AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: ಕಮಲ್​ ಹಾಸನ್​ಗೆ ಮತ್ತೆ ರಾಜಕೀಯದ ಸೆಳೆತ; ‘ವಿಕ್ರಮ್​’ ಗೆಲುವಿನ ಬೆನ್ನಲ್ಲೇ ದೊಡ್ಡ ಅನೌನ್ಸ್​ಮೆಂಟ್​

Kamal Haasan Politics: ರಾಜಕೀಯದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಕಮಲ್​ ಹಾಸನ್ ಹೇಳಿದ್ದಾರೆ.​ ಮುಂಬರುವ ತಮಿಳುನಾಡು ಅಸೆಂಬ್ಲಿ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ.

Kamal Haasan: ಕಮಲ್​ ಹಾಸನ್​ಗೆ ಮತ್ತೆ ರಾಜಕೀಯದ ಸೆಳೆತ; ‘ವಿಕ್ರಮ್​’ ಗೆಲುವಿನ ಬೆನ್ನಲ್ಲೇ ದೊಡ್ಡ ಅನೌನ್ಸ್​ಮೆಂಟ್​
ಕಮಲ್ ಹಾಸನ್
TV9 Web
| Edited By: |

Updated on:Jun 10, 2022 | 1:16 PM

Share

ಚಿತ್ರರಂಗದಲ್ಲಿ ನಟ ಕಮಲ್​ ಹಾಸನ್ (Kamal Haasan)​ ಅವರು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ದಿಗ್ಗಜ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ. ರಾಜಕೀಯದಲ್ಲೂ ಅವರಿಗೆ ಆಸಕ್ತಿ ಇದೆ. ಆದರೆ ಆ ಕ್ಷೇತ್ರದಲ್ಲಿ ಅವರಿಗೆ ಜಯ ಸಿಕ್ಕಿಲ್ಲ. ತಮ್ಮದೇ ‘ಮಕ್ಕಳ್​ ನೀದಿ ಮೈಯಂ’ ಪಾರ್ಟಿ (Makkal Needhi Maiam) ಸ್ಥಾಪನೆ ಮಾಡಿಕೊಂಡು ಕಳೆದ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಸೋಲು ಕಂಡರು. ಬಳಿಕ ಮತ್ತೆ ಸಿನಿಮಾಗಳಲ್ಲಿ ಬ್ಯುಸಿ ಆದರು. ಕೆಲವೇ ದಿನಗಳ ಹಿಂದೆ ಬಿಡುಗಡೆಯಾದ ‘ವಿಕ್ರಮ್​’ ಸಿನಿಮಾ (Vikram Movie) ಮೂಲಕ ಕಮಲ್​ ಹಾಸನ್​ ಅವರು ಜಯಭೇರಿ ಬಾರಿಸಿದ್ದಾರೆ. ಈ ಖುಷಿಯಲ್ಲೇ ಅವರಿಗೆ ರಾಜಕೀಯದ ಸೆಳೆತ ಶುರುವಾಗಿದೆ. ಮತ್ತೆ ಪಾಲಿಟಿಕ್ಸ್​ ಕೆಲಸದಲ್ಲಿ ತೊಡಗಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ವಿವರ..

ಸಿನಿಮಾ ನಟ-ನಟಿಯರು ರಾಜಕೀಯದಲ್ಲಿ ತೊಡಗಿಕೊಳ್ಳುವುದು ಹೊಸ ಟ್ರೆಂಡ್​ ಏನೂ ಅಲ್ಲ. ರಾಜಕೀಯಕ್ಕೆ ಬಂದು ಯಶಸ್ಸು ಕಂಡ ಸೆಲೆಬ್ರಿಟಿಗಳು ಹಲವರಿದ್ದಾರೆ. ಸೋತವರ ಸಂಖ್ಯೆಯೂ ದೊಡ್ಡದಿದೆ. ಕಮಲ್​ ಹಾಸನ್​ ಅವರು 2021ರ ಚುನಾವಣೆಯಲ್ಲಿ ಸೋತ ಬಳಿಕ ರಾಜಕೀಯದಿಂದ ಕೊಂಚ ದೂರು ಉಳಿದುಕೊಂಡಿದ್ದರು. ‘ವಿಕ್ರಮ್​’ ಸಿನಿಮಾದ ಕೆಲಸಗಳಲ್ಲಿ ಅವರು ಮಗ್ನರಾಗಿದ್ದರು. ಈ ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗಿರುವುದರಿಂದ ಅವರು ಇನ್ಮುಂದೆ ರಾಜಕೀಯ ಬಿಟ್ಟು ಕೇವಲ ಸಿನಿಮಾ ಕೆಲಸಗಳಲ್ಲಿಯೇ ಬ್ಯುಸಿ ಆಗುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಕಮಲ್​ ಹಾಸನ್​ ಟ್ವಿಸ್ಟ್​ ನೀಡಿದ್ದಾರೆ. ಸಿನಿಮಾ ಯಶಸ್ವಿ ಆಗಿದೆ ಎಂದಮಾತ್ರಕ್ಕೆ ರಾಜಕೀಯದಿಂದ ದೂರ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​

ಇದನ್ನೂ ಓದಿ
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

ಕಮಲ್​ ಹಾಸನ್​ ಸ್ಥಾಪಿಸಿದ ‘ಮಕ್ಕಳ್​ ನೀದಿ ಮೈಯಂ’ ಪಕ್ಷ 5ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಸಂದರ್ಭದಲ್ಲಿ ರಾಜಕೀಯದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿರುವ ಕಮಲ್​ ಹಾಸನ್​ ಅವರು ಮುಂಬರುವ ತಮಿಳುನಾಡು ಅಸೆಂಬ್ಲಿ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ರಾಜಕೀಯದಲ್ಲಿ ಒಂದಲ್ಲಾ ಒಂದು ದಿನ ಗೆದ್ದೇ ಗೆಲ್ಲುವ ಭರವಸೆ ಅವರಿಗೆ ಇದೆ. ಹಾಗಾಗಿ ಸತತ ಪ್ರಯತ್ನ ಮಾಡುವತ್ತ ಅವರು ಗಮನ ಹರಿಸಿದ್ದಾರೆ. ಕಮಲ್​​ ಹಾಸನ್​ ಅವರ ಈ ಹೇಳಿಕೆಯಿಂದ ತಮಿಳುನಾಡು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಅವರಿಗೆ ಜಯ ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Fri, 10 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ