AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ, ರಾಜಕಾರಣಿ ವಿಜಯ್​ಕಾಂತ್ ಆಸ್ಪತ್ರೆಗೆ ದಾಖಲು

Vijayakanth: ತಮಿಳು ಚಿತ್ರರಂಗದ ಹಿರಿಯ ನಾಯಕ ನಟ ಹಾಗೂ ರಾಜಕಾರಣಿ ವಿಜಯ್​ಕಾಂತ್ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರಿಯ ನಟ, ರಾಜಕಾರಣಿ ವಿಜಯ್​ಕಾಂತ್ ಆಸ್ಪತ್ರೆಗೆ ದಾಖಲು
ಮಂಜುನಾಥ ಸಿ.
|

Updated on: Nov 20, 2023 | 6:21 PM

Share

ತಮಿಳುನಾಡಿನ (Tamil Nadu) ಹಿರಿಯ ನಟ ಹಾಗೂ ರಾಜಕಾರಣಿ ವಿಜಯ್​ಕಾಂತ್ ಮೂರು ದಿನಗಳ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದು, ದಿನೇ-ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ವರದಿಗಳು ಕೇಳಿ ಬರುತ್ತಿದ್ದು, ಅಭಿಮಾನಿಗಳು, ಬೆಂಬಲಿಗರು ಆತಂಕಿತರಾಗಿದ್ದಾರೆ. ಕೆಳದ ಕೆಲ ವರ್ಷಗಳಿಂದಲೂ ಒಂದರ ಹಿಂದೊಂದು ಆರೋಗ್ಯ ಸಮಸ್ಯೆಗೆ ವಿಜಯ್​ಕಾಂತ್ ಗುರಿಯಾಗುತ್ತಲೇ ಇದ್ದಾರೆ. ಈ ಬಾರಿ ಆರೋಗ್ಯ ತುಸು ಹೆಚ್ಚೇ ಹದಗೆಟ್ಟಿದೆ ಎನ್ನಲಾಗುತ್ತಿದೆ.

ವಿಜಯ್​ಕಾಂತ್ ಅವರಗೆ 71 ವರ್ಷ ವಯಸ್ಸಾಗಿದೆ. ಇತ್ತೀಚೆಗೆ ಕೆಮ್ಮು ಹಾಗೂ ಜ್ವರದಿಂದ ಬಳಲಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯೊಂದಕ್ಕೆ ವಿಜಯ್​ಕಾಂತ್ ಅವರನ್ನು ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗಿನಿಂದಲೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ ಎನ್ನಲಾಗುತ್ತಿದೆ. ಅವರ ಅಭಿಮಾನಿಗಳು, ಬೆಂಬಲಿಗರು ವಿಜಯ್​ಕಾಂತ್ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ವಿಜಯ್​ಕಾಂತ್, ತಮಿಳು ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದ ನಟ. ಸುಮಾರು 150 ಸಿನಿಮಾಗಳಿಗೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 2005ರಲ್ಲಿ ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ ಹೆಸರಿನ ತಮ್ಮದೇ ರಾಜಕೀಯ ಪಕ್ಷವನ್ನೂ ಸಹ ಸ್ಥಾಪಿಸಿ, ರಾಜಕೀಯಕ್ಕೆ ಧುಮುಕಿದ ವಿಜಯ್​ಕಾತ್ 2011ರಿಂದ 2016 ರ ವರೆಗೆ ತಮಿಳುನಾಡು ವಿಧಾನಸಭೆ ವಿರೋಧ ಪಕ್ಷ ನಾಯಕನಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:Vijaykanth: ಖ್ಯಾತ ನಟ ವಿಜಯ್​ಕಾಂತ್ ಅವರ ಮೂರು ಬೆರಳು ಕತ್ತರಿಸಿದ ವೈದ್ಯರು..!

ವಿಜಯ್​ಕಾಂತ್ ಆರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ತಂದಿದ್ದು, ತಮ್ಮ ನಾಯಕ ಬೇಗನೇ ಗುಣಮುಖವಾಗಲೆಂದು ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ನೀಡಿರುವ ಮಾಹಿತಿಯಂತೆ ವಿಜಯ್​ಕಾಂತ್​ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಮ್ಮು ನಿಯಂತ್ರಣಕ್ಕೆ ಬರುತ್ತಿಲ್ಲ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಅವರನ್ನು ಕಾಡುತ್ತಿದೆ. ಆಸ್ಪತ್ರೆ ಆಡಳಿತ ಹೇಳಿರುಂತೆ ವಿಜಯ್​ಕಾಂತ್ ಶೀಘ್ರವೇ ಗುಣಮುಖವಾಗಲಿದ್ದಾರೆ.

ವಿಜಯ್​ಕಾಂತ್, 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜೊತೆಗೆ, ಎರಡು ಭಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ ಜೊತೆಗೆ ತಮಿಳುನಾಡು ವಿಧಾನಸಭೆ ವಿಪಕ್ಷ ನಾಯಕನಾಗಿಯೂ ಕೆಲಸ ಮಾಡಿದ್ದಾರೆ. ತಮಿಳುನಾಡು ರಾಜಕೀಯದಲ್ಲಿ ವಿಜಯ್​ಕಾಂತ್ ಪಕ್ಷಕ್ಕೆ ಅದರದ್ದೇ ಆದ ಪ್ರಮುಖ ಸ್ಥಾನವಿದೆ. ವಿಜಯ್​ಕಾಂತ್​ರ ಪಕ್ಷವು ಕೆಲವು ಚುನಾವಣೆಗಳಲ್ಲಿ ನಿರ್ಣಾಯಕ ಸ್ಥಾನವನ್ನು ವಹಿಸಿರುವ ಉದಾಹರಣೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!