ಕೇವಲ 3 ವಾರಗಳಲ್ಲಿ ಕಥೆ ಬರೆಯೋ ವಿಜಯೇಂದ್ರ ಪ್ರಸಾದ್ ‘SSMB 29’ ಸ್ಟೋರಿಗೆ ತೆಗೆದುಕೊಂಡಿದ್ದು ಎಷ್ಟು ವರ್ಷ?

‘SSMB 29’ ಅಡ್ವೆಂಚರ್ ಡ್ರಾಮಾ ಎಂದು ರಾಜಮೌಳಿ ಈ ಮೊದಲೇ ಮಾಹಿತಿ ನೀಡಿದ್ದಾರೆ. ಸದ್ಯ ಸಿನಿಮಾಗೆ ಬೇಕಿರೋ ಅಗತ್ಯ ಸಿದ್ಧತೆಗಳನ್ನು ರಾಜಮೌಳಿ ಮಾಡಿಕೊಳ್ಳುತ್ತಿದ್ದಾರೆ. ಈಗ ಚಿತ್ರಕ್ಕೆ ಕಥೆ ಬರೆದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಒಂದು ಅಚ್ಚರಿಯ ಮಾಹಿತಿ ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಕೇವಲ 3 ವಾರಗಳಲ್ಲಿ ಕಥೆ ಬರೆಯೋ ವಿಜಯೇಂದ್ರ ಪ್ರಸಾದ್ ‘SSMB 29’ ಸ್ಟೋರಿಗೆ ತೆಗೆದುಕೊಂಡಿದ್ದು ಎಷ್ಟು ವರ್ಷ?
ವಿಜಯೇಂದ್ರ ಪ್ರಸಾದ್ ‘SSMB 29’ ಸ್ಟೋರಿಗೆ ತೆಗೆದುಕೊಂಡಿದ್ದು ಎಷ್ಟು ವರ್ಷ
Follow us
|

Updated on: Oct 10, 2024 | 11:53 AM

ಎಸ್​ಎಸ್​ ರಾಜಮೌಳಿ ನಿರ್ದೇಶನದ, ಮಹೇಶ್ ಬಾಬು ನಟನೆಯ ‘SSMB 29’ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ‘SSMB 29’ ಅನ್ನೋದು ​ ತಾತ್ಕಾಲಿಕ ಟೈಟಲ್ ಆಗಿದ್ದು, ಸಿನಿಮಾಗೆ ಯಾವ ಶೀರ್ಷಿಕೆ ಇಡಲಾಗುತ್ತದೆ ಎಂಬ ಕುತೂಹಲ ಮೂಡಿದೆ. ಈ ಮಧ್ಯೆ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಸಿನಿಮಾದ ಕಥೆಯ ಬಗ್ಗೆ ದೊಡ್ಡ ಹಿಂಟ್ ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಇದು ಅಡ್ವೆಂಚರ್ ಡ್ರಾಮಾ ಎಂದು ರಾಜಮೌಳಿ ಈ ಮೊದಲೇ ಮಾಹಿತಿ ನೀಡಿದ್ದಾರೆ. ಸದ್ಯ ಸಿನಿಮಾಗೆ ಬೇಕಿರೋ ಅಗತ್ಯ ಸಿದ್ಧತೆಗಳನ್ನು ರಾಜಮೌಳಿ ಮಾಡಿಕೊಳ್ಳುತ್ತಿದ್ದಾರೆ. ಈಗ ಚಿತ್ರಕ್ಕೆ ಕಥೆ ಬರೆದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಒಂದು ಅಚ್ಚರಿಯ ಮಾಹಿತಿ ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಸಾಮಾನ್ಯವಾಗಿ ವಿಜಯೇಂದ್ರ ಪ್ರಸಾದ್ ಅವರು ಒಂದು ಕಥೆಯನ್ನು ತೆಗೆದುಕೊಂಡರೆ 3-4 ವಾರಗಳಲ್ಲಿ ಅಂತಿಮಗೊಳಿಸುತ್ತಾರೆ. ಅಂದರೆ, ಒಂದು ಕಥೆ ಸಿದ್ಧಪಡಿಸಲು ತೆಗೆದುಕೊಳ್ಳೋದು ಕೇವಲ ಒಂದು ತಿಂಗಳು. ಆದರೆ, ಈ ಚಿತ್ರದ ಕಥೆ ಸಿದ್ಧಪಡಿಸಲು ವಿಜಯೇಂದ್ರ ಪ್ರಸಾದ್ ತೆಗೆದುಕೊಂಡಿದ್ದು ಬರೋಬ್ಬರಿ ಎರಡು ವರ್ಷಗಳು!

ಕಥೆಯನ್ನು ಡೆವಲಪ್ ಮಾಡಲು ಇಷ್ಟು ದೀರ್ಘ ಸಮಯ ತೆಗೆದುಕೊಂಡಿದೆ ಎಂದರೆ ಸಿನಿಮಾ ಯಾವ ರೀತಿಯಲ್ಲಿ ಇರಬಹುದು ಎಂಬುದನ್ನು ನೀವು ಊಹಿಸಬಹುದು. ಈ ಮೊದಲು ವಿಜಯೇಂದ್ರ ಪ್ರಸಾದ್ ಅವರು ‘ಬಾಹುಬಲಿ’, ‘ಈಗ’, ‘ಆರ್​ಆರ್​ಆರ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಕಥೆ ಬರೆದಿದ್ದಾರೆ. ಈ ಕಾರಣಕ್ಕೆ ಅವರಿಗೆ ಸಿನಿಮಾದ ಕಥೆಯ ಬಗ್ಗೆ ನಿರೀಕ್ಷೆ ಮೂಡಿದೆ.

‘SSMB 29’ ಚಿತ್ರದ ಶೂಟಿಂಗ್ 2025ರ ಜನವರಿಯಲ್ಲಿ ಆರಂಭ ಆಗುವ ಸಾಧ್ಯತೆ ಇದೆ. 2026ರಲ್ಲಿ ಸಿನಿಮಾನ ನಿರೀಕ್ಷಿಸಬಹುದು. ಇದು ಹೊಸ ಲೋಕವನ್ನೇ ಸೃಷ್ಟಿ ಮಾಡಲಿದೆ ಎನ್ನಲಾಗಿದೆ. ಸಿನಿಮಾದಿಂದ ಸಿನಿಮಾಗೆ ರಾಜಮೌಳಿ ಸುಮಾರು 4 ವರ್ಷಗಳನ್ನು ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: ‘ರಾಜಮೌಳಿ ಬೇಡ, ಈ ನಿರ್ದೇಶಕ ಬೇಕು’; ರಣಬೀರ್ ಕಪೂರ್ ಅಚ್ಚರಿಯ ಆಯ್ಕೆ 

ರಾಜಮೌಳಿ ಅವರು ಈವರೆಗೆ ಪಾತ್ರಗಳನ್ನು ರಿವೀಲ್ ಮಾಡಿಲ್ಲ. ಈ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಾರೆ ಎಂಬುದಷ್ಟೇ ರಿವೀಲ್ ಆಗಿದೆ. ಅಮೇಜಾನ್ ಫಾರೆಸ್ಟ್​​ನಲ್ಲಿ ಚಿತ್ರದ ಕಥೆ ಸಾಗಲಿದೆಯಂತೆ. ಈ ಚಿತ್ರಕ್ಕಾಗಿ  ಮಹೇಶ್ ಬಾಬು ಉದ್ದ ಕೂದಲನ್ನು ಬಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್