Kangana Ranaut: ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿ ಕಣ್ಣೀರು ಹಾಕಿದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್

ವಿಜಯೇಂದ್ರ ಪ್ರಸಾದ್ ಅವರು ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಿದರು ಎಂಬುದನ್ನು ಕಂಗನಾ ವಿವರಿಸಿದ್ದಾರೆ.

Kangana Ranaut: ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿ ಕಣ್ಣೀರು ಹಾಕಿದ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್
ವಿಜಯೇಂದ್ರ ಪ್ರಸಾದ್-ಕಂಗನಾ
Follow us
|

Updated on:May 19, 2023 | 8:04 AM

ನಟಿ ಕಂಗನಾ ರಣಾವತ್ (Kangana Ranaut) ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಗನಾ ರಣಾವತ್ ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ವಿಶೇಷ ಎಂದರೆ ರಾಜಮೌಳಿ (Rajamouli) ತಂದೆ, ಕಥೆ ಬರಹಗಾರ ವಿಜಯೇಂದ್ರ ಪ್ರಸಾದ್ ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಇಷ್ಟವಾಗಿದೆ. ಅಷ್ಟೇ ಅಲ್ಲ ಅನೇಕ ದೃಶ್ಯಗಳನ್ನು ನೋಡಿ ಅವರು ಕಣ್ಣೀರು ಹಾಕಿದ್ದಾರೆ. ಈ ವಿಚಾರವನ್ನು ಸ್ವತಃ ಕಂಗನಾ ರಣಾವತ್ ಬಿಚ್ಚಿಟ್ಟಿದ್ದಾರೆ.

ವಿಜಯೇಂದ್ರ ಪ್ರಸಾದ್ ಅವರು ಹಲವು ಸಿನಿಮಾಗಳಿಗೆ ಕಥೆ ಬರೆದಿದ್ದಾರೆ. ‘ಬಾಹುಬಲಿ’, ‘ಬಜರಂಗಿ ಭಾಯಿಜಾನ್’ ಸೇರಿ ಅನೇಕ ಹಿಟ್​ ಸಿನಿಮಾಗಳಿಗೆ ಕಥೆ ನೀಡಿದ್ದು ವಿಜಯೇಂದ್ರ ಪ್ರಸಾದ್ ಅವರೇ. ಅವರ ಕಲ್ಪನೆಗೆ ಮತ್ತೊಬ್ಬರು ಸಾಟಿಯಿಲ್ಲ. ಅವರು ಈಗ ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಿದರು ಎಂಬುದನ್ನು ಕಂಗನಾ ವಿವರಿಸಿದ್ದಾರೆ.

ವಿಜಯೇಂದ್ರ ಪ್ರಸಾದ್ ಜೊತೆ ಇರುವ ಫೋಟೋವನ್ನು ಹಂಚಿಕೊಂಡಿರುವ ಕಂಗನಾ, ‘ಸಂಪೂರ್ಣ ಎಡಿಟಿಂಗ್ ಮುಗಿದ ನಂತರ ‘ಎಮರ್ಜೆನ್ಸಿ’ ಸಿನಿಮಾ ವೀಕ್ಷಿಸಿದ ಮೊದಲ ವ್ಯಕ್ತಿ ವಿಜಯೇಂದ್ರ ಪ್ರಸಾದ್. ಅವರು ದೃಶ್ಯಗಳನ್ನು ನೋಡುವಾಗ ಹಲವಾರು ಬಾರಿ ಕಣ್ಣನ್ನು ಒರೆಸಿಕೊಂಡರು. ಸಿನಿಮಾ ನೋಡಿದ ನಂತರ ‘ನಾನು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇನೆ’ ಎಂದು ನನ್ನ ಬಗ್ಗೆ ಮೆಚ್ಚುಗೆ ಸೂಚಿಸಿದರು’ ಎಂಬುದಾಗಿ ಕಂಗನಾ ಹೇಳಿದ್ದಾರೆ.

‘ನನ್ನ ಎಲ್ಲಾ ಗುರುಗಳ ಮತ್ತು ಹಿತೈಷಿಗಳ ಆಶೀರ್ವಾದದೊಂದಿಗೆ ಎಮರ್ಜೆನ್ಸಿ ಚಿತ್ರ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಬರಲು ಸಿದ್ಧವಾಗಿದೆ. ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ’ ಎಂದು ಕಂಗನಾ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಪರ ಮಾತನಾಡಿದ್ದಕ್ಕೆ ಕಂಗನಾಗೆ 40 ಕೋಟಿ ರೂಪಾಯಿ ನಷ್ಟ; ಆದರೂ ಇಲ್ಲ ಬೇಸರ

ಕಂಗನಾ ನಿರ್ದೇಶನದ ಮೊದಲ ಸೋಲೋ ಡೈರೆಕ್ಷನ್ ಸಿನಿಮಾ ‘ಎಮರ್ಜೆನ್ಸಿ’. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಂಗನಾ ನಿರ್ಮಾಪಕಿ ಕೂಡ ಹೌದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:28 am, Fri, 19 May 23

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ