AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಲೆಕ್ಸ್​ ಪಾತ್ರ ಇಟ್ಟುಕೊಂಡು ಪ್ರತ್ಯೇಕ ಸಿನಿಮಾ ಮಾಡ್ತಾರಾ ಲೋಕೇಶ್​ ಕನಗರಾಜ್​?

‘150 ದಿನ ಶೂಟಿಂಗ್​ ಇರುವಂತಹ ದೊಡ್ಡ ಸಿನಿಮಾದಲ್ಲಿ ನಾನು ಸೂರ್ಯ ಜೊತೆ ಕೆಲಸ ಮಾಡುತ್ತೇನೆ. ಶೀಘ್ರದಲ್ಲೇ ಅದು ಸಾಧ್ಯವಾಗಲಿದೆ’ ಎಂದು ಲೋಕೇಶ್​ ಕನಗರಾಜ್​ ಹೇಳಿದ್ದಾರೆ.

ರೋಲೆಕ್ಸ್​ ಪಾತ್ರ ಇಟ್ಟುಕೊಂಡು ಪ್ರತ್ಯೇಕ ಸಿನಿಮಾ ಮಾಡ್ತಾರಾ ಲೋಕೇಶ್​ ಕನಗರಾಜ್​?
ಲೋಕೇಶ್ ಕನಗರಾಜ್, ಸೂರ್ಯ
ಮದನ್​ ಕುಮಾರ್​
|

Updated on: Apr 02, 2023 | 3:51 PM

Share

2022ರಲ್ಲಿ ಸೂಪರ್​ ಹಿಟ್​ ಆದ ಸಿನಿಮಾಗಳ ಪಟ್ಟಿಯಲ್ಲಿ ‘ವಿಕ್ರಮ್​’ (Vikram Movie) ಕೂಡ ಇದೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್​. ಸಿನಿಮಾದ ಕೊನೆಯಲ್ಲಿ ಬಂದ ರೋಲೆಕ್ಸ್​ ಪಾತ್ರಕ್ಕೆ ಜೀವ ತುಂಬಿದ್ದು ನಟ ಸೂರ್ಯ. ಕೆಲವೇ ನಿಮಿಷಗಳ ಕಾಲ ಕಾಣಿಸಿಕೊಳ್ಳುವ ಆ ಪಾತ್ರ ಸಿಕ್ಕಾಪಟ್ಟೆ ಸದ್ದು ಮಾಡಿತು. ವಿಶೇಷ ಏನೆಂದರೆ ರೋಲೆಕ್ಸ್​ ಪಾತ್ರವನ್ನು ಇಟ್ಟುಕೊಂಡು ಲೋಕೇಶ್​ ಕನಗರಾಜ್​ (Lokesh Kanagaraj) ಅವರು ಒಂದು ಪ್ರತ್ಯೇಕ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇತ್ತೀಚೆಗೆ ಅವರು ನೀಡಿದ ಹೇಳಿಕೆಯ ಕಾರಣದಿಂದ ಹೊಸ ಚರ್ಚೆ ಶುರುವಾಗಿದೆ. ಈ ಸುದ್ದಿ ಕೇಳಿ ಸೂರ್ಯ (Suriya) ಅಭಿಮಾನಿಗಳಿಗೆ ಖುಷಿ ಆಗಿದೆ. ಅಷ್ಟಕ್ಕೂ ಲೋಕೇಶ್​ ಕನಗರಾಜ್​ ಹೇಳಿದ್ದೇನು? ಇಲ್ಲಿದೆ ಮಾಹಿತಿ..

ಇತ್ತೀಚೆಗೆ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಲೋಕೇಶ್​ ಕನಗರಾಜ್​ ಭಾಗವಹಿಸಿದ್ದರು. ಈ ವೇಳೆ ಅವರು ಸೂರ್ಯ ಜೊತೆ ಸಿನಿಮಾ ಮಾಡುವ ಬಗ್ಗೆ ಪ್ರಸ್ತಾಪಿಸಿದರು. ‘ನಾನು ‘ವಿಕ್ರಮ್​’ ಚಿತ್ರದಲ್ಲಿ ಸೂರ್ಯ ಅವರ ಜೊತೆ 2 ದಿನ ಮಾತ್ರ ಕೆಲಸ ಮಾಡಿದೆ. ಖಂಡಿತವಾಗಿಯೂ 150 ದಿನ ಶೂಟಿಂಗ್​ ಇರುವಂತಹ ದೊಡ್ಡ ಸಿನಿಮಾದಲ್ಲಿ ನಾನು ಅವರ ಜೊತೆ ಕೆಲಸ ಮಾಡುತ್ತೇನೆ. ಶೀಘ್ರದಲ್ಲೇ ಅದು ಸಾಧ್ಯವಾಗಲಿದೆ’ ಎಂದು ಲೋಕೇಶ್​ ಕನಗರಾಜ್​ ಹೇಳಿದ್ದಾರೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್​ ನಟನೆಯ 67ನೇ ಚಿತ್ರಕ್ಕೆ ‘ಲಿಯೋ’ ಎಂದು ಹೆಸರಿಟ್ಟ ನಿರ್ದೇಶಕ ಲೋಕೇಶ್​ ಕನಗರಾಜ್​​

ಇದನ್ನೂ ಓದಿ
Image
ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Image
Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಲೋಕೇಶ್​ ಕನಗರಾಜ್​ ಅವರು ಸೂರ್ಯ ಜೊತೆ ಸೂಪರ್​ ಹೀರೋ ಕಾನ್ಸೆಪ್ಟ್​ ಇರುವ ಒಂದು ಸಿನಿಮಾ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸೆಟ್ಟೇರಲಿಲ್ಲ. ಈಗ ಅದೇ ಕಥೆಯನ್ನು ಇಟ್ಟುಕೊಂಡು ಅವರು ಸೂರ್ಯ ಜೊತೆ ಸಿನಿಮಾ ಮಾಡುತ್ತಾರೋ ಅಥವಾ ರೋಲೆಕ್ಸ್​ ಪಾತ್ರವನ್ನು ಆಧರಿಸಿ ಪ್ರತ್ಯೇಕ ಸಿನಿಮಾ ಮಾಡುತ್ತಾರೋ ಎಂಬುದು ಖಚಿತವಾಗಿಲ್ಲ.

ಇದನ್ನೂ ಓದಿ: Salman Khan: ‘ವಿಕ್ರಮ್​’ ಸಿನಿಮಾ ನಿರ್ದೇಶಕ ಲೋಕೇಶ್​ ಕನಗರಾಜ್​ ಜೊತೆ ಸಲ್ಮಾನ್​ ಖಾನ್​ ಹೊಸ ಚಿತ್ರ?

ಸೂರ್ಯ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಸಿಕ್ಕಿದೆ. ಅವರು ನಟಿಸಿದ ‘ಸೂರರೈ ಪೋಟ್ರು’ ಮತ್ತು ‘ಜೈ ಭೀಮ್​’ ಸಿನಿಮಾಗಳು ದೇಶಾದ್ಯಂತ ಸದ್ದು ಮಾಡಿವೆ. 5 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಬಾಚಿಕೊಂಡಿದ್ದು ‘ಸೂರರೈ ಪೋಟ್ರು’ ಸಿನಿಮಾದ ಹೆಚ್ಚುಗಾರಿಕೆ. ಸದ್ಯ ಸೂರ್ಯ ಅವರು 42ನೇ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರದ ಒಟಿಟಿ ಹಕ್ಕುಗಳಿಗೆ ಭಾರಿ ಡಿಮ್ಯಾಂಡ್​ ಬಂದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ವಿಕ್ರಮ್’ ಸಿನಿಮಾ ನಿರ್ದೇಶಕ ಲೋಕೇಶ್​ ಕನಗರಾಜ್​ಗೆ ಐಷಾರಾಮಿ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್

ಇನ್ನು, ಲೋಕೇಶ್​ ಕನಗರಾಜ್​ ಅವರು ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ದಳಪತಿ ವಿಜಯ್​ ಹೀರೋ. ಕಾಶ್ಮೀರದಲ್ಲಿ ಈ ಸಿನಿಮಾ ಶೂಟಿಂಗ್​ ನಡೆಯುತ್ತಿದೆ. ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ