Kangana Ranaut: ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿ ಕಣ್ಣೀರು ಹಾಕಿದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್

ವಿಜಯೇಂದ್ರ ಪ್ರಸಾದ್ ಅವರು ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಿದರು ಎಂಬುದನ್ನು ಕಂಗನಾ ವಿವರಿಸಿದ್ದಾರೆ.

Kangana Ranaut: ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿ ಕಣ್ಣೀರು ಹಾಕಿದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್
ವಿಜಯೇಂದ್ರ ಪ್ರಸಾದ್-ಕಂಗನಾ
Follow us
|

Updated on:May 19, 2023 | 8:04 AM

ನಟಿ ಕಂಗನಾ ರಣಾವತ್ (Kangana Ranaut) ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಗನಾ ರಣಾವತ್ ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ವಿಶೇಷ ಎಂದರೆ ರಾಜಮೌಳಿ (Rajamouli) ತಂದೆ, ಕಥೆ ಬರಹಗಾರ ವಿಜಯೇಂದ್ರ ಪ್ರಸಾದ್ ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಇಷ್ಟವಾಗಿದೆ. ಅಷ್ಟೇ ಅಲ್ಲ ಅನೇಕ ದೃಶ್ಯಗಳನ್ನು ನೋಡಿ ಅವರು ಕಣ್ಣೀರು ಹಾಕಿದ್ದಾರೆ. ಈ ವಿಚಾರವನ್ನು ಸ್ವತಃ ಕಂಗನಾ ರಣಾವತ್ ಬಿಚ್ಚಿಟ್ಟಿದ್ದಾರೆ.

ವಿಜಯೇಂದ್ರ ಪ್ರಸಾದ್ ಅವರು ಹಲವು ಸಿನಿಮಾಗಳಿಗೆ ಕಥೆ ಬರೆದಿದ್ದಾರೆ. ‘ಬಾಹುಬಲಿ’, ‘ಬಜರಂಗಿ ಭಾಯಿಜಾನ್’ ಸೇರಿ ಅನೇಕ ಹಿಟ್​ ಸಿನಿಮಾಗಳಿಗೆ ಕಥೆ ನೀಡಿದ್ದು ವಿಜಯೇಂದ್ರ ಪ್ರಸಾದ್ ಅವರೇ. ಅವರ ಕಲ್ಪನೆಗೆ ಮತ್ತೊಬ್ಬರು ಸಾಟಿಯಿಲ್ಲ. ಅವರು ಈಗ ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಿದರು ಎಂಬುದನ್ನು ಕಂಗನಾ ವಿವರಿಸಿದ್ದಾರೆ.

ವಿಜಯೇಂದ್ರ ಪ್ರಸಾದ್ ಜೊತೆ ಇರುವ ಫೋಟೋವನ್ನು ಹಂಚಿಕೊಂಡಿರುವ ಕಂಗನಾ, ‘ಸಂಪೂರ್ಣ ಎಡಿಟಿಂಗ್ ಮುಗಿದ ನಂತರ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದ ಮೊದಲ ವ್ಯಕ್ತಿ ವಿಜಯೇಂದ್ರ ಪ್ರಸಾದ್. ಅವರು ದೃಶ್ಯಗಳನ್ನು ನೋಡುವಾಗ ಹಲವಾರು ಬಾರಿ ಕಣ್ಣನ್ನು ಒರೆಸಿಕೊಂಡರು. ಸಿನಿಮಾ ನೋಡಿದ ನಂತರ ‘ನಾನು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇನೆ’ ಎಂದು ನನ್ನ ಬಗ್ಗೆ ಮೆಚ್ಚುಗೆ ಸೂಚಿಸಿದರು’ ಎಂಬುದಾಗಿ ಕಂಗನಾ ಹೇಳಿದ್ದಾರೆ.

‘ನನ್ನ ಎಲ್ಲಾ ಗುರುಗಳ ಮತ್ತು ಹಿತೈಷಿಗಳ ಆಶೀರ್ವಾದದೊಂದಿಗೆ ಎಮರ್ಜೆನ್ಸಿ ಚಿತ್ರ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಬರಲು ಸಿದ್ಧವಾಗಿದೆ. ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ’ ಎಂದು ಕಂಗನಾ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಪರ ಮಾತನಾಡಿದ್ದಕ್ಕೆ ಕಂಗನಾಗೆ 40 ಕೋಟಿ ರೂಪಾಯಿ ನಷ್ಟ; ಆದರೂ ಇಲ್ಲ ಬೇಸರ

ಕಂಗನಾ ನಿರ್ದೇಶನದ ಮೊದಲ ಸೋಲೋ ಡೈರೆಕ್ಷನ್ ಸಿನಿಮಾ ‘ಎಮರ್ಜೆನ್ಸಿ’. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಂಗನಾ ನಿರ್ಮಾಪಕಿ ಕೂಡ ಹೌದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:28 am, Fri, 19 May 23

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ