AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ರೂ. ಖರ್ಚಿನಲ್ಲಿ ಕಿರುತೆರೆ ನಟನ ಮದುವೆ; ಉಂಗುರದ ಬದಲು ರಬ್ಬರ್​ ಬ್ಯಾಂಡ್​ ಕೊಟ್ಟ ವರ

ಮದುವೆಯ ಉಂಗುರದ ಬದಲಿಗೆ ಪತ್ನಿಗೆ ರಬ್ಬರ್​ ಬ್ಯಾಂಡ್​ ನೀಡಿದ್ದಾರಂತೆ ವಿರಾಫ್​! ಹೊಸ ಸೀರೆ ಖರೀದಿಸುವ ಸಂಭ್ರಮ ಇಲ್ಲ. ಅದರ ಬದಲು ಸೀರೆಯನ್ನು ಬಾಡಿಗೆಗೆ ತರಲಾಗಿದೆ.

150 ರೂ. ಖರ್ಚಿನಲ್ಲಿ ಕಿರುತೆರೆ ನಟನ ಮದುವೆ; ಉಂಗುರದ ಬದಲು ರಬ್ಬರ್​ ಬ್ಯಾಂಡ್​ ಕೊಟ್ಟ ವರ
ಸಲೋನಿ ಖನ್ನಾ - ವಿರಾಫ್ ಪಟೇಲ್
ಮದನ್​ ಕುಮಾರ್​
|

Updated on: May 08, 2021 | 1:44 PM

Share

ಈಗ ಎಲ್ಲೆಲ್ಲೂ ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿದೆ. ಜನರು ಗುಂಪು ಸೇರದಂತೆ ಸರ್ಕಾರಗಳು ಹಲವು ನಿಯಮಗಳನ್ನು ಜಾರಿ ಮಾಡಿವೆ. ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನರು ಸೇರುವಂತಿಲ್ಲ. ಹಾಗಾಗಿ ಅನೇಕ ಸೆಲೆಬ್ರಿಟಿಗಳ ಮದುವೆಗಳು ಮುಂದೂಡಲ್ಪಡುತ್ತಿವೆ. ಈ ನಡುವೆ ಇಲ್ಲೊಂದು ಜೋಡಿ ಕೇವಲ 150 ರೂಪಾಯಿ ಖರ್ಚಿನಲ್ಲಿ ಮದುವೆ ಆಗಿ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ಹೀಗೆ ಸಿಂಪಲ್​ ಆಗಿ ಬಾಳ ಬಂಧನಕ್ಕೆ ಒಳಗಾಗಿರುವುದು ‘ನಾಮಕರಣ್​’ ಧಾರಾವಾಹಿ ಖ್ಯಾತಿಯ ನಟ ವಿರಾಫ್​ ಪಟೇಲ್​ ಮತ್ತು ನಟಿ ಸಲೋನಿ ಖನ್ನಾ.

ಕಿರುತೆರೆಯಲ್ಲಿ ಹೆಚ್ಚು ಫೇಮಸ್​ ಆಗಿರುವ ವಿರಾಫ್​ ಪಟೇಲ್​ ಮತ್ತು ಸಲೋನಿ ಖನ್ನಾ ಪರಸ್ಪರ ಪ್ರೀತಿಸುತ್ತಿದ್ದರು. ಫೆಬ್ರವರಿಯಲ್ಲಿ ಈ ಜೋಡಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಅದಕ್ಕಿಂತಲೂ ಅದ್ದೂರಿಯಾಗಿ ಮದುವೆ ಆಗಬೇಕು ಎಂಬುದು ವಿರಾಫ್​ ಪಟೇಲ್​ ಮತ್ತು ಸಲೋನಿ ಖನ್ನಾ ಅವರ ಆಸೆ ಆಗಿತ್ತು. ಆದರೆ ಅದಕ್ಕೆ ಕೊರೊನಾ ಅವಕಾಶ ನೀಡಿಲ್ಲ. ಅದರ ಬದಲು, ಸದ್ಯದ ಪರಿಸ್ಥಿತಿಗೆ ತಕ್ಕಂತೆ ಸಿಂಪಲ್​ ಮದುವೆಯನ್ನೇ ಈ ಸೆಲೆಬ್ರಿಟಿಗಳು ಆಯ್ಕೆ ಮಾಡಿಕೊಂಡಿದ್ದಾರೆ.

ಮೇ 6ರಂದು ದಿಢೀರ್​ ಎಂದು ವಿರಾಫ್​ ಪಟೇಲ್​ ಮತ್ತು ಸಲೋನಿ ಖನ್ನಾ ಬಾಳ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಚ್ಚರಿ ಎಂದರೆ ಮದುವೆಯ ಉಂಗುರದ ಬದಲಿಗೆ ಪತ್ನಿಗೆ ರಬ್ಬರ್​ ಬ್ಯಾಂಡ್​ ನೀಡಿದ್ದಾರಂತೆ ವಿರಾಫ್​! ಹೊಸ ಸೀರೆ ಖರೀದಿಸುವ ಸಂಭ್ರಮ ಇಲ್ಲ. ವಧುವಿನ ಸೀರೆಯನ್ನು ಬಾಡಿಗೆಗೆ ತರಲಾಗಿದೆ. ಸ್ನೇಹಿತರೇ ಸೇರಿಕೊಂಡು ಮೇಕಪ್​ ಮತ್ತು ಕೇಶ ವಿನ್ಯಾಸ ಮಾಡಿದ್ದಾರೆ. ಒಟ್ಟು ಈ ಮದುವೆಗೆ ಅತಿಥಿಗಳಾಗಿದ್ದವರು ಮೂರು ಜನರ ಮಾತ್ರ.

ಇನ್ನುಳಿದ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತ್ರ ಈ ಮದುವೆಯನ್ನು ನೋಡುವ ಅವಕಾಶ ಕಲ್ಪಿಸಲಾಯಿತು. ಒಂದು ಗಂಟೆಯಲ್ಲಿ ಮದುವೆ ಮುಗಿಯಿತು. ಈ ಸಿಂಪಲ್​ ವಿವಾವಹಕ್ಕೆ ಆದ ಖರ್ಚು ಕೇವಲ 150 ರೂಪಾಯಿ ಎಂದು ಸಲೋನಿ ಖನ್ನಾ ತಿಳಿಸಿದ್ದಾರೆ. ಇದು ಪರ್ಫಕ್ಟ್​ ಮ್ಯಾರೇಜ್​. ಪೈಸಾ ವಸೂಲ್​ ಆಯ್ತು, ಮದುವೆ ಒಪ್ಪಿಗೆ ಆಯ್ತು ಎಂಬ ಕ್ಯಾಪ್ಷನ್​ನೊಂದಿಗೆ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಸರಳವಾಗಿ ಮದುವೆ ಆಗುವ ಮೂಲಕ ಈ ಸೆಲೆಬ್ರಿಟಿಗಳು ಇತರರಿಗೂ ಮಾದರಿ ಆಗಿದ್ದಾರೆ. ಈ ಮದುವೆಯಿಂದ ಉಳಿಸಿದ ಹಣವನ್ನು ಕೊವಿಡ್​ ಸೋಂಕಿತರ ಚಿಕಿತ್ಸೆಗಾಗಿ ದೇಣಿಗೆ ನೀಡುವುದಾಗಿ ನವದಂಪತಿ ತಿಳಿಸಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ಈ ಜೋಡಿ ಹಕ್ಕಿಗಳಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಹೀಗೂ ಮದುವೆ ಆಗಬಹುದಾ ಎಂದು ಕಮೆಂಟ್​ಗಳ ಮೂಲಕ ನೆಟ್ಟಿಗರು ಅಚ್ಚರಿ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ