AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ

ಸಂಗೀತಾ ಹಾಗೂ ವಿನಯ್ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರು. ಇವರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಬಿಗ್ ಬಾಸ್​ಗೆ ಬಂದಾಗ ಇವರ ಮಧ್ಯೆ ಮಿಸ್​ಅಂಡರ್​ಸ್ಟ್ಯಾಂಡಿಂಗ್ ಆಗಿದೆ. ಇಬ್ಬರೂ ಕಿತ್ತಾಡಿಕೊಳ್ಳೋಕೆ ಆರಂಭಿಸಿದರು. ಹೀಗಾಗಿ, ಮನೆಯಲ್ಲಿ ಬಿಸಿ ಗಾಳಿ ಬೀಸುತ್ತಿದೆ.  

ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on:Oct 19, 2023 | 11:19 AM

Share

ಎರಡನೇ ವಾರಕ್ಕೆ ‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಜಗಳಗಳು ಉದ್ಭವ ಆಗಿವೆ. ಮನೆಯಲ್ಲಿ ಎರಡು ಟೀಂ ಮಾಡಿರುವುದರಿಂದ ಸಿಕ್ಕಾಪಟ್ಟೆ ಕಲಹ ಉಂಟಾಗುತ್ತಿದೆ. ಟಾಸ್ಕ್ ಸೋತ ಬೇಸರದ ಜೊತೆ ತಮ್ಮ ಬಗ್ಗೆ ಅಪಪ್ರಚಾರ ಆಗುತ್ತಿದೆ ಎಂದು ವಿನಯ್ ಗೌಡ ಅವರು ಸಿಟ್ಟಾಗಿದ್ದಾರೆ. ಹೀಗಾಗಿ, ಅವರು ಸಾಕಷ್ಟು ಅಸಮಾಧಾನಗೊಂಡಿದ್ದಾರೆ. ಮನೆಯವರ ಮೇಲೆಲ್ಲ ತಮ್ಮ ಕೋಪ ತೋರಿಸುತ್ತಿದ್ದಾರೆ. ಬಾಯಿಗೆ ಬಂದಂತೆ ಬೈಯುತ್ತಿದ್ದಾರೆ. ಇದರಿಂದ ಮನೆಯ ವಾತಾವರಣ ಪ್ರಕ್ಷುಬ್ಧವಾಗಿದೆ.

ಧಾರಾವಾಹಿ ಮೂಲಕ ಫೇಮಸ್ ಆದವರು ವಿನಯ್ ಗೌಡ. ಸಂಗೀತಾ ಹಾಗೂ ವಿನಯ್ ಒಂದೇ ಧಾರಾವಾಹಿಯಲ್ಲಿ ನಟಿಸಿದ್ದರು. ಇವರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಬಿಗ್ ಬಾಸ್​ಗೆ ಬಂದಾಗ ಇವರ ಮಧ್ಯೆ ಮಿಸ್​ಅಂಡರ್​ಸ್ಟ್ಯಾಂಡಿಂಗ್ ಆಗಿದೆ. ಇಬ್ಬರೂ ಕಿತ್ತಾಡಿಕೊಳ್ಳೋಕೆ ಆರಂಭಿಸಿದರು. ಹೀಗಾಗಿ, ಮನೆಯಲ್ಲಿ ಬಿಸಿ ಗಾಳಿ ಬೀಸುತ್ತಿದೆ.

ಸಂಗೀತಾ ಅವರು ಪದೇಪದೇ ಬೇಸರ ಮಾಡಿಕೊಳ್ಳುತ್ತಿದ್ದಾರೆ. ಮನೆಯಿಂದ ಹೊರ ಹೋಗುವ ಬಗ್ಗೆ ಅವರು ಆಲೋಚಿಸುತ್ತಿದ್ದಾರೆ. ಈ ರೀತಿಯ ನಿರ್ಧಾರ ತೆಗೆದುಕೊಳ್ಳದಂತೆ ಅನೇಕರು ಅವರಿಗೆ ಕಿವಿsಮಾತು ಹೇಳಿದ್ದಾರೆ. ಸಂಗೀತಾ ಈ ರೀತಿ ಆಲೋಚಿಸೋದಕ್ಕೆ ವಿನಯ್ ನೇರ ಕಾರಣ ಎಂದು ಭಾಗ್ಯಶ್ರೀ ಅಂದುಕೊಂಡಿದ್ದಾರೆ. ಈ ಕಾರಣದಿಂದಲೇ ವಿನಯ್ ಬಳಿ ಹೋಗಿ ಭಾಗ್ಯಶ್ರೀ ತಿದ್ದಿಕೊಳ್ಳುವಂತೆ ಕೋರಿದ್ದಾರೆ. ‘ನಿಮ್ಮಿಂದ ಸಂಗೀತಾ ಖಿನ್ನತೆಗೆ ಒಳಗಾಗುತ್ತಿದ್ದಾರೆ’ ಎನ್ನುವ ಮಾತನ್ನು ವಿನಯ್​ಗೆ ಭಾಗ್ಯಶ್ರೀ ಹೇಳಿದ್ದಾರೆ. ಇದನ್ನು ಕೇಳಿದ ವಿನಯ್ ಕೋಪಗೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಹೆಚ್ಚುತ್ತಿದೆ ವಿನಯ್ ಗೌಡ ಕೋಪ

‘ನಾನು ಯಾವುದಕ್ಕೂ ಜವಾಬ್ದಾರನಲ್ಲ. ಅವರು ಖಿನ್ನತೆಗೆ ಒಳಗಾದರೆ ಅದಕ್ಕೆ ನಾನು ಹೊಣೆ ಅಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಆ ಜಗಳ ಇಂದಿಗೂ ಮುಂದುವರಿದಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ನನ್ನಿಂದ ಒಬ್ಬರು ಖಿನ್ನತೆಗೆ ಹೋದ್ರು ಅಂತಾರೆ, ಮತ್ತೊಬ್ರು ನಾನು ಡೇಂಜರ್ ಅಂತಾರೆ. ನಾನೇನು ಮಾಡಬೇಕು’ ಎಂದು ವಿನಯ್ ಕೆಂಡಾಮಂಡಲವಾಗಿದ್ದಾರೆ. ಕಲರ್ಸ್ ವಾಹಿನಿಯಲ್ಲಿ ಪ್ರತಿ ದಿನ ರಾತ್ರಿ 9:30ಕ್ಕೆ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆ ಲೈವ್ ಪ್ರಸಾರವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:58 am, Thu, 19 October 23

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್