AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ

ಸಂಗೀತಾ ಹಾಗೂ ವಿನಯ್ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರು. ಇವರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಬಿಗ್ ಬಾಸ್​ಗೆ ಬಂದಾಗ ಇವರ ಮಧ್ಯೆ ಮಿಸ್​ಅಂಡರ್​ಸ್ಟ್ಯಾಂಡಿಂಗ್ ಆಗಿದೆ. ಇಬ್ಬರೂ ಕಿತ್ತಾಡಿಕೊಳ್ಳೋಕೆ ಆರಂಭಿಸಿದರು. ಹೀಗಾಗಿ, ಮನೆಯಲ್ಲಿ ಬಿಸಿ ಗಾಳಿ ಬೀಸುತ್ತಿದೆ.  

ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on:Oct 19, 2023 | 11:19 AM

Share

ಎರಡನೇ ವಾರಕ್ಕೆ ‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಜಗಳಗಳು ಉದ್ಭವ ಆಗಿವೆ. ಮನೆಯಲ್ಲಿ ಎರಡು ಟೀಂ ಮಾಡಿರುವುದರಿಂದ ಸಿಕ್ಕಾಪಟ್ಟೆ ಕಲಹ ಉಂಟಾಗುತ್ತಿದೆ. ಟಾಸ್ಕ್ ಸೋತ ಬೇಸರದ ಜೊತೆ ತಮ್ಮ ಬಗ್ಗೆ ಅಪಪ್ರಚಾರ ಆಗುತ್ತಿದೆ ಎಂದು ವಿನಯ್ ಗೌಡ ಅವರು ಸಿಟ್ಟಾಗಿದ್ದಾರೆ. ಹೀಗಾಗಿ, ಅವರು ಸಾಕಷ್ಟು ಅಸಮಾಧಾನಗೊಂಡಿದ್ದಾರೆ. ಮನೆಯವರ ಮೇಲೆಲ್ಲ ತಮ್ಮ ಕೋಪ ತೋರಿಸುತ್ತಿದ್ದಾರೆ. ಬಾಯಿಗೆ ಬಂದಂತೆ ಬೈಯುತ್ತಿದ್ದಾರೆ. ಇದರಿಂದ ಮನೆಯ ವಾತಾವರಣ ಪ್ರಕ್ಷುಬ್ಧವಾಗಿದೆ.

ಧಾರಾವಾಹಿ ಮೂಲಕ ಫೇಮಸ್ ಆದವರು ವಿನಯ್ ಗೌಡ. ಸಂಗೀತಾ ಹಾಗೂ ವಿನಯ್ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರು. ಇವರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಬಿಗ್ ಬಾಸ್​ಗೆ ಬಂದಾಗ ಇವರ ಮಧ್ಯೆ ಮಿಸ್​ಅಂಡರ್​ಸ್ಟ್ಯಾಂಡಿಂಗ್ ಆಗಿದೆ. ಇಬ್ಬರೂ ಕಿತ್ತಾಡಿಕೊಳ್ಳೋಕೆ ಆರಂಭಿಸಿದರು. ಹೀಗಾಗಿ, ಮನೆಯಲ್ಲಿ ಬಿಸಿ ಗಾಳಿ ಬೀಸುತ್ತಿದೆ.

ಸಂಗೀತಾ ಅವರು ಪದೇಪದೇ ಬೇಸರ ಮಾಡಿಕೊಳ್ಳುತ್ತಿದ್ದಾರೆ. ಮನೆಯಿಂದ ಹೊರ ಹೋಗುವ ಬಗ್ಗೆ ಅವರು ಆಲೋಚಿಸುತ್ತಿದ್ದಾರೆ. ಈ ರೀತಿಯ ನಿರ್ಧಾರ ತೆಗೆದುಕೊಳ್ಳದಂತೆ ಅನೇಕರು ಅವರಿಗೆ ಕಿವಿsಮಾತು ಹೇಳಿದ್ದಾರೆ. ಸಂಗೀತಾ ಈ ರೀತಿ ಆಲೋಚಿಸೋದಕ್ಕೆ ವಿನಯ್ ನೇರ ಕಾರಣ ಎಂದು ಭಾಗ್ಯಶ್ರೀ ಅಂದುಕೊಂಡಿದ್ದಾರೆ. ಈ ಕಾರಣದಿಂದಲೇ ವಿನಯ್ ಬಳಿ ಹೋಗಿ ಭಾಗ್ಯಶ್ರೀ ತಿದ್ದಿಕೊಳ್ಳುವಂತೆ ಕೋರಿದ್ದಾರೆ. ‘ನಿಮ್ಮಿಂದ ಸಂಗೀತಾ ಖಿನ್ನತೆಗೆ ಒಳಗಾಗುತ್ತಿದ್ದಾರೆ’ ಎನ್ನುವ ಮಾತನ್ನು ವಿನಯ್​ಗೆ ಭಾಗ್ಯಶ್ರೀ ಹೇಳಿದ್ದಾರೆ. ಇದನ್ನು ಕೇಳಿದ ವಿನಯ್ ಕೋಪಗೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಹೆಚ್ಚುತ್ತಿದೆ ವಿನಯ್ ಗೌಡ ಕೋಪ

‘ನಾನು ಯಾವುದಕ್ಕೂ ಜವಾಬ್ದಾರನಲ್ಲ. ಅವರು ಖಿನ್ನತೆಗೆ ಒಳಗಾದರೆ ಅದಕ್ಕೆ ನಾನು ಹೊಣೆ ಅಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಆ ಜಗಳ ಇಂದಿಗೂ ಮುಂದುವರಿದಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ನನ್ನಿಂದ ಒಬ್ಬರು ಖಿನ್ನತೆಗೆ ಹೋದ್ರು ಅಂತಾರೆ, ಮತ್ತೊಬ್ರು ನಾನು ಡೇಂಜರ್ ಅಂತಾರೆ. ನಾನೇನು ಮಾಡಬೇಕು’ ಎಂದು ವಿನಯ್ ಕೆಂಡಾಮಂಡಲವಾಗಿದ್ದಾರೆ. ಕಲರ್ಸ್ ವಾಹಿನಿಯಲ್ಲಿ ಪ್ರತಿ ದಿನ ರಾತ್ರಿ 9:30ಕ್ಕೆ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆ ಲೈವ್ ಪ್ರಸಾರವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:58 am, Thu, 19 October 23

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ