AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ, ರಾಜಕಾರಣಿ ವಿಜಯ್​ಕಾಂತ್ ಆಸ್ಪತ್ರೆಗೆ ದಾಖಲು

Vijayakanth: ತಮಿಳು ಚಿತ್ರರಂಗದ ಹಿರಿಯ ನಾಯಕ ನಟ ಹಾಗೂ ರಾಜಕಾರಣಿ ವಿಜಯ್​ಕಾಂತ್ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರಿಯ ನಟ, ರಾಜಕಾರಣಿ ವಿಜಯ್​ಕಾಂತ್ ಆಸ್ಪತ್ರೆಗೆ ದಾಖಲು
ಮಂಜುನಾಥ ಸಿ.
|

Updated on: Nov 20, 2023 | 6:21 PM

Share

ತಮಿಳುನಾಡಿನ (Tamil Nadu) ಹಿರಿಯ ನಟ ಹಾಗೂ ರಾಜಕಾರಣಿ ವಿಜಯ್​ಕಾಂತ್ ಮೂರು ದಿನಗಳ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದು, ದಿನೇ-ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ವರದಿಗಳು ಕೇಳಿ ಬರುತ್ತಿದ್ದು, ಅಭಿಮಾನಿಗಳು, ಬೆಂಬಲಿಗರು ಆತಂಕಿತರಾಗಿದ್ದಾರೆ. ಕೆಳದ ಕೆಲ ವರ್ಷಗಳಿಂದಲೂ ಒಂದರ ಹಿಂದೊಂದು ಆರೋಗ್ಯ ಸಮಸ್ಯೆಗೆ ವಿಜಯ್​ಕಾಂತ್ ಗುರಿಯಾಗುತ್ತಲೇ ಇದ್ದಾರೆ. ಈ ಬಾರಿ ಆರೋಗ್ಯ ತುಸು ಹೆಚ್ಚೇ ಹದಗೆಟ್ಟಿದೆ ಎನ್ನಲಾಗುತ್ತಿದೆ.

ವಿಜಯ್​ಕಾಂತ್ ಅವರಗೆ 71 ವರ್ಷ ವಯಸ್ಸಾಗಿದೆ. ಇತ್ತೀಚೆಗೆ ಕೆಮ್ಮು ಹಾಗೂ ಜ್ವರದಿಂದ ಬಳಲಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯೊಂದಕ್ಕೆ ವಿಜಯ್​ಕಾಂತ್ ಅವರನ್ನು ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗಿನಿಂದಲೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ ಎನ್ನಲಾಗುತ್ತಿದೆ. ಅವರ ಅಭಿಮಾನಿಗಳು, ಬೆಂಬಲಿಗರು ವಿಜಯ್​ಕಾಂತ್ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ವಿಜಯ್​ಕಾಂತ್, ತಮಿಳು ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದ ನಟ. ಸುಮಾರು 150 ಸಿನಿಮಾಗಳಿಗೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 2005ರಲ್ಲಿ ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ ಹೆಸರಿನ ತಮ್ಮದೇ ರಾಜಕೀಯ ಪಕ್ಷವನ್ನೂ ಸಹ ಸ್ಥಾಪಿಸಿ, ರಾಜಕೀಯಕ್ಕೆ ಧುಮುಕಿದ ವಿಜಯ್​ಕಾತ್ 2011ರಿಂದ 2016 ರ ವರೆಗೆ ತಮಿಳುನಾಡು ವಿಧಾನಸಭೆ ವಿರೋಧ ಪಕ್ಷ ನಾಯಕನಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:Vijaykanth: ಖ್ಯಾತ ನಟ ವಿಜಯ್​ಕಾಂತ್ ಅವರ ಮೂರು ಬೆರಳು ಕತ್ತರಿಸಿದ ವೈದ್ಯರು..!

ವಿಜಯ್​ಕಾಂತ್ ಆರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ತಂದಿದ್ದು, ತಮ್ಮ ನಾಯಕ ಬೇಗನೇ ಗುಣಮುಖವಾಗಲೆಂದು ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ನೀಡಿರುವ ಮಾಹಿತಿಯಂತೆ ವಿಜಯ್​ಕಾಂತ್​ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಮ್ಮು ನಿಯಂತ್ರಣಕ್ಕೆ ಬರುತ್ತಿಲ್ಲ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಅವರನ್ನು ಕಾಡುತ್ತಿದೆ. ಆಸ್ಪತ್ರೆ ಆಡಳಿತ ಹೇಳಿರುಂತೆ ವಿಜಯ್​ಕಾಂತ್ ಶೀಘ್ರವೇ ಗುಣಮುಖವಾಗಲಿದ್ದಾರೆ.

ವಿಜಯ್​ಕಾಂತ್, 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜೊತೆಗೆ, ಎರಡು ಭಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ ಜೊತೆಗೆ ತಮಿಳುನಾಡು ವಿಧಾನಸಭೆ ವಿಪಕ್ಷ ನಾಯಕನಾಗಿಯೂ ಕೆಲಸ ಮಾಡಿದ್ದಾರೆ. ತಮಿಳುನಾಡು ರಾಜಕೀಯದಲ್ಲಿ ವಿಜಯ್​ಕಾಂತ್ ಪಕ್ಷಕ್ಕೆ ಅದರದ್ದೇ ಆದ ಪ್ರಮುಖ ಸ್ಥಾನವಿದೆ. ವಿಜಯ್​ಕಾಂತ್​ರ ಪಕ್ಷವು ಕೆಲವು ಚುನಾವಣೆಗಳಲ್ಲಿ ನಿರ್ಣಾಯಕ ಸ್ಥಾನವನ್ನು ವಹಿಸಿರುವ ಉದಾಹರಣೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ