AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರ‍್ಯಾಲಿಗೆ ಬಂದವರೆಲ್ಲ ನಿಮಗೆ ವೋಟ್ ಮಾಡಲ್ಲ’; ದಳಪತಿ ವಿಜಯ್​ಗೆ ಕಮಲ್ ಹಾಸನ್ ಕಿವಿಮಾತು

ದಳಪತಿ ವಿಜಯ್ ಅವರು 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಅವರ ಬೃಹತ್ ರ‍್ಯಾಲಿಗಳಿಗೆ ಲಕ್ಷಾಂತರ ಜನರು ಸೇರುತ್ತಿದ್ದಾರೆ. ಆದರೆ, ಕಮಲ್ ಹಾಸನ್ ಅವರು ಈ ರ‍್ಯಾಲಿಗಳಲ್ಲಿ ಬರುವವರೆಲ್ಲರೂ ಮತದಾರರಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದು ವಿಜಯ್ ಅವರಿಗೆ ಮಾತ್ರವಲ್ಲ, ಎಲ್ಲ ರಾಜಕೀಯ ನಾಯಕರಿಗೂ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ರ‍್ಯಾಲಿಗೆ ಬಂದವರೆಲ್ಲ ನಿಮಗೆ ವೋಟ್ ಮಾಡಲ್ಲ’; ದಳಪತಿ ವಿಜಯ್​ಗೆ ಕಮಲ್ ಹಾಸನ್ ಕಿವಿಮಾತು
ವಿಜಯ್-ಕಮಲ್
ರಾಜೇಶ್ ದುಗ್ಗುಮನೆ
|

Updated on: Sep 22, 2025 | 12:00 PM

Share

ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಮ್’ ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸಲು ರೆಡಿ ಆಗಿದ್ದಾರೆ. 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ವಿವಿಧ ಕಡೆಗಳಲ್ಲಿ ರ‍್ಯಾಲಿ ಮಾಡುತ್ತಿದ್ದಾರೆ. ಈ ವೇಳೆ ಲಕ್ಷಾಂತರ ಜನರು ಸೇರುತ್ತಿದ್ದಾರೆ. ಇದರಿಂದ ವಿಜಯ್ ಚುನಾವಣೆಯಲ್ಲಿ ಗೆಲ್ಲೋದು ನಿಶ್ಚಿತ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ರ‍್ಯಾಲಿಗೆ ಬಂದವರೆಲ್ಲರೂ ನಿಮಗೆ ವೋಟ್ ಹಾಕುವುದಿಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ. ಇದು ವಿಜಯ್​ಗೆ ಮಾತ್ರವಲ್ಲ, ತಮಗೂ ಅನ್ವಯ ಆಗುತ್ತದೆ ಎಂದಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡುವಾಗ ವಿಜಯ್ ಹಮ್ಮಿಕೊಂಡಿದ್ದ ರ‍್ಯಾಲಿ ವಿಚಾರ ಬಂದಿದೆ. ಈ ವೇಳೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಇಡೀ ಸಮೂಹವು ವಿಜಯ್​ಗೆ ವೋಟ್ ಮಾಡೋದಿಲ್ಲ. ಅರ್ಥಾತ್, ಎಲ್ಲವೂ ಮತವಾಗಿ ಮಾರ್ಪಡುವುದಿಲ್ಲ. ಇದು ಎಲ್ಲಾ ನಾಯಕರಿಗೂ ಅನ್ವಯ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.

ಟಿವಿಕೆ ಮುಖ್ಯಸ್ಥ ವಿಜಯ್​ಗೂ ಈ ನಿಯಮ ಅನ್ವಯ ಆಗುತ್ತದೆಯೇ ಎಂದು ಕೇಳಲಾಯಿತು. ‘ಎಲ್ಲಾ ನಾಯಕರು ಎಂದು ನಾನು ಹೇಳಿರುವಾಗ, ವಿಜಯ್ ಅವರನ್ನು ಬಿಡಲು ಹೇಗೆ ಸಾಧ್ಯ? ನನ್ನನ್ನು ಸೇರಿದಂತೆ ದೇಶದ ಪ್ರತಿ ನಾಯಕನಿಗೂ ಇದು ಅನ್ವಯ ಆಗುತ್ತದೆ. ನೀವು ಜನರನ್ನು ಸೆಳೆಯಬಹುದು ಆದರೆ ಅದನ್ನು ಮತವಾಗಿ ಬದಲಾಯಿಸಲು ಸಾಧ್ಯವಿಲ್ಲ’ ಎಂದಿದ್ದಾರೆ. ‘ಸರಿಯಾದ ಹಾದಿಯಲ್ಲಿ ಹೋಗಿ. ಧೈರ್ಯದಿಂದ ಮುಂದುವರಿಯಿರಿ ಮತ್ತು ಜನರಿಗೆ ಒಳ್ಳೆಯದನ್ನು ಮಾಡಿ.  ಇದು ಎಲ್ಲಾ ನಾಯಕರಿಗೆ ನನ್ನ ಮನವಿ’ ಎಂದು ಹೇಳಿದ್ದಾರೆ ಕಮಲ್.

ಇದನ್ನೂ ಓದಿ
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ
Image
ಗಾಯಕ ಜುಬೀನ್ ಗಾರ್ಗ್ ಸಾಯಲು ಅಸಲಿ ಕಾರಣ ಏನು? ರಿವೀಲ್ ಮಾಡಿದ ಪತ್ನಿ
Image
‘ಲೋಕಃ’ ಸಿನಿಮಾ ಒಟಿಟಿ ರಿಲೀಸ್ ವಿಚಾರದಲ್ಲಿ ಪ್ರೇಕ್ಷಕರಿಗೆ ಬೇಸರದ ಸುದ್ದಿ
Image
ಬಾಲಿವುಡ್​ನಲ್ಲಿ ಗೆಲ್ಲೋ ಕನಸು ಕಂಡಿದ್ದ ಹರ್ಷಗೆ ಭಾರೀ ನಿರಾಸೆ

ಇದನ್ನೂ ಓದಿ: ದಳಪತಿ ವಿಜಯ್ ಸಮಾವೇಶಕ್ಕೆ ಸೇರಿದ ಜನರ ಸಂಖ್ಯೆ ನೋಡಿ; ಅಬ್ಬಬ್ಬಾ ಇಷ್ಟೊಂದಾ?

ಕಮಲ್ ಹಾಸನ್ ಹೇಳಿದ್ದು ಅಕ್ಷರಶಃ ಸತ್ಯ ಕೂಡ ಹೌದು. ಈ ಮೊದಲು ಚಿರಂಜೀವಿ ಅವರು ರಾಜಕೀಯ ಪಕ್ಷ ಸ್ಥಾಪಿಸಿ ದೊಡ್ಡ ಸಭೆ ಆಯೋಜನೆ ಮಾಡಿದಾಗ ಲಕ್ಷಾಂತರ ಜನರು ಬಂದಿದ್ದರು. ಆದರೆ, ಅವರು ಚುನಾವಣೆಯಲ್ಲಿ ಸೋತರು. ಆ ಬಳಿಕ ಅವರು ರಾಜಕೀಯ ತೊರೆದರು. ಹೀರೋ ಆಗಿ ಅಪಾರ ಜನಪ್ರಿಯತೆ ಪಡೆದಿದ್ದ ಪವನ್ ಕಲ್ಯಾಣ್ ಈ ಹಿಂದಿನ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಸೋತಿದ್ದರು. ಸ್ವತಃ ಕಮಲ್ ಹಾಸನ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ