅದು ಅರ್ಧದಲ್ಲೇ ನಿಂತುಹೋಯಿತು. ಇದರಿಂದಾಗಿ 1.75 ಕೋಟಿ ರೂ. ನಷ್ಟವಾಯಿತು. ಅದರ ನಂತರ ನಾನು ನಾಲ್ಕು ಚಿತ್ರಗಳನ್ನು ನಿರ್ಮಿಸಿದೆ. ‘ಆರೆಂಜ್ ಮಿಠೈ’ ‘ಮೆರ್ಕು ದೊಡರ್ಚಿ ಮಲೈ’, ‘ಜಂಗ್’, ‘ಮಹಾಬಾತ್’ ಚಿತ್ರಗಳು. ಇವುಗಳಲ್ಲಿ ಒಂದೂ ನನಗೆ ಯಾವುದೇ ಲಾಭ ತಂದುಕೊಡಲಿಲ್ಲ. ಕನಿಷ್ಠ ಹೂಡಿಕೆಯನ್ನು ಸಹ ಅವರು ಮರಳಿ ಪಡೆಯಲು ವಿಫಲವಾದವು’ ಎಂದಿದ್ದಾರೆ ಅವರು.
ಇದನ್ನೂ ಓದಿ: ‘ಜೈಲರ್ 2’ ಸಿನಿಮಾದಿಂದ ಬಾಲಯ್ಯ ಔಟ್? ವಿಜಯ್ ಸೇತುಪತಿಗೆ ದೊಡ್ಡ ಚಾನ್ಸ್
‘ಬಾಕ್ಸ್ ಆಫೀಸ್ನಲ್ಲಿ ಅವು ಸೋತರೂ, ಆ ಎಲ್ಲಾ ಸಿನಿಮಾಗಳು ನನಗೆ ಇನ್ನೂ ಇಷ್ಟ. ಅದಕ್ಕಾಗಿಯೇ ನನಗೆ ಅವುಗಳನ್ನು ಮಾಡಲು ಇಷ್ಟ’ ಎಂದು ಅವರು ಹೇಳಿದರು. ಪ್ರಸ್ತುತ ವಿಜಯ್ ಸೇತುಪತಿ ಸಿನಿಮಾ ನಟನೆಯಲ್ಲಿ ಬ್ಯುಸಿ ಇದ್ದಾರೆ. ತಮಿಳು, ತೆಲುಗು ಭಾಷೆಯಲ್ಲಿ ಅವರು ಮಿಂಚುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.