AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ವಿಜಯ್​ ದಳಪತಿ
ರಾಜೇಶ್ ದುಗ್ಗುಮನೆ
|

Updated on: Jun 21, 2021 | 7:26 PM

Share

ದಳಪತಿ ವಿಜಯ್​ ಸಿನಿಮಾಗಳಲ್ಲಿ ಅಭಿಮಾನಿಗಳಿಗೆ ವಿಶೇಷ ಟ್ರೀಟ್​ ಇರುತ್ತದೆ. ಅವರ ನಟನೆಯ ಸಿನಿಮಾಗಳಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಫ್ಯಾನ್ಸ್​ ಸಂಭ್ರಮಿಸುತ್ತಾರೆ. ಅದೇ ರೀತಿ ಈಗ ವಿಜಯ್​ ನಟನೆಯ 65ನೇ ಚಿತ್ರಕ್ಕೆ ಟೈಟಕ್​ ಫಿಕ್ಸ್​ ಆಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ಅವರ ಲುಕ್​ ನೋಡಿ ಫ್ಯಾನ್ಸ್​ ಸಖತ್​ ಖುಷಿಯಾಗಿದ್ದಾರೆ.

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ. ವಿಜಯ್​ ಚಿತ್ರಗಳಲ್ಲಿ ಆ್ಯಕ್ಷನ್​ಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಈ ಪೋಸ್ಟರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಕೊಂಚ ಜಾಸ್ತಿಯೇ ಇರಲಿದೆ ಎನ್ನಲಾಗುತ್ತಿದೆ.

ನಾಳೆ (ಜೂನ್​ 22) ವಿಜಯ್​ ಜನ್ಮದಿನ. ಈ ಹಿನ್ನೆಲೆಯಲ್ಲಿ ಸಿನಿಮಾದ ಫಸ್ಟ್ ಲುಕ್​ ರಿಲೀಸ್​ ಆಗಿದೆ. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿವೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೂನ್ 22ರಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ಚಿತ್ರಕ್ಕಾಗಿ ವಿಜಯ್​ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್