AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿ, ವಿಜಯಲಕ್ಷಿ ದರ್ಶನ್ ಜೊತೆ ಪ್ರತ್ಯಕ್ಷ

Vijayalakshmi Darshan: ವಿಜಯಲಕ್ಷ್ಮಿ ಅವರು ಇತ್ತೀಚೆಗಷ್ಟೆ ಮಂಗಳೂರಿಗೆ ತೆರಳು ದೈವಾರಾಧನೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿಯೊಬ್ಬ ಮಂಗಳೂರಿನಲ್ಲಿ ವಿಜಯಲಕ್ಷ್ಮಿ ಅವರನ್ನು ಸ್ವಾಗತಿಸಿದ್ದು, ಈ ಕುರಿತಾದ ವಿಡಿಯೋ ಹರಿದಾಡುತ್ತಿದೆ. ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿಗೆ ನೊಟೀಸ್ ನೀಡಲು ಪೊಲೀಸರು ಹುಡುಕಾಟ ನಡೆಸಿದ್ದರು.

ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿ, ವಿಜಯಲಕ್ಷಿ ದರ್ಶನ್ ಜೊತೆ ಪ್ರತ್ಯಕ್ಷ
Gaurav Shetty
ಮಂಜುನಾಥ ಸಿ.
|

Updated on:Aug 23, 2026 | 5:13 PM

Share

ಮುಖ್ಯಾಂಶಗಳು

  • ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಟ್ವಿಸ್ಟ್
  • ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಗೌರವ್ ಶೆಟ್ಟಿ
  • ಗೌರವ್ ಶೆಟ್ಟಿ ಈಗ ವಿಜಯಲಕ್ಷ್ಮಿ ದರ್ಶನ್ ಜೊತೆ ಕಾಣಿಸಿದ್ದಾನೆ

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಒಬ್ಬರನ್ನು ಬಂಧಿಸಿದ್ದು, ಕೆಲ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಟ್ಟಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದ. ವಿಜಯಲಕ್ಷ್ಮಿ ಅವರು ಇತ್ತೀಚೆಗಷ್ಟೆ ಮಂಗಳೂರಿಗೆ ತೆರಳು ದೈವಾರಾಧನೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿಯೊಬ್ಬ ಮಂಗಳೂರಿನಲ್ಲಿ ವಿಜಯಲಕ್ಷ್ಮಿ ಅವರನ್ನು ಸ್ವಾಗತಿಸಿದ್ದು, ಈ ಕುರಿತಾದ ವಿಡಿಯೋ ಹರಿದಾಡುತ್ತಿದೆ.

ಸಾಕ್ಷ್ಯಗಳಿಗೆ ಬೆದರಿಕೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಈಗಾಗಲೇ ಪುನೀತ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದೇ ಪ್ರಕರಣದಲ್ಲಿ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಅವರುಗಳು ಸಹ ಆರೋಪಿಗಳಾಗಿದ್ದು. ಈ ಇಬ್ಬರಿಗೂ ಪೊಲೀಸರು ನೊಟೀಸ್ ನೀಡುವ ಯತ್ನ ಮಾಡಿದರೂ ಸಾಧ್ಯವಾಗಿರಲಿಲ್ಲ. ಈ ಆರೋಪಿಗಳಿಬ್ಬರೂ ಪೊಲೀಸರ ಸಂಪರ್ಕಕ್ಕೆ ಸಿಗದೆ ತಲೆ ಮರೆಸಿಕೊಂಡಿದ್ದರು. ಆದರೆ ಇದೀಗ ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ದರ್ಶನ್ ಅವರೊಟ್ಟಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾನೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿ? ಕೋರ್ಟ್​​ನಲ್ಲಿ ನಡೆದಿದ್ದೇನು?

ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ದರ್ಶನ್ ಅವರು ಮಂಗಳೂರಿಗೆ ಹೋಗಿದ್ದರು. ಆಗ ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ಮತ್ತು ಅವರ ಗೆಳತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾತಗ ಮಾಡಿದ್ದಾನೆ. ಮಂಗಳೂರಿನ ಶ್ರೀ ಮಂದಾರ ಧರ್ಮ ಚಾವಡಿಗೆ ವಿಜಯಲಕ್ಷ್ಮಿ ತೆರಳಿದ್ದರು, ಈ ವೇಳೆ ಗೌರವ್ ಶೆಟ್ಟಿ ಸಹ ಜೊತೆಯಲ್ಲಿದ್ದ ಎನ್ನಲಾಗಿದೆ. ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ಅವರನ್ನು ವಿಮಾನ ನಿಲ್ದಾಣದ ಹೊರಗೆ ಸ್ವಾಗತ ಮಾಡಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಪುನೀತ್, ಸುಹಾಸ್ ಮತ್ತು ವೇಣು ಎಂಬುವರನ್ನು ಬಂಧಿಸಿದ್ದರು. ಈ ಪುನೀತ್ ಜೊತೆಗೆ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಸಂಪರ್ಕದಲ್ಲಿದ್ದಿದ್ದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗವಾಗಿತ್ತು. ಪುನೀತ್ ಬಂಧನವಾದ ಬಳಿಕ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಮೊಬೈಲ್​​ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಪೊಲೀಸರ ಸಂಪರ್ಕಕ್ಕೆ ಸಿಗದೆ ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Sun, 23 August 26

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ