AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ವಿಜಯ್​ ದಳಪತಿ
ರಾಜೇಶ್ ದುಗ್ಗುಮನೆ
|

Updated on: Jun 21, 2021 | 7:26 PM

Share

ದಳಪತಿ ವಿಜಯ್​ ಸಿನಿಮಾಗಳಲ್ಲಿ ಅಭಿಮಾನಿಗಳಿಗೆ ವಿಶೇಷ ಟ್ರೀಟ್​ ಇರುತ್ತದೆ. ಅವರ ನಟನೆಯ ಸಿನಿಮಾಗಳಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಫ್ಯಾನ್ಸ್​ ಸಂಭ್ರಮಿಸುತ್ತಾರೆ. ಅದೇ ರೀತಿ ಈಗ ವಿಜಯ್​ ನಟನೆಯ 65ನೇ ಚಿತ್ರಕ್ಕೆ ಟೈಟಕ್​ ಫಿಕ್ಸ್​ ಆಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ಅವರ ಲುಕ್​ ನೋಡಿ ಫ್ಯಾನ್ಸ್​ ಸಖತ್​ ಖುಷಿಯಾಗಿದ್ದಾರೆ.

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ. ವಿಜಯ್​ ಚಿತ್ರಗಳಲ್ಲಿ ಆ್ಯಕ್ಷನ್​ಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಈ ಪೋಸ್ಟರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಕೊಂಚ ಜಾಸ್ತಿಯೇ ಇರಲಿದೆ ಎನ್ನಲಾಗುತ್ತಿದೆ.

ನಾಳೆ (ಜೂನ್​ 22) ವಿಜಯ್​ ಜನ್ಮದಿನ. ಈ ಹಿನ್ನೆಲೆಯಲ್ಲಿ ಸಿನಿಮಾದ ಫಸ್ಟ್ ಲುಕ್​ ರಿಲೀಸ್​ ಆಗಿದೆ. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿವೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೂನ್ 22ರಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ಚಿತ್ರಕ್ಕಾಗಿ ವಿಜಯ್​ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ