AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ವಿಜಯ್​ ದಳಪತಿ
ರಾಜೇಶ್ ದುಗ್ಗುಮನೆ
|

Updated on: Jun 21, 2021 | 7:26 PM

Share

ದಳಪತಿ ವಿಜಯ್​ ಸಿನಿಮಾಗಳಲ್ಲಿ ಅಭಿಮಾನಿಗಳಿಗೆ ವಿಶೇಷ ಟ್ರೀಟ್​ ಇರುತ್ತದೆ. ಅವರ ನಟನೆಯ ಸಿನಿಮಾಗಳಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಫ್ಯಾನ್ಸ್​ ಸಂಭ್ರಮಿಸುತ್ತಾರೆ. ಅದೇ ರೀತಿ ಈಗ ವಿಜಯ್​ ನಟನೆಯ 65ನೇ ಚಿತ್ರಕ್ಕೆ ಟೈಟಕ್​ ಫಿಕ್ಸ್​ ಆಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ಅವರ ಲುಕ್​ ನೋಡಿ ಫ್ಯಾನ್ಸ್​ ಸಖತ್​ ಖುಷಿಯಾಗಿದ್ದಾರೆ.

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ. ವಿಜಯ್​ ಚಿತ್ರಗಳಲ್ಲಿ ಆ್ಯಕ್ಷನ್​ಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಈ ಪೋಸ್ಟರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಕೊಂಚ ಜಾಸ್ತಿಯೇ ಇರಲಿದೆ ಎನ್ನಲಾಗುತ್ತಿದೆ.

ನಾಳೆ (ಜೂನ್​ 22) ವಿಜಯ್​ ಜನ್ಮದಿನ. ಈ ಹಿನ್ನೆಲೆಯಲ್ಲಿ ಸಿನಿಮಾದ ಫಸ್ಟ್ ಲುಕ್​ ರಿಲೀಸ್​ ಆಗಿದೆ. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿವೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೂನ್ 22ರಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ಚಿತ್ರಕ್ಕಾಗಿ ವಿಜಯ್​ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!