AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದಲ್ಲಿ ಮುಖಾಮುಖಿಯಾಗಲಿದ್ದಾರೆ ವಿಜಯ್ ಹಾಗೂ ಮಗ ಜೇಸನ್

ತಮಿಳು ಚಿತ್ರರಂಗದಲ್ಲಿ ಈ ಅಕ್ಟೋಬರ್‌ನಲ್ಲಿ ಅಪ್ಪ-ಮಗನ ನಡುವೆ ಅಪರೂಪದ ಬಾಕ್ಸ್ ಆಫೀಸ್ ಸ್ಪರ್ಧೆ ಏರ್ಪಡಲಿದೆ. ದಳಪತಿ ವಿಜಯ್ ಅವರ ಸೂಪರ್ ಹಿಟ್ 'ತಿರುಪಾಚಿ' ಮರುಬಿಡುಗಡೆಯಾಗುತ್ತಿದ್ದರೆ, ಮರುದಿನವೇ ಅವರ ಪುತ್ರ ಜೇಸನ್ ಸಂಜಯ್ ನಿರ್ದೇಶನದ 'ಸಿಗ್ಮಾ' ಸಿನಿಮಾ ತೆರೆಕಾಣಲಿದೆ. ಈ ಕುತೂಹಲಕಾರಿ ಕದನ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

ಚಿತ್ರಮಂದಿರದಲ್ಲಿ ಮುಖಾಮುಖಿಯಾಗಲಿದ್ದಾರೆ ವಿಜಯ್ ಹಾಗೂ ಮಗ ಜೇಸನ್
ಜೇಸನ್-ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 16, 2026 | 8:06 AM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್‌ನಲ್ಲಿ ಅಪ್ಪ-ಮಗನ ಅಪರೂಪದ ಕದನ
  • 21 ವರ್ಷಗಳ ನಂತರ 'ತಿರುಪಾಚಿ' ಮರುಬಿಡುಗಡೆ
  • ನಿರ್ದೇಶಕನಾಗಿ ಜೇಸನ್ ಸಂಜಯ್ 'ಸಿಗ್ಮಾ' ಧಮಾಕಾ

ತಮಿಳು ಚಿತ್ರರಂಗದಲ್ಲಿ ಈ ಅಕ್ಟೋಬರ್ ತಿಂಗಳು ಅತ್ಯಂತ ಕುತೂಹಲಕಾರಿ ಬಾಕ್ಸ್ ಆಫೀಸ್ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ದಳಪತಿ ವಿಜಯ್ ಅಭಿನಯದ ಹಿಟ್ ಸಿನಿಮಾ ‘ತಿರುಪಾಚಿ’ ಚಿತ್ರಮಂದಿರಗಳಿಗೆ ಮರಳುತ್ತಿದೆ. ಇದೇ ವೇಳೆ ಅವರ ಪುತ್ರ ಜೇಸನ್ ಸಂಜಯ್ ನಿರ್ದೇಶನದ ಚೊಚ್ಚಲ ಸಿನಿಮಾ ‘ಸಿಗ್ಮಾ’ ಕೂಡ ತೆರೆಗೆ ಬರಲಿದೆ. ಈ ಇಬ್ಬರ ಚಿತ್ರಗಳು ಬೆನ್ನಬೆನ್ನಿಗೆ ಬಿಡುಗಡೆಯಾಗುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ.

ವರದಿಗಳ ಪ್ರಕಾರ ವಿಜಯ್ ನಟನೆಯ ‘ತಿರುಪಾಚಿ’ ಸಿನಿಮಾ ಅಕ್ಟೋಬರ್ 1 ರಂದು ಮರುಬಿಡುಗಡೆಯಾಗಲಿದೆ. ಮರುದಿನವೇ ಅಂದರೆ ಅಕ್ಟೋಬರ್ 2 ರಂದು ಜೇಸನ್ ಸಂಜಯ್ ಅವರ ‘ಸಿಗ್ಮಾ’ ಚಿತ್ರಮಂದಿರಕ್ಕೆ ಬರಲಿದೆ. ಹೀಗಾಗಿ ಬಾಕ್ಸ್ ಆಫೀಸ್‌ನಲ್ಲಿ ಅಪ್ಪ ಮತ್ತು ಮಗನ ನಡುವೆ ನೇರ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ. ಈ ಅಪರೂಪದ ಮುಖಾಮುಖಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

2005 ರಲ್ಲಿ ತೆರೆಕಂಡ ‘ತಿರುಪಾಚಿ’ ಚಿತ್ರದಲ್ಲಿ ವಿಜಯ್ ಮತ್ತು ತ್ರಿಷಾ ಮುಖ್ಯ ಭೂಮಿಕೆಯಲ್ಲಿ ಮಿಂಚಿದ್ದರು. ಪೇರರಸು ನಿರ್ದೇಶನದ ಈ ಸಿನಿಮಾ ತಂಗಿಯ ಮೇಲಿನ ಅಣ್ಣನ ಬಾಂಧವ್ಯದ ಕಥೆಯನ್ನು ಹೊಂದಿತ್ತು. ಅಣ್ಣ ತಂಗಿಯಂದಿರ ಪಾತ್ರಗಳು ಮತ್ತು ಮಾಸ್ ಆಕ್ಷನ್ ದೃಶ್ಯಗಳು ಪ್ರೇಕ್ಷಕರನ್ನು ಅಪಾರವಾಗಿ ರಂಜಿಸಿದ್ದವು. ಆಗಿನ ಕಾಲಕ್ಕೆ ಈ ಚಿತ್ರವು ಸುಮಾರು 32 ಕೋಟಿ ರೂಪಾಯಿ ಗಳಿಸಿ ಸೂಪರ್ ಹಿಟ್ ಎನಿಸಿಕೊಂಡಿತ್ತು.

ಇನ್ನೊಂದೆಡೆ ಜೇಸನ್ ಸಂಜಯ್ ನಟನಾಗುವ ಬದಲು ನಿರ್ದೇಶಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಹೀಗಾಗಿ ಅವರ ಮೊದಲ ಚಿತ್ರ ‘ಸಿಗ್ಮಾ’ ಮೇಲೆ ಭಾರಿ ನಿರೀಕ್ಷೆ ವ್ಯಕ್ತವಾಗಿದೆ. ಸಿನಿಮಾದ ಕಥೆಯ ವಿವರಗಳನ್ನು ಚಿತ್ರತಂಡ ಗುಪ್ತವಾಗಿಟ್ಟಿದೆ. ಆದಾಗ್ಯೂ ಇದೊಂದು ಸಾಹಸಮಯ ನಿಧಿ ಶೋಧ ಮತ್ತು ಕಾಮಿಡಿ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸಿನಿಮಾ ವೇದಿಕೆಯಲ್ಲಿ ರಾಜಕೀಯ ಸದ್ದು; ‘ಟಿವಿಕೆ’ ಜಪಕ್ಕೆ ಪ್ರತಿಕ್ರಿಯಿಸಿದ ಜೇಸನ್ ಸಂಜಯ್

ಪ್ರಸ್ತುತ ಜೇಸನ್ ಸಂಜಯ್ ತಮ್ಮ ಮೊದಲ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯಸಿಯಾಗಿದ್ದಾರೆ. ಚಿತ್ರದ ಯಶಸ್ಸಿನ ಮೇಲೆ ತಮ್ಮ ಪೂರ್ಣ ಗಮನ ನೆಟ್ಟಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ನಂತರವಷ್ಟೇ ಮುಂದಿನ ನಿರ್ದೇಶನ ಅಥವಾ ನಟನೆಯ ಬಗ್ಗೆ ಯೋಚಿಸುವುದಾಗಿ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳ ಬಾಕ್ಸ್ ಆಫೀಸ್ ಕದನ ತೀವ್ರ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ
ರವಿ ಸಿಂಹ ರಾಶಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಸಿಂಹ ರಾಶಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ
ಮಲ್ಲತ್ತಹಳ್ಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ
ಚೆನ್ನೈನಲ್ಲಿ 12,000 ಶಂಖಗಳಿಂದ ಸಿದ್ಧವಾಯ್ತು ಗಣೇಶನ ಮೂರ್ತಿ!
ಚೆನ್ನೈನಲ್ಲಿ 12,000 ಶಂಖಗಳಿಂದ ಸಿದ್ಧವಾಯ್ತು ಗಣೇಶನ ಮೂರ್ತಿ!
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್