AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram First Look: ವಿಕ್ರಮ್​ ಪೋಸ್ಟರ್​ನಲ್ಲಿ ಮೂರು ಸ್ಟಾರ್​ಗಳ ಸಮಾಗಮ; ಭಯ ಹುಟ್ಟಿಸುತ್ತಿದೆ ಹೊಸ ಪೋಸ್ಟರ್​

Kamal Haasan: ವಿಕ್ರಮ್​ ಸಿನಿಮಾದಲ್ಲಿ ತಮಿಳಿನ ವಿಜಯ್​ ಸೇತುಪತಿ, ಮಲಯಾಳಂ ಖ್ಯಾತ ನಟ ಫಹಾದ್​ ಫಾಸಿಲ್​ ನಟಿಸುತ್ತಿದ್ದಾರೆ. ಈಗ ರಿಲೀಸ್​ ಆಗಿರೋ ಪೋಸ್ಟರ್​ನಲ್ಲಿ ಮೂವರ ದರ್ಶನ ಒಟ್ಟಿಗೆ ಆಗಿದೆ.

Vikram First Look: ವಿಕ್ರಮ್​ ಪೋಸ್ಟರ್​ನಲ್ಲಿ ಮೂರು ಸ್ಟಾರ್​ಗಳ ಸಮಾಗಮ; ಭಯ ಹುಟ್ಟಿಸುತ್ತಿದೆ ಹೊಸ ಪೋಸ್ಟರ್​
ವಿಕ್ರಮ್​ ಪೋಸ್ಟರ್​ನಲ್ಲಿ ಮೂರು ಸ್ಟಾರ್​ಗಳ ಸಮಾಗಮ; ಭಯ ಹುಟ್ಟಿಸುತ್ತಿದೆ ಹೊಸ ಪೋಸ್ಟರ್​
TV9 Web
| Edited By: |

Updated on:Jul 10, 2021 | 7:14 PM

Share

ಬಹುಭಾಷಾ ನಟ ಕಮಲ್​ ಹಾಸನ್​ ಯಾವುದೇ ಸಿನಿಮಾ ಘೋಷಣೆ ಮಾಡಿದರೂ ಅಲ್ಲೊಂದು ಕುತೂಹಲ ಇದ್ದೇ ಇರುತ್ತದೆ. ಅವರ ನಟನೆಯ ವಿಕ್ರಮ್ ಸಿನಿಮಾ ಟೈಟಲ್​ ಟೀಸರ್​ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಈಗ ರಿಲೀಸ್​ ಆಗಿರುವ ಚಿತ್ರದ ಹೊಸ ಟೀಸರ್ ಈ ಕುತೂಹಲವನ್ನು ದುಪಟ್ಟು ಮಾಡಿದೆ. ಇದನ್ನು ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ವಿಕ್ರಮ್​ ಸಿನಿಮಾದಲ್ಲಿ ತಮಿಳಿನ ವಿಜಯ್​ ಸೇತುಪತಿ, ಮಲಯಾಳಂ ಖ್ಯಾತ ನಟ ಫಹಾದ್​ ಫಾಸಿಲ್​ ನಟಿಸುತ್ತಿದ್ದಾರೆ. ಈಗ ರಿಲೀಸ್​ ಆಗಿರೋ ಪೋಸ್ಟರ್​ನಲ್ಲಿ ಮೂವರ ದರ್ಶನ ಒಟ್ಟಿಗೆ ಆಗಿದೆ. ಬ್ಲ್ಯಾಕ್​ ಆ್ಯಂಡ್​ ವೈಟ್​ನಲ್ಲಿ ಪೋಸ್ಟರ್​ ಮೂಡಿ ಬಂದಿದೆ. ಇದನ್ನು ನೋಡಿದ ಸಿನಿಪ್ರಿಯರು ಸಾಕಷ್ಟು ಖುಷಿಯಾಗಿದ್ದಾರೆ.

ವಿಕ್ರಮ್​ ಸಿನಿಮಾದಲ್ಲಿ ವಿಜಯ್​ ಸೇತುಪತಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫಹಾದ್​ ಭ್ರಷ್ಟ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಸಾಕ್ಷಿ ಹೇಳಲು ಹೊರಟಿರುವ ವ್ಯಕ್ತಿಯನ್ನು ಸಾಯಿಸಲು ರೌಡಿಗೆ (ವಿಜಯ್​ ಸೇತುಪತಿ) ಈ ಪೊಲೀಸ್​ ಅಧಿಕಾರಿ ಸಹಕಾರ ನೀಡುತ್ತಾನೆ. ಈ ಸಾಕ್ಷ್ಯವನ್ನು ಹೀರೋ (ಕಮಲ್​ ಹಾಸನ್​) ಕಾಪಾಡುತ್ತಿರುತ್ತಾನೆ. ಇದು ಸಿನಿಮಾದ ಒಂದೆಳೆ.

ತಮಿಳಿನಲ್ಲಿ ಸಿದ್ಧಗೊಳ್ಳುತ್ತಿರುವ ಈ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಜಲ್ಲಿಕಟ್ಟು ಸಿನಿಮಾದಲ್ಲಿ ಕ್ಯಾಮೆರಾ ಕೈಚಳಕ ತೋರಿದ್ದ ಗಿರೀಶ್​ ಗಂಗಾಧರನ್​ ಈ ಸಿನಿಮಾಗೆ ಛಾಯಾಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾದ ಫ್ರೇಮ್​ ಮತ್ತಷ್ಟು ಅದ್ಭುತವಾಗಿ ಮೂಡಿಬರುವ ನಿರೀಕ್ಷೆ ಇದೆ. ಅನಿರುದ್ಧ್​ ರವಿಚಂದರ್​​​ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ದಳಪತಿ ವಿಜಯ್​ ನಟನೆಯ ಮಾಸ್ಟರ್​ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್​ ಕನಗರಾಜ್​ ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: ಪ್ರಜಾಕೀಯದ ಹೈಕಮಾಂಡ್​ ಯಾರು ಎಂಬುದನ್ನು ಬಹಿರಂಗಪಡಿಸಿದ ಉಪೇಂದ್ರ

Published On - 7:12 pm, Sat, 10 July 21

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್