AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಕೊವಿಡ್​ ಸಂಕಷ್ಟದಲ್ಲಿ ಕೊಯ್ಲಿ-ಅನುಷ್ಕಾ ಕೈಕಟ್ಟಿ ಕೂತಿದ್ದಾರಾ? ಕಡೆಗೂ ಬಾಯ್ಬಿಟ್ಟ ನಟಿ

Virat Kohli | Anushka Sharma: ‘ನಿಮ್ಮೆಲ್ಲರಿಂದಾಗಿ ಈ ದಿನ ನನಗೆ ನಿಜಕ್ಕೂ ಸ್ಪೆಷಲ್​ ಎನಿಸಿದೆ. ಆದರೆ ಈ ಕಷ್ಟದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಅಂತ ನನಗೆ ಅನಿಸಿತು’ ಎಂದು ಅನುಷ್ಕಾ ಶರ್ಮಾ ಹೇಳಿದ್ದಾರೆ.

Anushka Sharma: ಕೊವಿಡ್​ ಸಂಕಷ್ಟದಲ್ಲಿ ಕೊಯ್ಲಿ-ಅನುಷ್ಕಾ ಕೈಕಟ್ಟಿ ಕೂತಿದ್ದಾರಾ? ಕಡೆಗೂ ಬಾಯ್ಬಿಟ್ಟ ನಟಿ
ವಿರಾಟ್​ ಕೊಯ್ಲಿ - ಅನುಷ್ಕಾ ಶರ್ಮಾ
ಮದನ್​ ಕುಮಾರ್​
|

Updated on: May 03, 2021 | 11:23 AM

Share

ಇಡೀ ದೇಶವೇ ಕೊವಿಡ್​ ಕಾಟದಿಂದ ಕಷ್ಟ ಅನುಭವಿಸುತ್ತಿದೆ. ಒಂದೆಡೆ ಅನಾರೋಗ್ಯ ಸಮಸ್ಯೆಯಾದರೆ, ಮತ್ತೊಂದೆಡೆ ಕೆಲಸ ಇಲ್ಲದೆ ಜನರು ಕಂಗೆಟ್ಟಿದ್ದಾರೆ. ಕೊರೊನಾ ಕರ್ಫ್ಯೂ ಕಾರಣದಿಂದ ಬಹುತೇಕ ವ್ಯಾಪಾರ ವ್ಯವಹಾರಗಳು ಕುಸಿದಿವೆ. ಇನ್ನು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಒದ್ದಾಡುತ್ತಿರುವವರಿಗೆ ಲೆಕ್ಕವೇ ಇಲ್ಲ. ಈ ಸಂದರ್ಭದಲ್ಲಿ ಕೆಲವು ಸೆಲೆಬ್ರಿಟಿಗಳು ಕೈಕಟ್ಟಿ ಕುಳಿತಿದ್ದಾರೆ. ಯಾರಿಗೆ ಏನಾದರೂ ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮನೆಯಲ್ಲಿ ಹಾಯಾಗಿ ಇದ್ದಾರೆ. ನಟಿ ಅನುಷ್ಕಾ ಶರ್ಮಾ ಮತ್ತು ಅವರ ಪತಿ ವಿರಾಟ್​ ಕೊಯ್ಲಿ ಏನು ಮಾಡ್ತಿದ್ದಾರೆ? ಆ ಬಗ್ಗೆ ಅನುಷ್ಕಾ ಮಾತನಾಡಿದ್ದಾರೆ.

ಮೇ 1ರಂದು ಅನುಷ್ಕಾ ಶರ್ಮಾ ಬರ್ತ್​ಡೇ. ಆದರೆ ಅವರು ಯಾವುದೇ ರೀತಿಯ ಸಂಭ್ರಮಾಚರಣೆ ಮಾಡಿಕೊಂಡಿಲ್ಲ. ತಮಗೆ ಸೋಶಿಯಲ್​ ಮೀಡಿಯಾ ಮೂಲಕ ವಿಶ್​ ಮಾಡಿರುವ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ. ಆ ಸಲುವಾಗಿ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿರುವ ಅವರು ಕೆಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.

‘ನಿಮ್ಮೆಲ್ಲರಿಂದಾಗಿ ಈ ದಿನ ನನಗೆ ನಿಜಕ್ಕೂ ಸ್ಪೆಷಲ್​ ಎನಿಸಿದೆ. ಆದರೆ ಈ ಕಷ್ಟದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿತು. ನೀವು ಮಾಡಿದ ಎಲ್ಲ ಮೆಸೇಜ್​ ನೋಡಿದ್ದೇನೆ. ಅದೇ ರೀತಿ ನಿಮಗಾಗಿ ನನ್ನ ಕಡೆಯಿಂದ ಒಂದು ಮುಖ್ಯವಾದ ಮೆಸೇಜ್​ ಇದೆ. ಈ ಪರಿಸ್ಥಿತಿಯಲ್ಲಿ ನಾವೆಲ್ಲರೂ ಜೊತೆಯಾಗಿದ್ದು ದೇಶಕ್ಕೆ ಬೆಂಬಲ ನೀಡಬೇಕು’ ಎಂದು ಅನುಷ್ಕಾ ಹೇಳಿದ್ದಾರೆ.

‘ನಾನು ಮತ್ತು ವಿರಾಟ್​ ಕೂಡ ತಮ್ಮ ಪಾಲಿನ ಕೆಲಸ ಮಾಡುತ್ತಿದ್ದೇವೆ. ಆ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ. ನೀವು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಬಹುದು. ಈ ಸಂದರ್ಭದಲ್ಲಿ ನಾವೆಲ್ಲ ಒಂದಾಗಿದ್ದೇವೆ ಎಂಬುದು ನೆನಪಿರಲಿ. ಎಲ್ಲರೂ ಸುರಕ್ಷಿತವಾಗಿರಿ. ನಿಮ್ಮ ಕಾಳಜಿ ವಹಿಸಿ’ ಎಂದು ಅವರು ಹೇಳಿದ್ದಾರೆ. ಕೊರೊನಾದಿಂದಾಗಿರುವ ಕಷ್ಟ ಕಾಲದಲ್ಲಿ ವಿರಾಟ್​-ಅನುಷ್ಕಾ ಮಾಡಿರುವ ಆ ಅಭಿಯಾನದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ:

 ವೈರಲ್ ವಿಡಿಯೋ: ಕಿಂಗ್ ಕೊಹ್ಲಿಯನ್ನು ಲಿಫ್ಟ್ ಮಾಡಿದ ಅನುಷ್ಕಾ! ಶಕ್ತಿಮಾನ್ ಅಲ್ಟ್ರಾ ಪ್ರೊ ಮ್ಯಾಕ್ಸ್ ಎಂದ ನೆಟ್ಟಿಗರು

Virat Kohli, Anushka Sharma: ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಬಳಿ ಇರುವ 4 ಅತಿ ದುಬಾರಿ ವಸ್ತುಗಳಿವು!

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು