AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಪ್ರೀತಿಸೋ ಐಶ್ವರ್ಯಾ ಬೇರೆ ಯಾರನ್ನೋ ಮದುವೆ ಆಗುತ್ತಾರೆ’; ವಿಕ್ರಮ್ ಹೀಗೆ ಹೇಳಿದ್ದೇಕೆ?  

‘ರಾವಣ್’ ಚಿತ್ರವು ರಾಮಾಯಣ’ದ ಕಲ್ಪಿತ ವರ್ಷನ್ ಎನ್ನಬಹುದು. ‘ಪೊನ್ನಿಯಿನ್ ಸೆಲ್ವನ್’ ಚಿತ್ರವು ಚೋಳರ ಕಥೆಯನ್ನು ಹೊಂದಿದೆ. ಎರಡೂ ಸಿನಿಮಾಗೆ ಮಣಿರತ್ನಂ ಅವರು ನಿರ್ದೇಶನ ಮಾಡಿದ್ದರು. ವಿಕ್ರಮ್ ಹಾಗೂ ಐಶ್ವರ್ಯಾ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಆದರೆ, ಕೊನೆಯಲ್ಲಿ ಇವರು ಒಂದಾಗುವುದಿಲ್ಲ.

‘ನಾನು ಪ್ರೀತಿಸೋ ಐಶ್ವರ್ಯಾ ಬೇರೆ ಯಾರನ್ನೋ ಮದುವೆ ಆಗುತ್ತಾರೆ’; ವಿಕ್ರಮ್ ಹೀಗೆ ಹೇಳಿದ್ದೇಕೆ?  
ವಿಕ್ರಂ-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Sep 04, 2024 | 2:33 PM

Share

ನಟ ವಿಕ್ರಮ್ ಹಾಗೂ ಐಶ್ವರ್ಯಾ ರೈ ಅವರು ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಯಿತು. ಆದರೆ, ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಇಬ್ಬರ ಪಾತ್ರ ಒಂದಾಗುವುದೇ ಇಲ್ಲ ಎನ್ನುವ ಬೇಸರವನ್ನು ಅವರು ಹೊರಹಾಕಿದ್ದಾರೆ. ‘ರಾವಣ್’ ಹಾಗೂ ‘ಪೊನ್ನಿಯಿನ್ ಸೆಲ್ವನ್’ ಎರಡೂ ಚಿತ್ರದಲ್ಲಿ ನನಗೆ ನಾಯಕಿ ಸಿಗುವುದಿಲ್ಲ ಎಂದು ವಿಕ್ರಮ್ ಹೇಳಿಕೊಂಡಿದ್ದಾರೆ. ಯೂಟ್ಯೂಬರ್ ರಣವೀರ್ ಅಲಹಾಬಾದಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ರಾವಣ್’ ಚಿತ್ರವು ರಾಮಾಯಣ’ದ ಕಲ್ಪಿತ ವರ್ಷನ್ ಎನ್ನಬಹುದು. ‘ಪೊನ್ನಿಯಿನ್ ಸೆಲ್ವನ್’ ಚಿತ್ರವು ಚೋಳರ ಕಥೆಯನ್ನು ಹೊಂದಿದೆ. ಎರಡೂ ಸಿನಿಮಾಗೆ ಮಣಿರತ್ನಂ ಅವರು ನಿರ್ದೇಶನ ಮಾಡಿದ್ದರು. ವಿಕ್ರಮ್ ಹಾಗೂ ಐಶ್ವರ್ಯಾ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಆದರೆ, ಕೊನೆಯಲ್ಲಿ ವಿಕ್ರಮ್​ಗೆ ಐಶ್ವರ್ಯಾ ಸಿಗುವುದೇ ಇಲ್ಲ. ‘ರಾವಣ್’ ಎಂದು ಹಿಂದಿಯಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ‘ರಾವಣನ್’ ಎಂದು ರಿಲೀಸ್ ಮಾಡಲಾಯಿತು. ಬಾಲಿವುಡ್ ಮಾತ್ರವಲ್ಲ, ದಕ್ಷಿಣದಲ್ಲೂ ಜನರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದರು.

‘ರಾವಣನ್ ಚಿತ್ರದಲ್ಲಿ ನಾನು ಉತ್ತಮವಾಗಿ ನಟಿಸಿದ್ದೇನೆ ಎಂದರೆ ಅದಕ್ಕೆ ಕಾರಣ ಮಣಿರತ್ನಂ. ಈ ಸಿನಿಮಾದಲ್ಲಿ ರಾವಣ ಹಾಗೂ ಸೀತಾ ಪ್ರೀತಿ ಬಗ್ಗೆ ಇತ್ತು. ರಾವಣನ್ ಹಾಗೂ ಪೊನ್ನಿಯೆನ್ ಸೆಲ್ವನ್ ಎರಡೂ ಚಿತ್ರಗಳಲ್ಲಿ ನಾನು ಹಾಗೂ ಐಶ್ವರ್ಯಾ ನಟಿಸುತ್ತೇವೆ. ನಾನು ಅವರನ್ನು ಪ್ರೀತಿಸುತ್ತಾರೆ. ಆದರೆ, ಅವರು ಮತ್ಯಾರದ್ದೋ ಪತ್ನಿ ಆಗಿರುತ್ತಾರೆ. ಅವನು ಇವಳನ್ನು ಪ್ರೀತಿಸುತ್ತಾನೆ. ಅವಳಿಗಾಗಿಯೇ ಈತ ಸಾಯುತ್ತಾನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎನಿಸುತ್ತಿದೆ’; ಚಿಯಾನ್ ವಿಕ್ರಮ್ ಭೇಟಿ ಮಾಡಿದ ರಿಷಬ್

ವಿಕ್ರಮ್ ನಟನೆಯ ‘ಥಂಗಳಾನ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಚಿತ್ರವನ್ನು ಪಾ. ರಂಜಿತ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಕೋಲಾರ ಗಣಿಯ ಕಥೆಯನ್ನು ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!