AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಕೊವಿಡ್​ ಸಂಕಷ್ಟದಲ್ಲಿ ಕೊಯ್ಲಿ-ಅನುಷ್ಕಾ ಕೈಕಟ್ಟಿ ಕೂತಿದ್ದಾರಾ? ಕಡೆಗೂ ಬಾಯ್ಬಿಟ್ಟ ನಟಿ

Virat Kohli | Anushka Sharma: ‘ನಿಮ್ಮೆಲ್ಲರಿಂದಾಗಿ ಈ ದಿನ ನನಗೆ ನಿಜಕ್ಕೂ ಸ್ಪೆಷಲ್​ ಎನಿಸಿದೆ. ಆದರೆ ಈ ಕಷ್ಟದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಅಂತ ನನಗೆ ಅನಿಸಿತು’ ಎಂದು ಅನುಷ್ಕಾ ಶರ್ಮಾ ಹೇಳಿದ್ದಾರೆ.

Anushka Sharma: ಕೊವಿಡ್​ ಸಂಕಷ್ಟದಲ್ಲಿ ಕೊಯ್ಲಿ-ಅನುಷ್ಕಾ ಕೈಕಟ್ಟಿ ಕೂತಿದ್ದಾರಾ? ಕಡೆಗೂ ಬಾಯ್ಬಿಟ್ಟ ನಟಿ
ವಿರಾಟ್​ ಕೊಯ್ಲಿ - ಅನುಷ್ಕಾ ಶರ್ಮಾ
ಮದನ್​ ಕುಮಾರ್​
|

Updated on: May 03, 2021 | 11:23 AM

Share

ಇಡೀ ದೇಶವೇ ಕೊವಿಡ್​ ಕಾಟದಿಂದ ಕಷ್ಟ ಅನುಭವಿಸುತ್ತಿದೆ. ಒಂದೆಡೆ ಅನಾರೋಗ್ಯ ಸಮಸ್ಯೆಯಾದರೆ, ಮತ್ತೊಂದೆಡೆ ಕೆಲಸ ಇಲ್ಲದೆ ಜನರು ಕಂಗೆಟ್ಟಿದ್ದಾರೆ. ಕೊರೊನಾ ಕರ್ಫ್ಯೂ ಕಾರಣದಿಂದ ಬಹುತೇಕ ವ್ಯಾಪಾರ ವ್ಯವಹಾರಗಳು ಕುಸಿದಿವೆ. ಇನ್ನು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಒದ್ದಾಡುತ್ತಿರುವವರಿಗೆ ಲೆಕ್ಕವೇ ಇಲ್ಲ. ಈ ಸಂದರ್ಭದಲ್ಲಿ ಕೆಲವು ಸೆಲೆಬ್ರಿಟಿಗಳು ಕೈಕಟ್ಟಿ ಕುಳಿತಿದ್ದಾರೆ. ಯಾರಿಗೆ ಏನಾದರೂ ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮನೆಯಲ್ಲಿ ಹಾಯಾಗಿ ಇದ್ದಾರೆ. ನಟಿ ಅನುಷ್ಕಾ ಶರ್ಮಾ ಮತ್ತು ಅವರ ಪತಿ ವಿರಾಟ್​ ಕೊಯ್ಲಿ ಏನು ಮಾಡ್ತಿದ್ದಾರೆ? ಆ ಬಗ್ಗೆ ಅನುಷ್ಕಾ ಮಾತನಾಡಿದ್ದಾರೆ.

ಮೇ 1ರಂದು ಅನುಷ್ಕಾ ಶರ್ಮಾ ಬರ್ತ್​ಡೇ. ಆದರೆ ಅವರು ಯಾವುದೇ ರೀತಿಯ ಸಂಭ್ರಮಾಚರಣೆ ಮಾಡಿಕೊಂಡಿಲ್ಲ. ತಮಗೆ ಸೋಶಿಯಲ್​ ಮೀಡಿಯಾ ಮೂಲಕ ವಿಶ್​ ಮಾಡಿರುವ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ. ಆ ಸಲುವಾಗಿ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿರುವ ಅವರು ಕೆಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.

‘ನಿಮ್ಮೆಲ್ಲರಿಂದಾಗಿ ಈ ದಿನ ನನಗೆ ನಿಜಕ್ಕೂ ಸ್ಪೆಷಲ್​ ಎನಿಸಿದೆ. ಆದರೆ ಈ ಕಷ್ಟದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿತು. ನೀವು ಮಾಡಿದ ಎಲ್ಲ ಮೆಸೇಜ್​ ನೋಡಿದ್ದೇನೆ. ಅದೇ ರೀತಿ ನಿಮಗಾಗಿ ನನ್ನ ಕಡೆಯಿಂದ ಒಂದು ಮುಖ್ಯವಾದ ಮೆಸೇಜ್​ ಇದೆ. ಈ ಪರಿಸ್ಥಿತಿಯಲ್ಲಿ ನಾವೆಲ್ಲರೂ ಜೊತೆಯಾಗಿದ್ದು ದೇಶಕ್ಕೆ ಬೆಂಬಲ ನೀಡಬೇಕು’ ಎಂದು ಅನುಷ್ಕಾ ಹೇಳಿದ್ದಾರೆ.

‘ನಾನು ಮತ್ತು ವಿರಾಟ್​ ಕೂಡ ತಮ್ಮ ಪಾಲಿನ ಕೆಲಸ ಮಾಡುತ್ತಿದ್ದೇವೆ. ಆ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ. ನೀವು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಬಹುದು. ಈ ಸಂದರ್ಭದಲ್ಲಿ ನಾವೆಲ್ಲ ಒಂದಾಗಿದ್ದೇವೆ ಎಂಬುದು ನೆನಪಿರಲಿ. ಎಲ್ಲರೂ ಸುರಕ್ಷಿತವಾಗಿರಿ. ನಿಮ್ಮ ಕಾಳಜಿ ವಹಿಸಿ’ ಎಂದು ಅವರು ಹೇಳಿದ್ದಾರೆ. ಕೊರೊನಾದಿಂದಾಗಿರುವ ಕಷ್ಟ ಕಾಲದಲ್ಲಿ ವಿರಾಟ್​-ಅನುಷ್ಕಾ ಮಾಡಿರುವ ಆ ಅಭಿಯಾನದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ:

 ವೈರಲ್ ವಿಡಿಯೋ: ಕಿಂಗ್ ಕೊಹ್ಲಿಯನ್ನು ಲಿಫ್ಟ್ ಮಾಡಿದ ಅನುಷ್ಕಾ! ಶಕ್ತಿಮಾನ್ ಅಲ್ಟ್ರಾ ಪ್ರೊ ಮ್ಯಾಕ್ಸ್ ಎಂದ ನೆಟ್ಟಿಗರು

Virat Kohli, Anushka Sharma: ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಬಳಿ ಇರುವ 4 ಅತಿ ದುಬಾರಿ ವಸ್ತುಗಳಿವು!

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ