AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್

Anushka Sharma - Virat Kohli: ಜನಪ್ರಿಯತೆ ಪಡೆದ ವಿಡಿಯೋದಲ್ಲಿ, ಅನುಷ್ಕಾ ಅವರಿಗೆ ಅಭಿನಂದನೆ ಸಲ್ಲಿಸಲು ತಮ್ಮ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ‘ಮೇರೆ ಮೆಹಬೂಬ್ ಖಯಾಮತ್​ ಹೋಗಿ’ ಹಾಡನ್ನು ಶುಶ್ರಾವ್ಯವಾಗಿ ಹಾಡಿದ್ದಾರೆ. ವಿರಾಟ್​ ಹಾಡು ಹೇಳುತ್ತಿದ್ದಂತೆಯೇ ಅನುಷ್ಕಾ ಕಣ್ಣಲ್ಲಿ ಆನಂದಭಾಷ್ಪ ತುಂಬಿ ಬಂದಿದೆ.

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್
ವಿರಾಟ್​ ಕೊಯ್ಲಿ - ಅನುಷ್ಕಾ ಶರ್ಮಾ
TV9 Web
| Edited By: |

Updated on:Jun 16, 2021 | 11:46 AM

Share

ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಜನರಿಗೆ ಫೇವರೇಟ್​ ಜೋಡಿ. ಬಾಲಿವುಡ್​ನಲ್ಲಿ ಹೆಸರು ಮಾಡಿದ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟ್​ನಲ್ಲಿ ಜನಪ್ರಿಯತೆ ಗಿಟ್ಟಿಸಿಕೊಂಡ ವಿರಾಟ್​ ಜೋಡಿ ಹಲವರಿಗೆ ರೋಲ್​ ಮಾಡೆಲ್​ ಕೂಡಾ ಆಗಿದ್ದಾರೆ. ಇತ್ತೀಚೆಗಷ್ಟೇ ಮಗಳಿಗೆ ಜನ್ಮ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದ ಈ ಜೋಡಿ ‘ವಿರುಷ್ಕಾ’ ಎಂದೇ ಹೆಸರು ಗಿಟ್ಟಿಸಿಕೊಂಡಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಹಾಡು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿರಾಟ್​ ಹಾಡು ಕೇಳುತ್ತಿದ್ದಂತೆಯೇ ಅನುಷ್ಕಾರಿಗೆ ಕಣ್ತುಂಬಿ ಬಂದಿದೆ.

ಭಾರತೀಯ ಕ್ರಿಕೆಟ್​ ನಾಯಕ ವಿರಾಟ್​ ಕೊಹ್ಲಿ ಸಂಗಾತಿ ಅನುಷ್ಕಾ ಶರ್ಮರಿಗಾಗಿ ಹಾಡನ್ನು ಹಾಡಿದ್ದಾರೆ. ಜನಪ್ರಿಯತೆ ಪಡೆದ ವಿಡಿಯೋದಲ್ಲಿ, ಅನುಷ್ಕಾ ಅವರಿಗೆ ಅಭಿನಂದನೆ ಸಲ್ಲಿಸಲು ತಮ್ಮ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ‘ಮೇರೆ ಮೆಹಬೂಬ್ ಖಯಾಮತ್​ ಹೋಗಿ’ ಹಾಡನ್ನು ಶುಶ್ರಾವ್ಯವಾಗಿ ಹಾಡಿದ್ದಾರೆ. ವಿರಾಟ್​ ಹಾಡು ಹೇಳುತ್ತಿದ್ದಂತೆಯೇ ಅನುಷ್ಕಾ ಕಣ್ಣಲ್ಲಿ ಆನಂದಭಾಷ್ಪ ತುಂಬಿ ಬಂದಿದೆ.

2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾದರು. ಈ ವರ್ಷದ ಜನವರಿ ತಿಂಗಳಿನಲ್ಲಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಅವಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಲಾಯಿತು.

ಅನುಷ್ಕಾ ಶರ್ಮಾ, ಶಾರುಖ್​ ಖಾನ್​ ಅವರೊಂದಿಗೆ ರಬ್​ ನೆ ಬನಾದಿ ಜೋಡಿ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಇವರು ಸುಲ್ತಾನ್​, ಬ್ಯಾಂಡ್​ ಭಜಾ ಭಾರತ್​, ದಿಲ್​ ಧಡಕನೆ ದೋ, ಎ ದಿಲ್​ ಹೇ ಮುಷ್ಕಿಲ್​, ಸುಯಿ ಧಾಗಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. 2018ರ ಬಳಿಕ ನಟಿ ಅನುಷ್ಕಾ ಶರ್ಮಾ ನಟನೆಯಲ್ಲಿ ವಿರಾಮ ತೆಗೆದುಕೊಂಡಿದ್ದಾರೆ. ಭಾರತ ಪ್ರಸ್ತುತದಲ್ಲಿ ವಿಶ್ವ ಚಾಂಪಿಯನ್​ ಶಿಪ್​ ಸರಣಿಯಲ್ಲಿ ಆಡುತ್ತಿರುವುದರಿಂದ ಅನುಷ್ಕಾ ಮತ್ತು ಅವರ ಪುತ್ರಿ ವಮಿಕಾ, ವಿರಾಟ್​ ಕೊಹ್ಲಿ ಅವರೊಂದಿಗೆ ಇಂಗ್ಲೆಂಡ್​ಗೆ ತೆರಳಿದ್ದಾರೆ.

ಇದನ್ನೂ ಓದಿ:

Virat Kohli: ಸ್ವಲ್ಪ ಸ್ವಲ್ಪ ಕನ್ನಡ ಬರುತ್ತೆ; ವಿರಾಟ್ ಕೊಹ್ಲಿ ಮಾತು ಕೇಳಿ ಅಭಿಮಾನಿಗಳು ಫುಲ್ ಖುಷ್!

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?

Published On - 11:28 am, Wed, 16 June 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ