AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಮದುವೆಯಾಗಬೇಕೆಂದು ರಾಖಿ ಸಾವಂತ್ ಸದ್ದು ಮಾಡಿದ್ದಾರೆ. ವಿಜಯ್ ಡಿವೋರ್ಸ್ ವದಂತಿಗಳ ನಡುವೆ ಈ ಹೇಳಿಕೆ ಮಹತ್ವ ಪಡೆದಿದೆ. 'ಲಿಯೋ' ತಾರೆಯರ ಕೆಮಿಸ್ಟ್ರಿ, ರಾಜಕೀಯದಲ್ಲಿ ತ್ರಿಷಾ ಪ್ರವೇಶದ ಸಾಧ್ಯತೆಗಳು ಕೂಡ ಚರ್ಚೆಗೆ ಗ್ರಾಸವಾಗಿವೆ. ವಿಜಯ್ ಪಕ್ಷಕ್ಕೆ ರಾಖಿ ಸೇರುವ ಆಸೆಯನ್ನೂ ವ್ಯಕ್ತಪಡಿಸಿದ್ದಾರೆ.

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ
ರಾಖಿ- ವಿಜಯ್-ತ್ರಿಷಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 09, 2026 | 10:55 AM

Share

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ.

1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್

2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ ರಾಖಿ ಹೇಳಿಕೆ

3. ವಿಜಯ್ ಅವರ ಪಕ್ಷಕ್ಕೆ ಸೇರ್ತೀನಿ ಎಂದ ವಿವಾದಾತ್ಮಕ ನಟಿ

ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿದ ರಾಖಿ, ‘ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ನನಗೆ ಅನ್ನಿಸುತ್ತಿದೆ. ಅವರಿಬ್ಬರ ಮದುವೆ ನಡೆದರೆ ನಾನು ಖಂಡಿತವಾಗಿಯೂ ಮೆಹಂದಿ ಕಾರ್ಯಕ್ರಮಕ್ಕೆ ಹೋಗುತ್ತೇನೆ’ ಎಂದಿದ್ದಾರೆ. ಅಲ್ಲದೆ, ವಿಜಯ್ ರಾಜಕೀಯ ಯಶಸ್ಸನ್ನು ಶ್ಲಾಘಿಸಿದ ಅವರು, ‘ವಿಜಯ್ ಅವರ ಪಕ್ಷವನ್ನು ಸೇರಲು ನಾನು ಇಷ್ಟಪಡುತ್ತೇನೆ’ ಎಂದು ತಮ್ಮ ಆಸೆಯನ್ನು ಹೊರಹಾಕಿದ್ದಾರೆ.

ವಿಜಯ್ ಮತ್ತು ತ್ರಿಷಾ ಬಗ್ಗೆ ಇಷ್ಟೊಂದು ಚರ್ಚೆ ನಡೆಯಲು ಕಾರಣ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ. ‘ಗಿಲ್ಲಿ’ ಚಿತ್ರದಿಂದ ಆರಂಭವಾದ ಇವರ ಜೋಡಿ ‘ಲಿಯೋ’ ಚಿತ್ರದವರೆಗೂ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದೆ. ಇನ್ನೊಂದೆಡೆ, ವಿಜಯ್ ಮತ್ತು ಅವರ ಪತ್ನಿ ಸಂಗೀತ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳು ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದವು. ಅದು ನಿಜವಾಗಿದೆ. ಸಂಗೀತಾ ಅವರು ಕೋರ್ಟ್​​​ನಲ್ಲಿ ಡಿವೋರ್ಸ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ‘ವಿಜಯ್ ಆ ಗುಣ ನನಗೆ ಯಾವಾಗಲೂ ಇಷ್ಟ ಆಗಲ್ಲ’; ತ್ರಿಷಾ ಕೃಷ್ಣನ್

ರಾಜಕೀಯ ರಂಗದಲ್ಲಿ ತ್ರಿಷಾ ಎಂಟ್ರಿ?

ತಮಿಳುನಾಡು ಅಸೆಂಬ್ಲಿ ಚುನಾವಣೆಯಲ್ಲಿ ವಿಜಯ್ ಅವರ ‘ಟಿವಿಕೆ’ ಪಕ್ಷ ದೊಡ್ಡ ಮಟ್ಟದ ಗೆಲುವು ಸಾಧಿಸಿದ ಬೆನ್ನಲ್ಲೇ, ತ್ರಿಷಾ ಕೂಡ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ವಿಜಯ್ ಗೆದ್ದಿರುವ ಎರಡು ಕ್ಷೇತ್ರಗಳಲ್ಲಿ ಒಂದನ್ನು ತ್ಯಜಿಸಬೇಕಿದ್ದು, ಆ ಉಪಚುನಾವಣೆಯಲ್ಲಿ ತ್ರಿಷಾ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು