AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತ್ರಿಷಾ ಮನೆಯಲ್ಲೇ ಇರಬೇಕು’; ಪಾರ್ಥಿಬನ್ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ನಟ ದಳಪತಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಕಾಣಿಸಿಕೊಂಡ ನಂತರ ಇವರ ಸಂಬಂಧ ವದಂತಿಗಳು ಹರಿದಾಡುತ್ತಿವೆ. ಸಂಗೀತಾ ವಿಜಯ್‌ಗೆ ವಿಚ್ಛೇದನ ನೀಡಲಿದ್ದಾರೆ. ಇದೀಗ ನಟ ಪಾರ್ಥಿಬನ್ ತ್ರಿಷಾ ಕುರಿತು ಕುಹಕವಾಡಿ, "ಕುಂದವೈ ಮನೆಯಲ್ಲೇ ಇರುವುದು ಉತ್ತಮ" ಎಂದಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ವಿಜಯ್ ಅವರನ್ನೇ ಟೀಕಿಸಿದ್ದಾರೆ.

‘ತ್ರಿಷಾ ಮನೆಯಲ್ಲೇ ಇರಬೇಕು’; ಪಾರ್ಥಿಬನ್ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ
ಪಾರ್ಥಿಬನ್-ವಿಜಯ್-ತ್ರಿಷಾ
ರಾಜೇಶ್ ದುಗ್ಗುಮನೆ
|

Updated on: Mar 09, 2026 | 8:24 AM

Share

ಕಳೆದ ಕೆಲವು ವಾರಗಳಿಂದ ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಅವರ ಹೆಸರು ಚರ್ಚೆಯಲ್ಲಿದೆ. ಅವರಿಬ್ಬರ ಸಂಬಂಧದ ಕಾರಣದಿಂದ ಸಂಗೀತಾ ಅವರು ವಿಜಯ್​​ಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತು. ವಿವಾಹ ಆರತಕ್ಷತೆಯೊಂದಕ್ಕೆ ವಿಜಯ್ ಮತ್ತು ತ್ರಿಷಾ ಒಟ್ಟಾಗಿ ತೆರಳಿದ್ದರು. ಇದರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಚರ್ಚೆ ಶುರುವಾಗಿದೆ. ಈಗ ಈ ಬಗ್ಗೆ ನಟ ಹಾಗೂ ನಿರ್ದೇಶಕ ಪಾರ್ಥಿಬನ್ ಅವರು ಕುಹಕವಾಡಿದ್ದಾರೆ.

ದಳಪತಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಸುತ್ತಾಟ ಮಾಡುತ್ತಿರುವ ವಿಷಯ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ನಟಿಯ ಜೊತೆಗಿನ ಅಕ್ರಮ ಸಂಬಂಧದ ಕಾರಣಕ್ಕೆ ವಿಜಯ್ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಪತ್ನಿ ಸಂಗೀತಾ ಹೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಈಗ ತ್ರಿಷಾ ಬಗ್ಗೆ ತಮಿಳು ನಟ ಪಾರ್ಥಿಬನ್ ಮಾಡಿದ ಕಾಮೆಂಟ್ ವೈರಲ್ ಆಗಿದೆ. ಅವರು ನಟಿಯನ್ನು ಟೀಕೆ ಮಾಡಿದ್ದಾರೆ. ಪಾರ್ಥಿಬನ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅವರ ಜೊತೆ ತೆರೆ ಹಂಚಿಕೊಂಡ ನಟಿಯರ ಬಗ್ಗೆ ಪ್ರಶ್ನೆ ಮಾಡಲಾಯಿತು. ‘ಪೊನ್ನಿಯನ್ ಸೆಲ್ವನ್’ ಚಿತ್ರದಲ್ಲಿನ ಪಾತ್ರಗಳ ಬಗ್ಗೆ ತೋರಿಸಲಾಯಿತು. ಈ ವೇಳೆ ತ್ರಿಷಾ ಫೋಟೋ ಬಂತು.

‘ಕುಂದವೈ (ತ್ರಿಷಾ) ಕೆಲ ದಿನ ಮನೆ ಒಳಗೆ ಇರೋದು ಉತ್ತಮ. ಎಲ್ಲವನ್ನೂ ಮುಕ್ತವಾಗಿ ಮಾತನಾಡಲು ಸಾಧ್ಯವಿಲ್ಲ. ಎಲ್ಲಾ ಕವಿತೆಗಳನ್ನು ಆನಂದಿಸಲು ಸಾಧ್ಯವಿಲ್ಲ. ಕೆಲವು ಕವಿತೆಗಳನ್ನು ಮುಕ್ತವಾಗಿ ಓದಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ. ‘ಕುಂದವೈ ಹೊರಗೆ ಬಂದರೆ ಸಮಸ್ಯೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಚ್ಛೇದನ, ತ್ರಿಷಾ ಬಗ್ಗೆ ಮೊದಲ ಬಾರಿ ಮಾತನಾಡಿದ ವಿಜಯ್

ಪಾರ್ಥಿಬನ್ ಅವರ ಭಾಷಣವನ್ನು ಕೆಲವರು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಪಾರ್ಥಿಬನ್ ಅವರು ಆಡಿದ ಮಾತುಗಳು ಸರಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ‘ಪಾರ್ಥಿಬನ್ ಅವರು ಈಗಾಗಲೇ ಪತ್ನಿಯಿಂದ ವಿಚ್ಛೇದನ ಪಡೆದಿದ್ದಾರೆ. ಆದರೆ ಅವರು ತಮ್ಮ ಮಾಜಿ ಪತ್ನಿಯ ಬಗ್ಗೆ ಎಂದಿಗೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿಲ್ಲ’ ಎಂದು ಕೆಲವರು ಪಾರ್ಥಿಬನ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ವಿಜಯ್ ಅವರನ್ನು ಟೀಕಿಸಿದ್ದಾರೆ. ‘ಹೆಂಡತಿಯ ಕಣ್ಣೀರು ಕೂಡ ವಿಜಯ್‌ಗೆ ಅಷ್ಟು ಮುಖ್ಯವಲ್ಲ ಎಂದು ಅವರು ವೇದಿಕೆಯ ಮೇಲೆ ಮಾತನಾಡುತ್ತಾರೆ. ಇದು ಸ್ವೀಕಾರಾರ್ಹವಲ್ಲ’ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು