AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು, ‘ಗ್ರಾಮಾಯಣ’ ಟ್ರೈಲರ್, ಪಕ್ಕಾ ಹಳ್ಳಿ ಕತೆ

Gramayana movie: ‘ಗ್ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಜೂನ್ 28) ರಿಲೀಸ್ ಆಗಿದೆ. ಟ್ರೈಲರ್ ಮೊದಲ ನೋಟದಲ್ಲಿಯೇ ಗಮನ ಸೆಳೆಯುತ್ತಿದ್ದು, ತಮಿಳಿನ ವೆಟ್ರಿಮಾರನ್ ಸಿನಿಮಾಗಳ ಫೀಲ್ ಕೊಡುತ್ತಿದೆ. ‘ಗ್ರಾಮಾಯಣ’ ಟ್ರೈಲರ್ ಹೆಸರಿಗೆ ತಕ್ಕಂತೆ ಪಕ್ಕಾ ಹಳ್ಳಿಯ ಕತೆಯನ್ನು ಒಳಗೊಂಡಿದ್ದು, ಪ್ರೀತಿ, ಪ್ರೇಮ, ದ್ವೇಷ, ರಾಜಕೀಯ, ಅಸೂಯೆ, ಕುಟುಂಬ, ಶ್ರದ್ಧೆ, ಭಕ್ತಿ ಎಲ್ಲವನ್ನೂ ಒಳಗೊಂಡ ಪ್ಯಾಕೇಜಿನಂತೆ ಭಾಸವಾಗುತ್ತಿದೆ.

ಬಿಡುಗಡೆ ಆಯ್ತು, ‘ಗ್ರಾಮಾಯಣ’ ಟ್ರೈಲರ್, ಪಕ್ಕಾ ಹಳ್ಳಿ ಕತೆ
Vinay Rajkumar
ಮಂಜುನಾಥ ಸಿ.
|

Updated on:Jun 28, 2026 | 10:31 PM

Share

ವಿನಯ್ ರಾಜ್​​ಕುಮಾರ್ (Vinay Rajkuar) ನಟನೆಯ ‘ಗ್ರಾಮಾಯಣ’ ಸಿನಿಮಾ ಸೆಟ್ಟೇರಿ ವರ್ಷಗಳೇ ಆಗಿದ್ದವು, ಹಲವು ಅಡೆ-ತಡೆ, ಬದಲಾವಣೆಗಳ ಬಳಿಕ ಕೊನೆಗೂ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ‘ಗ್ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಜೂನ್ 28) ರಿಲೀಸ್ ಆಗಿದೆ. ಟ್ರೈಲರ್ ಮೊದಲ ನೋಟದಲ್ಲಿಯೇ ಗಮನ ಸೆಳೆಯುತ್ತಿದ್ದು, ತಮಿಳಿನ ವೆಟ್ರಿಮಾರನ್ ಸಿನಿಮಾಗಳ ಫೀಲ್ ಕೊಡುತ್ತಿದೆ. ‘ಗ್ರಾಮಾಯಣ’ ಟ್ರೈಲರ್ ಹೆಸರಿಗೆ ತಕ್ಕಂತೆ ಪಕ್ಕಾ ಹಳ್ಳಿಯ ಕತೆಯನ್ನು ಒಳಗೊಂಡಿದ್ದು, ಪ್ರೀತಿ, ಪ್ರೇಮ, ದ್ವೇಷ, ರಾಜಕೀಯ, ಅಸೂಯೆ, ಕುಟುಂಬ, ಶ್ರದ್ಧೆ, ಭಕ್ತಿ ಎಲ್ಲವನ್ನೂ ಒಳಗೊಂಡ ಪ್ಯಾಕೇಜಿನಂತೆ ಭಾಸವಾಗುತ್ತಿದೆ.

‘ಗ್ರಾಮಾಯಣ’ ಸಿನಿಮಾದ ಟ್ರೈಲರ್​​ನಲ್ಲಿ ವಿನಯ್ ರಾಜ್​ಕುಮಾರ್ ಸೇರಿದಂತೆ ಹಲವು ಪಾತ್ರಗಳು ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿವೆ. ವಿನಯ್, ಹಳ್ಳಿಯ ಮೊಂಡ, ಸಿಟ್ಟಿನ ಯುವಕನ ಪಾತ್ರದಲ್ಲಿ ನಟಿಸಿದ್ದಾರೆ. ಆ ಯುವಕನ ಪ್ರೇಯಸಿಯಾಗಿ ಮೇಘಾ ಶೆಟ್ಟಿ ನಟಿಸಿದ್ದಾರೆ. ಸಿನಿಮಾನಲ್ಲಿ ಲೂಸ್ ಮಾದ ಯೋಗಿ ಸಹ ಇದ್ದು, ನಾಯಕನ ಎದುರು ನಿಲ್ಲುವ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲದೆ, ನಾಯಕನ ಎದುರಾಳಿಯಾಗಿ ಇನ್ನೂ ಕೆಲವು ಪಾತ್ರಗಳಿದ್ದು, ಟ್ರೈಲರ್, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಲು ಸಂಪೂರ್ಣ ಯಶಸ್ವಿ ಆಗಿದೆ.

ಟ್ರೈಲರ್​​ ನೋಡಿದರೆ ಇದೊಂದು ಆಕ್ಷನ್, ಸೆಂಟಿಮೆಂಟ್, ರೊಮ್ಯಾನ್ಸ್, ಡ್ರಾಮಾ ಬೆರೆತ ಕತೆಯುಳ್ಳ ಸಿನಿಮಾ ಎಂಬುದು ಸ್ಪಷ್ಟವಾಗುತ್ತಿದೆ. ವಿನಯ್ ರಾಜ್​​ಕುಮಾರ್ ಅವರು ಹಳ್ಳಿ ಯುವಕನ ಪಾತ್ರದಲ್ಲಿ ಸಖತ್ ಮಾಸ್ ಆಗಿಯೂ, ರಾ ಮತ್ತು ರಸ್ಟಿಕ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಯೋಗಿಯ ಪಾತ್ರವೂ ಸಹ ತುಸು ಹಾಗೆಯೇ ಇದೆ. ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಅವರುಗಳು ಚಾಣಾಕ್ಷ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಕೆಲ ಪ್ರಮುಖ ಪಾತ್ರಗಳು ಸಿನಿಮಾನಲ್ಲಿವೆ. ಟ್ರೈಲರ್​​ನಲ್ಲೂ ಕಾಣಿಸಿಕೊಂಡಿವೆ. ಟ್ರೈಲರ್​​ನಲ್ಲಿ ಅಪರ್ಣಾ ಅವರ ದೃಶ್ಯಗಳು ಸಹ ಇವೆ. ಅಪರ್ಣಾ ಅವರ ಕೊನೆಯ ಸಿನಿಮಾ ಆಗಿತ್ತು ‘ಗ್ರಾಮಾಯಣ’. ಟ್ರೈಲರ್​​ನಲ್ಲೇ ಅವರ ನಟನೆ ಗಮನ ಸೆಳೆಯುತ್ತಿದೆ. ಆದರೆ ಅವರ ಪಾತ್ರಕ್ಕೆ ಬೇರೆಯವರು ಧ್ವನಿ ನೀಡಿದಂತಿದ್ದಾರೆ.

ಇದನ್ನೂ ಓದಿ:ಹುಟ್ಟುಹಬ್ಬದಂದು ರಕ್ತಸಿಕ್ತ ಲುಕ್​​ನಲ್ಲಿ ಬಂದ ವಿನಯ್ ರಾಜ್​​ಕುಮಾರ್

‘ಗ್ರಾಮಾಯಣ’ ಸಿನಿಮಾವನ್ನು ದೇವನೂರು ಚಂದ್ರು ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಪೂರ್ಣಚಂದ್ರ ತೇಜಸ್ವಿ ಎಸ್​​ವಿ. ಕ್ಯಾಮೆರಾ ಕೆಲಸ ಸಂತೋಷ್ ರೈ ಪತಾಜೆ ಅವರದ್ದು. ಸಿನಿಮಾವನ್ನು ಲಹರಿ ಫಿಲಮ್ಸ್ ನಿರ್ಮಾಣ ಮಾಡಿದೆ. ಸಿನಿಮಾ ಜುಲೈ 3 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:31 pm, Sun, 28 June 26

Follow Us
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?