AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಮಿಕಾ ನೋಡೋಕೆ ಹೇಗಿದ್ದಾಳೆ? ವಿರಾಟ್​ ಕೊಹ್ಲಿ ಸಹೋದರಿ ವಿವರಿಸಿದ್ದಿಷ್ಟು

ದಂಪತಿ ಫೋಟೋ ಅಪ್​ಲೋಡ್​ ಮಾಡಬಹುದು ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಸದ್ಯಕ್ಕಂತೂ ಮಗುವಿನ ಮುಖವನ್ನು ತೋರಿಸುವ ಆಲೋಚನೆ ನಮಗಿಲ್ಲ ಎಂದು ದಂಪತಿ ವಿವರಿಸಿದ್ದರು.

ವಮಿಕಾ ನೋಡೋಕೆ ಹೇಗಿದ್ದಾಳೆ? ವಿರಾಟ್​ ಕೊಹ್ಲಿ ಸಹೋದರಿ ವಿವರಿಸಿದ್ದಿಷ್ಟು
ಪತ್ನಿ ಅನುಷ್ಕಾ ಮತ್ತು ಮಗಳೊಂದಿಗೆ ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 21, 2021 | 7:20 AM

Share

ವಿರಾಟ್​ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಜನವರಿ 11ರಂದು ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿನ ಮುಖವನ್ನು ಯಾರಿಗೂ ತೋರಿಸಬಾರದು ಎನ್ನುವ ನಿರ್ಧಾರಕ್ಕೆ ದಂಪತಿ ಬಂದಿದ್ದಾರೆ. ಹೀಗಾಗಿ, ಮಗುವಿನ ಮುಖವನ್ನು ಯಾರಿಗೂ ತೋರಿಸಿಲ್ಲ. ಹೀಗಿರುವಾಗಲೇ ವಮಿಕಾ ಹೇಗಿದ್ದಾಳೆ ಎನ್ನುವುದನ್ನು ವಿರಾಟ್​ ಸಹೋದರಿ ಭಾವನಾ ವಿವರಿಸಿದ್ದಾರೆ.

ವಮಿಕಾನ್ನು ಕಣ್ತುಂಬಿಕೊಳ್ಳಬೇಕು ಎಂಬುದು ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ಅಭಿಮಾನಿಗಳ ಆಸೆ ಆಗಿತ್ತು. ಈ ದಂಪತಿ ಫೋಟೋ ಅಪ್​ಲೋಡ್​ ಮಾಡಬಹುದು ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಸದ್ಯಕ್ಕಂತೂ ಮಗುವಿನ ಮುಖವನ್ನು ತೋರಿಸುವ ಆಲೋಚನೆ ನಮಗಿಲ್ಲ ಎಂದು ದಂಪತಿ ವಿವರಿಸಿದ್ದರು. ಹಾಗಂತ ಅಭಿಮಾನಿಗಳು ಸುಮ್ಮನೆ ಕೂತಿಲ್ಲ. ವಿರಾಟ್​ ಕುಟುಂಬದವರಲ್ಲಿ ವಮಿಕಾ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

ಇತ್ತೀಚೆಗೆ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ಆರಂಭಿಸಿದ್ದರು ಭಾವನಾ. ಆಗ ಅಭಿಮಾನಿಯೋರ್ವ, ‘ನೀವು ವಮಿಕಾನಾ ಭೇಟಿ ಮಾಡಿದ್ದೀರಾ? ಅವಳು ಕೊಹ್ಲಿ ಹಾಗಿದ್ದಾಳೋ ಅಥವಾ ಅನುಷ್ಕಾ ತರಹ ಕಾಣುತ್ತಾಳೋ’ ಎಂದು ಪ್ರಶ್ನೆ ಮಾಡಿದ್ದ. ಈ ಪ್ರಶ್ನೆ ಓದಿರುವ ಭಾವನಾ ಜಾಣತನದ ಉತ್ತರ ನೀಡಿದ್ದಾರೆ.  ‘ನಾನು ವಮಿಕಾಳನ್ನು ಭೇಟಿ ಮಾಡಿದ್ದೇನೆ. ಆಕೆ ಏಂಜಲ್​ ತರಹ ಇದ್ದಾಳೆ’ ಎಂದಿದ್ದಾರೆ. ಈ ಉತ್ತರ ನೋಡಿದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆಗಿದೆ.

ಈ ಬಗ್ಗೆ ಪ್ರಶ್ನೆ ಹೆಚ್ಚಿದ ಬೆನ್ನಲ್ಲೇ ಭಾವನಾ ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ. ವಿರಾಟ್​-ಅನುಷ್ಕಾ ಮಗಳ ಮುಖವನ್ನು ತೋರಿಸುವುದಿಲ್ಲ ಎಂದು ಹೇಳಿದ್ದಾರೆ. ಯಾವುದಾದರೂ ಮಾಧ್ಯಮಗಳು ವಮಿಕಾ ಫೋಟೋ ಇದು ಎಂದು ವರದಿ ಬಿತ್ತರಿಸಿದರೆ ಅದನ್ನು ನಂಬಬೇಡಿ. ನಾವು ಅನುಷ್ಕಾ-ವಿರಾಟ್​ ನಿರ್ಧಾರವನ್ನು ಗೌರವಿಸೋಣ ಎಂದಿದ್ದಾರೆ.

ವರ್ಲ್ಡ್​​ ಟೆಸ್ಟ್​ ಚಾಂಪಿಯನ್​ಶಿಪ್​ಗಾಗಿ ಅನುಷ್ಕಾ-ವಿರಾಟ್​ ಇಂಗ್ಲೆಂಡ್​ಗೆ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳು ಮಗುವಿನ ಫೋಟೋ ಕ್ಲಿಕ್​ ಮಾಡಲು ಪ್ರಯತ್ನಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘ಆ ಮಗುವಿಗೆ ಉಸಿರು ಕಟ್ಟುತ್ತಿದೆ’; ಅನುಷ್ಕಾ-ವಿರಾಟ್​ ಪುತ್ರಿ ವಮಿಕಾ ವಿಚಾರದಲ್ಲಿ ನೆಟ್ಟಿಗರ ಆಕ್ರೋಶ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!