VIDEO: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಪ್ರಾಣಾಪಾಯದಿಂದ ಪಾರಾದ ಬಾಲಿವುಡ್ ನಟಿ, ಖ್ಯಾತ ಉದ್ಯಮಿ

ಸಾಲು ಸಾಲು ಸ್ಪೋರ್ಟ್ಸ್​ಕಾರುಗಳು ರಸ್ತೆಯಲ್ಲಿ ಸಾಗುತ್ತಿದ್ದವು. ವಿಕಾಸ್ ಅವರು ಲ್ಯಾಂಬೋರ್ಗಿನಿ ಕಾರನ್ನು ಚಲಾಯಿಸುತ್ತಿದ್ದರು. ಓವರ್​ಟೇಕ್ ಮಾಡುವಾಗ ಎಡವಟ್ಟು ಸಂಭವಿಸಿದೆ. ವಿಕಾಸ್ ಇದ್ದ ಕಾರು ಪಲ್ಟಿ ಆಗಿ ರಸ್ತೆಯಿಂದ ಕೆಳಕ್ಕೆ ಬಿದ್ದಿದೆ. ಆದರೆ, ಇಬ್ಬರೂ ಸೇಫ್ ಆಗಿದ್ದಾರೆ.

VIDEO: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಪ್ರಾಣಾಪಾಯದಿಂದ ಪಾರಾದ ಬಾಲಿವುಡ್ ನಟಿ, ಖ್ಯಾತ ಉದ್ಯಮಿ
ವಿವೇಕ್-ಗಾಯತ್ರಿ
Follow us
|

Updated on: Oct 04, 2023 | 10:44 AM

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ವೇಳೆ ಮುಂಬೈನ ಉದ್ಯಮಿ ವಿಕಾಸ್ ಒಬೆರಾಯ್ (Vikas Oberoi) ಹಾಗೂ ಅವರ ಪತ್ನಿ, ಮಾಜಿ ನಟಿ ಗಾಯತ್ರಿ ಜೋಶಿ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಕಾರಿನಲ್ಲಿ ಇದ್ದ ಇಬ್ಬರು ಮೃತಪಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗಾಯತ್ರಿ ಜೋಶಿ ಅವರು 2004ರಲ್ಲಿ ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಸ್ವದೇಶ್’ ಚಿತ್ರದಲ್ಲಿ ನಟಿಸಿದರು. ಅವರು ಅಭಿನಯಿಸಿದ ಏಕೈಕ ಸಿನಿಮಾ ಇದು. ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಗಾಯತ್ರಿ 2005ರಲ್ಲಿ ವಿಕಾಸ್ ಅವರನ್ನು ವರಿಸಿದರು. ಆ ಬಳಿಕ ಚಿತ್ರರಂಗದಿಂದ ದೂರವೇ ಉಳಿದರು. ಈಗ ಅವರು ಪತಿಯ ಜೊತೆ ಇಟಲಿಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಸಾಲು ಸಾಲು ಸ್ಪೋರ್ಟ್ಸ್​ಕಾರುಗಳು ರಸ್ತೆಯಲ್ಲಿ ಸಾಗುತ್ತಿದ್ದವು. ವಿಕಾಸ್ ಅವರು ಲ್ಯಾಂಬೋರ್ಗಿನಿ ಕಾರನ್ನು ಚಲಾಯಿಸುತ್ತಿದ್ದರು. ಓವರ್​ಟೇಕ್ ಮಾಡುವಾಗ ಎಡವಟ್ಟು ಸಂಭವಿಸಿದೆ. ವಿಕಾಸ್ ಇದ್ದ ಕಾರು ಪಲ್ಟಿ ಆಗಿ ರಸ್ತೆಯಿಂದ ಕೆಳಕ್ಕೆ ಬಿದ್ದಿದೆ. ಆದರೆ, ಇಬ್ಬರೂ ಸೇಫ್ ಆಗಿದ್ದಾರೆ.

ಕಿರಿದಾದ ರಸ್ತೆಯಲ್ಲಿ ವಾಹನಗಳು ಸಾಗುತ್ತಿತ್ತು. ಮುಂದಿದ್ದ ವ್ಯಾನ್ ಹಿಂದಿಕ್ಕಲು ಕೆಂಪು ಬಣ್ಣದ ಫೆರಾರಿ ಕಾರಿನವರು ಪ್ರಯತ್ನಿಸಿದ್ದರು. ಆಗ ಲ್ಯಾಂಬೋರ್ಗಿನಿಗೆ ಫೆರಾರಿ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಫೆರಾರಿಯಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರಿಬ್ಬರೂ ಸ್ವಿಜರ್​ಲೆಂಡ್​ ದಂಪತಿಗಳು. ಇವರ ವಯಸ್ಸು 60 ದಾಟಿದೆ.

ಇದನ್ನೂ ಓದಿ: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

‘ವಿಕಾಸ್ ಹಾಗೂ ನಾನು ಆರಾಮಾಗಿದ್ದೀವಿ. ಇಲ್ಲಿ ಸರಣಿ ಅಪಘಾತ ಆಗಿದೆ. ದೇವರ ದಯೆಯಿಂದ ಏನೂ ಆಗಿಲ್ಲ’ ಎಂದು ಗಾಯತ್ರಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಒಬೆರಾಯ್ ರಿಯಾಲ್ಟಿಗೆ ವಿಕಾಸ್ ಎಂಡಿ ಆಗಿದ್ದಾರೆ. ಇವರ ಆಸ್ತಿ ಮೊತ್ತ 30 ಸಾವಿರ ಕೋಟಿ ರೂಪಾಯಿ ದಾಟಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?