AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕಾಗಿ ಇನ್ನೂ ಏನೇನು ಮಾಡ್ತಾರೋ?  ಕೊಹ್ಲಿ ಟೀಕಿಸಿದ್ದ ಗಾಯಕ ರಾಹುಲ್ ವೈದ್ಯ ಹೊಸ ಕಥೆ

ಗಾಯಕ ರಾಹುಲ್ ವೈದ್ಯ ಅವರನ್ನು ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್‌ನಲ್ಲಿ ಬ್ಲಾಕ್ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು. ನಂತರ ಕೊಹ್ಲಿ ಅವರನ್ನು ಅನ್‌ಬ್ಲಾಕ್ ಮಾಡಿದಾಗ, ರಾಹುಲ್ ಧನ್ಯವಾದ ಹೇಳಿದರು. ಆದರೆ ಈ ಘಟನೆಯು ರಾಹುಲ್ ಅವರ ಪ್ರಚಾರದ ತಂತ್ರವೇ ಎಂಬುದು ಚರ್ಚೆಯಾಗಿದೆ. ಅವರು ವಿರಾಟ್ ಕೊಹ್ಲಿ ಅವರ ಸಹೋದರರೊಂದಿಗೂ ವಾಗ್ವಾದ ನಡೆಸಿದ್ದಾರೆ.  

ಪ್ರಚಾರಕ್ಕಾಗಿ ಇನ್ನೂ ಏನೇನು ಮಾಡ್ತಾರೋ?  ಕೊಹ್ಲಿ ಟೀಕಿಸಿದ್ದ ಗಾಯಕ ರಾಹುಲ್ ವೈದ್ಯ ಹೊಸ ಕಥೆ
Rahul Vaidya
 ಶ್ರೀಲಕ್ಷ್ಮೀ ಎಚ್
| Edited By: |

Updated on: May 19, 2025 | 7:52 AM

Share

ಗಾಯಕ ರಾಹುಲ್ ವೈದ್ಯ (Rahul Vaidya) ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್​ನಲ್ಲಿ ತಮ್ಮನ್ನು ಬ್ಲಾಕ್ ಮಾಡಿದ್ದಾರೆ ಎಂದು ರಾಹುಲ್ ಹೇಳಿದ್ದರು. ಈ ಬಗ್ಗೆ ಅವರು ವಿರಾಟ್ ಬಗ್ಗೆ ವ್ಯಂಗ್ಯವಾಡಿದರು. ಇಷ್ಟೆಲ್ಲಾ ನಾಟಕದ ನಂತರ, ವಿರಾಟ್ ಕೊನೆಗೂ ಇನ್ಸ್ಟಾಗ್ರಾಮ್​ನಲ್ಲಿ ಅವರ ಬ್ಲಾಕ್ ತೆಗೆದುಹಾಕಿದ್ದಾರಂತೆ. ಈ ವಿಚಾರದಲ್ಲೂ ರಾಹುಲ್ ಪ್ರಚಾರ ಗಿಟ್ಟಿಸಿಕೊಳ್ಳಲು ನೋಡಿದ್ದಾರೆ.

ವಿರಾಟ್ ಅವರನ್ನು ಅನ್‌ಬ್ಲಾಕ್ ಮಾಡಿದ ತಕ್ಷಣ, ರಾಹುಲ್ ಅವರಿಗೆ ಧನ್ಯವಾದ ಹೇಳಲು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದರು. ‘ನನ್ನನ್ನು ಅನಿರ್ಬಂಧಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಧನ್ಯವಾದಗಳು. ನೀವು ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್ ಮತ್ತು ನೀವು ಭಾರತದ ಹೆಮ್ಮೆ. ಜೈ ಹಿಂದ್. ದೇವರ ಆಶೀರ್ವಾದ ಯಾವಾಗಲೂ ನಿಮ್ಮ ಮತ್ತು ನಿಮ್ಮ ಕುಟುಂಬದ ಮೇಲೆ ಇರಲಿ” ಎಂದು ರಾಹುಲ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

‘ನನ್ನ ಹೆಂಡತಿ ಮತ್ತು ಸಹೋದರಿಯನ್ನು ನಿಂದಿಸಿದ, ನನ್ನ ಪುಟ್ಟ ಮಗಳ ಫೋಟೋಗಳನ್ನು ಮಾರ್ಫ್ ಮಾಡಿದ ಮತ್ತು ನನಗೆ ಮತ್ತು ನನ್ನ ಆಪ್ತರಿಗೆ ಲೆಕ್ಕವಿಲ್ಲದಷ್ಟು ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದ ಬಾಲಿಶ ಜನರಿಗೆ ದೇವರು ಬುದ್ಧಿ ನೀಡಲಿ. ನಾನು ಅದೇ ಭಾಷೆಯಲ್ಲಿ ಅಥವಾ ಅದಕ್ಕಿಂತಲೂ ಕೆಟ್ಟದಾಗಿ ಪ್ರತಿಕ್ರಿಯಿಸಬಹುದು, ಆದರೆ ನಾನು ಪ್ರತಿಕ್ರಿಯಿಸುವುದಿಲ್ಲ. ಏಕೆಂದರೆ ಅದು ನಕಾರಾತ್ಮಕತೆಯನ್ನು ಮಾತ್ರ ಹರಡುತ್ತದೆ ಮತ್ತು ಏನನ್ನೂ ಸಾಬೀತುಪಡಿಸುವುದಿಲ್ಲ’ ಎಂದು ಅವರು ಟ್ರೋಲ್‌ಗಳಿಗೆ ಹೇಳಿದರು.

ಇದನ್ನೂ ಓದಿ
Image
ಪ್ರತಿಷ್ಠಿತ ಕಾನ್ಸ್ ಫಿಲ್ಮ್​ ಚಿತ್ರೋತ್ಸವದಲ್ಲಿ ಲಕ್ಷ್ಮೀ ನಿವಾಸ ನಟಿ ದಿಶಾ
Image
ಸಿನಿಮಾ ರಿಲೀಸ್​ಗೂ ಮೊದಲೇ ಸೋಲಿನ ಬಗ್ಗೆ ಮಾತನಾಡಿದ ವಿಜಯ್ ದೇವರಕೊಂಡ
Image
ಅಮಿತಾಭ್​ಗೆ 200 ಜನರಿಂದ ರಕ್ತದಾನ; ಅವರ ಜೀವನವನ್ನೇ ನಾಶ ಮಾಡಿತು ಆ ಘಟನೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಈ ಪೋಸ್ಟ್‌ನಲ್ಲಿ ರಾಹುಲ್ ಅವರು ವಿರಾಟ್ ಸಹೋದರನ ಬಗ್ಗೆಯೂ ಉಲ್ಲೇಖಿಸಿದ್ದಾರೆ. ‘ವಿಕಾಸ್ ಕೊಹ್ಲಿ ಸಹೋದರ, ನೀವು ನನಗೆ ಹೇಳಿದ ಯಾವುದರ ಬಗ್ಗೆಯೂ ನನಗೆ ಬೇಸರವಿಲ್ಲ. ನೀವು ತುಂಬಾ ಒಳ್ಳೆಯ ವ್ಯಕ್ತಿ ಎಂದು ನನಗೆ ತಿಳಿದಿದೆ. ಮ್ಯಾಂಚೆಸ್ಟರ್ ಅಥವಾ ಓವಲ್ ಕ್ರೀಡಾಂಗಣದ ಹೊರಗೆ ನೀವು ಭೇಟಿಯಾದದ್ದು ಮತ್ತು ನನ್ನ ಹಾಡುಗಾರಿಕೆಯ ಬಗ್ಗೆ ನೀವು ಹೇಳಿದ ಒಳ್ಳೆಯ ಮಾತುಗಳು ನನಗೆ ಇನ್ನೂ ನೆನಪಿವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ; ಏನಿದರ ವಿಶೇಷತೆ?

ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ತಮ್ಮನ್ನು ಬ್ಲಾಕ್ ಮಾಡಿರುವುದಾಗಿ ಹೇಳಿದ್ದರು. ‘ವಿರಾಟ್ ಕೊಹ್ಲಿ ಅಭಿಮಾನಿಗಳು ಅವರಿಗಿಂತ ದೊಡ್ಡ ಜೋಕರ್‌ಗಳು’ ಎಂದು ಅವರು ಹೇಳಿದ್ದರು. ಅದಾದ ನಂತರ, ವಿಕಾಸ್ ಕೊಹ್ಲಿ ಅವರು ರಾಹುಲ್‌ಗಾಗಿ ಒಂದು ಪೋಸ್ಟ್ ಬರೆದರು. ವಿಕಾಸ್ ತಮ್ಮ ಹಾಡಿಗೆ ಅಷ್ಟೊಂದು ಶ್ರಮ ಹಾಕಿದ್ದರೆ, ಅವರು ಪ್ರಸಿದ್ಧರಾಗಬಹುದಿತ್ತು ಎಂದು ಟೀಕಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು