AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram First Look: ವಿಕ್ರಮ್​ ಪೋಸ್ಟರ್​ನಲ್ಲಿ ಮೂರು ಸ್ಟಾರ್​ಗಳ ಸಮಾಗಮ; ಭಯ ಹುಟ್ಟಿಸುತ್ತಿದೆ ಹೊಸ ಪೋಸ್ಟರ್​

Kamal Haasan: ವಿಕ್ರಮ್​ ಸಿನಿಮಾದಲ್ಲಿ ತಮಿಳಿನ ವಿಜಯ್​ ಸೇತುಪತಿ, ಮಲಯಾಳಂ ಖ್ಯಾತ ನಟ ಫಹಾದ್​ ಫಾಸಿಲ್​ ನಟಿಸುತ್ತಿದ್ದಾರೆ. ಈಗ ರಿಲೀಸ್​ ಆಗಿರೋ ಪೋಸ್ಟರ್​ನಲ್ಲಿ ಮೂವರ ದರ್ಶನ ಒಟ್ಟಿಗೆ ಆಗಿದೆ.

Vikram First Look: ವಿಕ್ರಮ್​ ಪೋಸ್ಟರ್​ನಲ್ಲಿ ಮೂರು ಸ್ಟಾರ್​ಗಳ ಸಮಾಗಮ; ಭಯ ಹುಟ್ಟಿಸುತ್ತಿದೆ ಹೊಸ ಪೋಸ್ಟರ್​
ವಿಕ್ರಮ್​ ಪೋಸ್ಟರ್​ನಲ್ಲಿ ಮೂರು ಸ್ಟಾರ್​ಗಳ ಸಮಾಗಮ; ಭಯ ಹುಟ್ಟಿಸುತ್ತಿದೆ ಹೊಸ ಪೋಸ್ಟರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 10, 2021 | 7:14 PM

Share

ಬಹುಭಾಷಾ ನಟ ಕಮಲ್​ ಹಾಸನ್​ ಯಾವುದೇ ಸಿನಿಮಾ ಘೋಷಣೆ ಮಾಡಿದರೂ ಅಲ್ಲೊಂದು ಕುತೂಹಲ ಇದ್ದೇ ಇರುತ್ತದೆ. ಅವರ ನಟನೆಯ ವಿಕ್ರಮ್ ಸಿನಿಮಾ ಟೈಟಲ್​ ಟೀಸರ್​ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಈಗ ರಿಲೀಸ್​ ಆಗಿರುವ ಚಿತ್ರದ ಹೊಸ ಟೀಸರ್ ಈ ಕುತೂಹಲವನ್ನು ದುಪಟ್ಟು ಮಾಡಿದೆ. ಇದನ್ನು ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ವಿಕ್ರಮ್​ ಸಿನಿಮಾದಲ್ಲಿ ತಮಿಳಿನ ವಿಜಯ್​ ಸೇತುಪತಿ, ಮಲಯಾಳಂ ಖ್ಯಾತ ನಟ ಫಹಾದ್​ ಫಾಸಿಲ್​ ನಟಿಸುತ್ತಿದ್ದಾರೆ. ಈಗ ರಿಲೀಸ್​ ಆಗಿರೋ ಪೋಸ್ಟರ್​ನಲ್ಲಿ ಮೂವರ ದರ್ಶನ ಒಟ್ಟಿಗೆ ಆಗಿದೆ. ಬ್ಲ್ಯಾಕ್​ ಆ್ಯಂಡ್​ ವೈಟ್​ನಲ್ಲಿ ಪೋಸ್ಟರ್​ ಮೂಡಿ ಬಂದಿದೆ. ಇದನ್ನು ನೋಡಿದ ಸಿನಿಪ್ರಿಯರು ಸಾಕಷ್ಟು ಖುಷಿಯಾಗಿದ್ದಾರೆ.

ವಿಕ್ರಮ್​ ಸಿನಿಮಾದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫಹಾದ್​ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಸಾಕ್ಷಿ ಹೇಳಲು ಹೊರಟಿರುವ ವ್ಯಕ್ತಿಯನ್ನು ಸಾಯಿಸಲು ರೌಡಿಗೆ (ವಿಜಯ್​ ಸೇತುಪತಿ) ಈ ಪೊಲೀಸ್​ ಅಧಿಕಾರಿ ಸಹಕಾರ ನೀಡುತ್ತಾನೆ. ಈ ಸಾಕ್ಷ್ಯವನ್ನು ಹೀರೋ (ಕಮಲ್​ ಹಾಸನ್​) ಕಾಪಾಡುತ್ತಿರುತ್ತಾನೆ. ಇದು ಸಿನಿಮಾದ ಒಂದೆಳೆ.

ತಮಿಳಿನಲ್ಲಿ ಸಿದ್ಧಗೊಳ್ಳುತ್ತಿರುವ ಈ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಜಲ್ಲಿಕಟ್ಟು ಸಿನಿಮಾದಲ್ಲಿ ಕ್ಯಾಮೆರಾ ಕೈಚಳಕ ತೋರಿದ್ದ ಗಿರೀಶ್​ ಗಂಗಾಧರನ್​ ಈ ಸಿನಿಮಾಗೆ ಛಾಯಾಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾದ ಫ್ರೇಮ್​ ಮತ್ತಷ್ಟು ಅದ್ಭುತವಾಗಿ ಮೂಡಿಬರುವ ನಿರೀಕ್ಷೆ ಇದೆ. ಅನಿರುದ್ಧ್​ ರವಿಚಂದರ್​​​ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: ಪ್ರಜಾಕೀಯದ ಹೈಕಮಾಂಡ್​ ಯಾರು ಎಂಬುದನ್ನು ಬಹಿರಂಗಪಡಿಸಿದ ಉಪೇಂದ್ರ

Published On - 7:12 pm, Sat, 10 July 21

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ