AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಮಿಕಾ ನೋಡೋಕೆ ಹೇಗಿದ್ದಾಳೆ? ವಿರಾಟ್​ ಕೊಹ್ಲಿ ಸಹೋದರಿ ವಿವರಿಸಿದ್ದಿಷ್ಟು

ದಂಪತಿ ಫೋಟೋ ಅಪ್​ಲೋಡ್​ ಮಾಡಬಹುದು ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಸದ್ಯಕ್ಕಂತೂ ಮಗುವಿನ ಮುಖವನ್ನು ತೋರಿಸುವ ಆಲೋಚನೆ ನಮಗಿಲ್ಲ ಎಂದು ದಂಪತಿ ವಿವರಿಸಿದ್ದರು.

ವಮಿಕಾ ನೋಡೋಕೆ ಹೇಗಿದ್ದಾಳೆ? ವಿರಾಟ್​ ಕೊಹ್ಲಿ ಸಹೋದರಿ ವಿವರಿಸಿದ್ದಿಷ್ಟು
ಪತ್ನಿ ಅನುಷ್ಕಾ ಮತ್ತು ಮಗಳೊಂದಿಗೆ ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 21, 2021 | 7:20 AM

Share

ವಿರಾಟ್​ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಜನವರಿ 11ರಂದು ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿನ ಮುಖವನ್ನು ಯಾರಿಗೂ ತೋರಿಸಬಾರದು ಎನ್ನುವ ನಿರ್ಧಾರಕ್ಕೆ ದಂಪತಿ ಬಂದಿದ್ದಾರೆ. ಹೀಗಾಗಿ, ಮಗುವಿನ ಮುಖವನ್ನು ಯಾರಿಗೂ ತೋರಿಸಿಲ್ಲ. ಹೀಗಿರುವಾಗಲೇ ವಮಿಕಾ ಹೇಗಿದ್ದಾಳೆ ಎನ್ನುವುದನ್ನು ವಿರಾಟ್​ ಸಹೋದರಿ ಭಾವನಾ ವಿವರಿಸಿದ್ದಾರೆ.

ವಮಿಕಾನ್ನು ಕಣ್ತುಂಬಿಕೊಳ್ಳಬೇಕು ಎಂಬುದು ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ಅಭಿಮಾನಿಗಳ ಆಸೆ ಆಗಿತ್ತು. ಈ ದಂಪತಿ ಫೋಟೋ ಅಪ್​ಲೋಡ್​ ಮಾಡಬಹುದು ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿತ್ತು. ಸದ್ಯಕ್ಕಂತೂ ಮಗುವಿನ ಮುಖವನ್ನು ತೋರಿಸುವ ಆಲೋಚನೆ ನಮಗಿಲ್ಲ ಎಂದು ದಂಪತಿ ವಿವರಿಸಿದ್ದರು. ಹಾಗಂತ ಅಭಿಮಾನಿಗಳು ಸುಮ್ಮನೆ ಕೂತಿಲ್ಲ. ವಿರಾಟ್​ ಕುಟುಂಬದವರಲ್ಲಿ ವಮಿಕಾ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

ಇತ್ತೀಚೆಗೆ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ಆರಂಭಿಸಿದ್ದರು ಭಾವನಾ. ಆಗ ಅಭಿಮಾನಿಯೋರ್ವ, ‘ನೀವು ವಮಿಕಾನಾ ಭೇಟಿ ಮಾಡಿದ್ದೀರಾ? ಅವಳು ಕೊಹ್ಲಿ ಹಾಗಿದ್ದಾಳೋ ಅಥವಾ ಅನುಷ್ಕಾ ತರಹ ಕಾಣುತ್ತಾಳೋ’ ಎಂದು ಪ್ರಶ್ನೆ ಮಾಡಿದ್ದ. ಈ ಪ್ರಶ್ನೆ ಓದಿರುವ ಭಾವನಾ ಜಾಣತನದ ಉತ್ತರ ನೀಡಿದ್ದಾರೆ.  ‘ನಾನು ವಮಿಕಾಳನ್ನು ಭೇಟಿ ಮಾಡಿದ್ದೇನೆ. ಆಕೆ ಏಂಜಲ್​ ತರಹ ಇದ್ದಾಳೆ’ ಎಂದಿದ್ದಾರೆ. ಈ ಉತ್ತರ ನೋಡಿದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆಗಿದೆ.

ಈ ಬಗ್ಗೆ ಪ್ರಶ್ನೆ ಹೆಚ್ಚಿದ ಬೆನ್ನಲ್ಲೇ ಭಾವನಾ ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ. ವಿರಾಟ್​-ಅನುಷ್ಕಾ ಮಗಳ ಮುಖವನ್ನು ತೋರಿಸುವುದಿಲ್ಲ ಎಂದು ಹೇಳಿದ್ದಾರೆ. ಯಾವುದಾದರೂ ಮಾಧ್ಯಮಗಳು ವಮಿಕಾ ಫೋಟೋ ಇದು ಎಂದು ವರದಿ ಬಿತ್ತರಿಸಿದರೆ ಅದನ್ನು ನಂಬಬೇಡಿ. ನಾವು ಅನುಷ್ಕಾ-ವಿರಾಟ್​ ನಿರ್ಧಾರವನ್ನು ಗೌರವಿಸೋಣ ಎಂದಿದ್ದಾರೆ.

ವರ್ಲ್ಡ್​​ ಟೆಸ್ಟ್​ ಚಾಂಪಿಯನ್​ಶಿಪ್​ಗಾಗಿ ಅನುಷ್ಕಾ-ವಿರಾಟ್​ ಇಂಗ್ಲೆಂಡ್​ಗೆ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳು ಮಗುವಿನ ಫೋಟೋ ಕ್ಲಿಕ್​ ಮಾಡಲು ಪ್ರಯತ್ನಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘ಆ ಮಗುವಿಗೆ ಉಸಿರು ಕಟ್ಟುತ್ತಿದೆ’; ಅನುಷ್ಕಾ-ವಿರಾಟ್​ ಪುತ್ರಿ ವಮಿಕಾ ವಿಚಾರದಲ್ಲಿ ನೆಟ್ಟಿಗರ ಆಕ್ರೋಶ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ