AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ವಿಜಯ್​ ದಳಪತಿ
ರಾಜೇಶ್ ದುಗ್ಗುಮನೆ
|

Updated on: Jun 21, 2021 | 7:26 PM

Share

ದಳಪತಿ ವಿಜಯ್​ ಸಿನಿಮಾಗಳಲ್ಲಿ ಅಭಿಮಾನಿಗಳಿಗೆ ವಿಶೇಷ ಟ್ರೀಟ್​ ಇರುತ್ತದೆ. ಅವರ ನಟನೆಯ ಸಿನಿಮಾಗಳಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಫ್ಯಾನ್ಸ್​ ಸಂಭ್ರಮಿಸುತ್ತಾರೆ. ಅದೇ ರೀತಿ ಈಗ ವಿಜಯ್​ ನಟನೆಯ 65ನೇ ಚಿತ್ರಕ್ಕೆ ಟೈಟಕ್​ ಫಿಕ್ಸ್​ ಆಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ಅವರ ಲುಕ್​ ನೋಡಿ ಫ್ಯಾನ್ಸ್​ ಸಖತ್​ ಖುಷಿಯಾಗಿದ್ದಾರೆ.

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ. ವಿಜಯ್​ ಚಿತ್ರಗಳಲ್ಲಿ ಆ್ಯಕ್ಷನ್​ಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಈ ಪೋಸ್ಟರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಕೊಂಚ ಜಾಸ್ತಿಯೇ ಇರಲಿದೆ ಎನ್ನಲಾಗುತ್ತಿದೆ.

ನಾಳೆ (ಜೂನ್​ 22) ವಿಜಯ್​ ಜನ್ಮದಿನ. ಈ ಹಿನ್ನೆಲೆಯಲ್ಲಿ ಸಿನಿಮಾದ ಫಸ್ಟ್ ಲುಕ್​ ರಿಲೀಸ್​ ಆಗಿದೆ. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿವೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೂನ್ 22ರಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ಚಿತ್ರಕ್ಕಾಗಿ ವಿಜಯ್​ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್