AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್

Anushka Sharma - Virat Kohli: ಜನಪ್ರಿಯತೆ ಪಡೆದ ವಿಡಿಯೋದಲ್ಲಿ, ಅನುಷ್ಕಾ ಅವರಿಗೆ ಅಭಿನಂದನೆ ಸಲ್ಲಿಸಲು ತಮ್ಮ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ‘ಮೇರೆ ಮೆಹಬೂಬ್ ಖಯಾಮತ್​ ಹೋಗಿ’ ಹಾಡನ್ನು ಶುಶ್ರಾವ್ಯವಾಗಿ ಹಾಡಿದ್ದಾರೆ. ವಿರಾಟ್​ ಹಾಡು ಹೇಳುತ್ತಿದ್ದಂತೆಯೇ ಅನುಷ್ಕಾ ಕಣ್ಣಲ್ಲಿ ಆನಂದಭಾಷ್ಪ ತುಂಬಿ ಬಂದಿದೆ.

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್
ವಿರಾಟ್​ ಕೊಯ್ಲಿ - ಅನುಷ್ಕಾ ಶರ್ಮಾ
TV9 Web
| Edited By: |

Updated on:Jun 16, 2021 | 11:46 AM

Share

ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಜನರಿಗೆ ಫೇವರೇಟ್​ ಜೋಡಿ. ಬಾಲಿವುಡ್​ನಲ್ಲಿ ಹೆಸರು ಮಾಡಿದ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟ್​ನಲ್ಲಿ ಜನಪ್ರಿಯತೆ ಗಿಟ್ಟಿಸಿಕೊಂಡ ವಿರಾಟ್​ ಜೋಡಿ ಹಲವರಿಗೆ ರೋಲ್​ ಮಾಡೆಲ್​ ಕೂಡಾ ಆಗಿದ್ದಾರೆ. ಇತ್ತೀಚೆಗಷ್ಟೇ ಮಗಳಿಗೆ ಜನ್ಮ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದ ಈ ಜೋಡಿ ‘ವಿರುಷ್ಕಾ’ ಎಂದೇ ಹೆಸರು ಗಿಟ್ಟಿಸಿಕೊಂಡಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಹಾಡು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿರಾಟ್​ ಹಾಡು ಕೇಳುತ್ತಿದ್ದಂತೆಯೇ ಅನುಷ್ಕಾರಿಗೆ ಕಣ್ತುಂಬಿ ಬಂದಿದೆ.

ಭಾರತೀಯ ಕ್ರಿಕೆಟ್​ ನಾಯಕ ವಿರಾಟ್​ ಕೊಹ್ಲಿ ಸಂಗಾತಿ ಅನುಷ್ಕಾ ಶರ್ಮರಿಗಾಗಿ ಹಾಡನ್ನು ಹಾಡಿದ್ದಾರೆ. ಜನಪ್ರಿಯತೆ ಪಡೆದ ವಿಡಿಯೋದಲ್ಲಿ, ಅನುಷ್ಕಾ ಅವರಿಗೆ ಅಭಿನಂದನೆ ಸಲ್ಲಿಸಲು ತಮ್ಮ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ‘ಮೇರೆ ಮೆಹಬೂಬ್ ಖಯಾಮತ್​ ಹೋಗಿ’ ಹಾಡನ್ನು ಶುಶ್ರಾವ್ಯವಾಗಿ ಹಾಡಿದ್ದಾರೆ. ವಿರಾಟ್​ ಹಾಡು ಹೇಳುತ್ತಿದ್ದಂತೆಯೇ ಅನುಷ್ಕಾ ಕಣ್ಣಲ್ಲಿ ಆನಂದಭಾಷ್ಪ ತುಂಬಿ ಬಂದಿದೆ.

2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾದರು. ಈ ವರ್ಷದ ಜನವರಿ ತಿಂಗಳಿನಲ್ಲಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಅವಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಲಾಯಿತು.

ಅನುಷ್ಕಾ ಶರ್ಮಾ, ಶಾರುಖ್​ ಖಾನ್​ ಅವರೊಂದಿಗೆ ರಬ್​ ನೆ ಬನಾದಿ ಜೋಡಿ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಇವರು ಸುಲ್ತಾನ್​, ಬ್ಯಾಂಡ್​ ಭಜಾ ಭಾರತ್​, ದಿಲ್​ ಧಡಕನೆ ದೋ, ಎ ದಿಲ್​ ಹೇ ಮುಷ್ಕಿಲ್​, ಸುಯಿ ಧಾಗಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. 2018ರ ಬಳಿಕ ನಟಿ ಅನುಷ್ಕಾ ಶರ್ಮಾ ನಟನೆಯಲ್ಲಿ ವಿರಾಮ ತೆಗೆದುಕೊಂಡಿದ್ದಾರೆ. ಭಾರತ ಪ್ರಸ್ತುತದಲ್ಲಿ ವಿಶ್ವ ಚಾಂಪಿಯನ್​ ಶಿಪ್​ ಸರಣಿಯಲ್ಲಿ ಆಡುತ್ತಿರುವುದರಿಂದ ಅನುಷ್ಕಾ ಮತ್ತು ಅವರ ಪುತ್ರಿ ವಮಿಕಾ, ವಿರಾಟ್​ ಕೊಹ್ಲಿ ಅವರೊಂದಿಗೆ ಇಂಗ್ಲೆಂಡ್​ಗೆ ತೆರಳಿದ್ದಾರೆ.

ಇದನ್ನೂ ಓದಿ:

Virat Kohli: ಸ್ವಲ್ಪ ಸ್ವಲ್ಪ ಕನ್ನಡ ಬರುತ್ತೆ; ವಿರಾಟ್ ಕೊಹ್ಲಿ ಮಾತು ಕೇಳಿ ಅಭಿಮಾನಿಗಳು ಫುಲ್ ಖುಷ್!

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?

Published On - 11:28 am, Wed, 16 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ