AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ರೂ. ಖರ್ಚಿನಲ್ಲಿ ಕಿರುತೆರೆ ನಟನ ಮದುವೆ; ಉಂಗುರದ ಬದಲು ರಬ್ಬರ್​ ಬ್ಯಾಂಡ್​ ಕೊಟ್ಟ ವರ

ಮದುವೆಯ ಉಂಗುರದ ಬದಲಿಗೆ ಪತ್ನಿಗೆ ರಬ್ಬರ್​ ಬ್ಯಾಂಡ್​ ನೀಡಿದ್ದಾರಂತೆ ವಿರಾಫ್​! ಹೊಸ ಸೀರೆ ಖರೀದಿಸುವ ಸಂಭ್ರಮ ಇಲ್ಲ. ಅದರ ಬದಲು ಸೀರೆಯನ್ನು ಬಾಡಿಗೆಗೆ ತರಲಾಗಿದೆ.

150 ರೂ. ಖರ್ಚಿನಲ್ಲಿ ಕಿರುತೆರೆ ನಟನ ಮದುವೆ; ಉಂಗುರದ ಬದಲು ರಬ್ಬರ್​ ಬ್ಯಾಂಡ್​ ಕೊಟ್ಟ ವರ
ಸಲೋನಿ ಖನ್ನಾ - ವಿರಾಫ್ ಪಟೇಲ್
ಮದನ್​ ಕುಮಾರ್​
|

Updated on: May 08, 2021 | 1:44 PM

Share

ಈಗ ಎಲ್ಲೆಲ್ಲೂ ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿದೆ. ಜನರು ಗುಂಪು ಸೇರದಂತೆ ಸರ್ಕಾರಗಳು ಹಲವು ನಿಯಮಗಳನ್ನು ಜಾರಿ ಮಾಡಿವೆ. ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನರು ಸೇರುವಂತಿಲ್ಲ. ಹಾಗಾಗಿ ಅನೇಕ ಸೆಲೆಬ್ರಿಟಿಗಳ ಮದುವೆಗಳು ಮುಂದೂಡಲ್ಪಡುತ್ತಿವೆ. ಈ ನಡುವೆ ಇಲ್ಲೊಂದು ಜೋಡಿ ಕೇವಲ 150 ರೂಪಾಯಿ ಖರ್ಚಿನಲ್ಲಿ ಮದುವೆ ಆಗಿ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ಹೀಗೆ ಸಿಂಪಲ್​ ಆಗಿ ಬಾಳ ಬಂಧನಕ್ಕೆ ಒಳಗಾಗಿರುವುದು ‘ನಾಮಕರಣ್​’ ಧಾರಾವಾಹಿ ಖ್ಯಾತಿಯ ನಟ ವಿರಾಫ್​ ಪಟೇಲ್​ ಮತ್ತು ನಟಿ ಸಲೋನಿ ಖನ್ನಾ.

ಕಿರುತೆರೆಯಲ್ಲಿ ಹೆಚ್ಚು ಫೇಮಸ್​ ಆಗಿರುವ ವಿರಾಫ್​ ಪಟೇಲ್​ ಮತ್ತು ಸಲೋನಿ ಖನ್ನಾ ಪರಸ್ಪರ ಪ್ರೀತಿಸುತ್ತಿದ್ದರು. ಫೆಬ್ರವರಿಯಲ್ಲಿ ಈ ಜೋಡಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಅದಕ್ಕಿಂತಲೂ ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ವಿರಾಫ್​ ಪಟೇಲ್​ ಮತ್ತು ಸಲೋನಿ ಖನ್ನಾ ಅವರ ಆಸೆ ಆಗಿತ್ತು. ಆದರೆ ಅದಕ್ಕೆ ಕೊರೊನಾ ಅವಕಾಶ ನೀಡಿಲ್ಲ. ಅದರ ಬದಲು, ಸದ್ಯದ ಪರಿಸ್ಥಿತಿಗೆ ತಕ್ಕಂತೆ ಸಿಂಪಲ್​ ಮದುವೆಯನ್ನೇ ಈ ಸೆಲೆಬ್ರಿಟಿಗಳು ಆಯ್ಕೆ ಮಾಡಿಕೊಂಡಿದ್ದಾರೆ.

ಮೇ 6ರಂದು ದಿಢೀರ್​ ಎಂದು ವಿರಾಫ್​ ಪಟೇಲ್​ ಮತ್ತು ಸಲೋನಿ ಖನ್ನಾ ಬಾಳ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಚ್ಚರಿ ಎಂದರೆ ಮದುವೆಯ ಉಂಗುರದ ಬದಲಿಗೆ ಪತ್ನಿಗೆ ರಬ್ಬರ್​ ಬ್ಯಾಂಡ್​ ನೀಡಿದ್ದಾರಂತೆ ವಿರಾಫ್​! ಹೊಸ ಸೀರೆ ಖರೀದಿಸುವ ಸಂಭ್ರಮ ಇಲ್ಲ. ವಧುವಿನ ಸೀರೆಯನ್ನು ಬಾಡಿಗೆಗೆ ತರಲಾಗಿದೆ. ಸ್ನೇಹಿತರೇ ಸೇರಿಕೊಂಡು ಮೇಕಪ್​ ಮತ್ತು ಕೇಶ ವಿನ್ಯಾಸ ಮಾಡಿದ್ದಾರೆ. ಒಟ್ಟು ಈ ಮದುವೆಗೆ ಅತಿಥಿಗಳಾಗಿದ್ದವರು ಮೂರು ಜನರ ಮಾತ್ರ.

ಇನ್ನುಳಿದ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತ್ರ ಈ ಮದುವೆಯನ್ನು ನೋಡುವ ಅವಕಾಶ ಕಲ್ಪಿಸಲಾಯಿತು. ಒಂದು ಗಂಟೆಯಲ್ಲಿ ಮದುವೆ ಮುಗಿಯಿತು. ಈ ಸಿಂಪಲ್​ ವಿವಾವಹಕ್ಕೆ ಆದ ಖರ್ಚು ಕೇವಲ 150 ರೂಪಾಯಿ ಎಂದು ಸಲೋನಿ ಖನ್ನಾ ತಿಳಿಸಿದ್ದಾರೆ. ಇದು ಪರ್ಫಕ್ಟ್​ ಮ್ಯಾರೇಜ್​. ಪೈಸಾ ವಸೂಲ್​ ಆಯ್ತು, ಮದುವೆ ಒಪ್ಪಿಗೆ ಆಯ್ತು ಎಂಬ ಕ್ಯಾಪ್ಷನ್​ನೊಂದಿಗೆ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಸರಳವಾಗಿ ಮದುವೆ ಆಗುವ ಮೂಲಕ ಈ ಸೆಲೆಬ್ರಿಟಿಗಳು ಇತರರಿಗೂ ಮಾದರಿ ಆಗಿದ್ದಾರೆ. ಈ ಮದುವೆಯಿಂದ ಉಳಿಸಿದ ಹಣವನ್ನು ಕೊವಿಡ್​ ಸೋಂಕಿತರ ಚಿಕಿತ್ಸೆಗಾಗಿ ದೇಣಿಗೆ ನೀಡುವುದಾಗಿ ನವದಂಪತಿ ತಿಳಿಸಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ಈ ಜೋಡಿ ಹಕ್ಕಿಗಳಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಹೀಗೂ ಮದುವೆ ಆಗಬಹುದಾ ಎಂದು ಕಮೆಂಟ್​ಗಳ ಮೂಲಕ ನೆಟ್ಟಿಗರು ಅಚ್ಚರಿ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!