AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾನಿಶ್ ಸೇಠ್ ಮಾತಿಗೆ ಸಿಟ್ಟಾಗಿ ಎದ್ದೇ ಹೋದ ವಿರಾಟ್ ಕೊಹ್ಲಿ

ದಾನಿಶ್ ಸೇಠ್ ಅವರೊಂದಿಗಿನ ಇತ್ತೀಚಿನ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಅವರು ಸಿಟ್ಟಾಗಿ ಎದ್ದೇ ಹೋದ ಘಟನೆ ಚರ್ಚೆಯಾಗಿದೆ. ಸಂದರ್ಶನದಲ್ಲಿ ಆಧ್ಯಾತ್ಮಿಕತೆ ಕುರಿತು ಚರ್ಚೆ ನಡೆದಿದ್ದು, ಕೊಹ್ಲಿ ಅವರು ಧ್ಯಾನದ ಸಲಹೆಗಳನ್ನು ನೀಡಿದ್ದಾರೆ. ದಾನಿಶ್ ಅವರು ಕೊಹ್ಲಿಯನ್ನು ತಬ್ಬಿಕೊಳ್ಳಲು ಯತ್ನಿಸಿದಾಗ ಅವರಿಗೆ ಸಿಟ್ಟು ಬಂದಿದೆ.

ದಾನಿಶ್ ಸೇಠ್ ಮಾತಿಗೆ ಸಿಟ್ಟಾಗಿ ಎದ್ದೇ ಹೋದ ವಿರಾಟ್ ಕೊಹ್ಲಿ
ವಿರಾಟ್, ದಾನಿಶ್
ರಾಜೇಶ್ ದುಗ್ಗುಮನೆ
|

Updated on: Apr 15, 2025 | 1:07 PM

Share

ನಟ ದಾನಿಶ್ ಸೇಠ್ (Danish Sait) ಅವರು ಐಪಿಎಲ್ ಸಂದರ್ಭದಲ್ಲಿ ಆರ್​ಸಿಬಿ ಇನ್​ಸೈಡರ್ ಆಗಿ ಗಮನ ಸೆಳೆಯುತ್ತಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸದಸ್ಯರ ಜೊತೆ ಸಂದರ್ಶನಗಳನ್ನು ಮಾಡಿ ಹಂಚಿಕೊಳ್ಳುತ್ತಾರೆ. ಪ್ರತಿ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಸಂದರ್ಶನ  ಮಾಡುತ್ತಾರೆ. ಈ ಬಾರಿ ಆ ಸಂದರ್ಶನ ಇನ್ನೂ ಬಂದಿರಲಿಲ್ಲ. ಈಗ ದಾನಿಶ್ ಸೇಠ್ ಅವರು ವಿರಾಟ್​ನ ಸಂದರ್ಶಿಸಿದ್ದಾರೆ. ಈ ವೇಳೆ ವಿರಾಟ್ ಸಿಟ್ಟಾಗಿ ಎದ್ದೇ ಹೋಗಿದ್ದಾರೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? ಆ ಬಗ್ಗೆ ಇಲ್ಲಿದೆ ವಿವರ.

ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಆಧ್ಯಾತ್ಮದ ಕಡೆ ವಾಲಿದ್ದಾರೆ. ಪ್ರೇಮಾನಂದ ಗೋವಿಂದ ಶರಣ್ ಮಹಾರಾಜ್ ಹಾಗೂ ಬಾಬಾ ನೀಮ್ ಕರೋಲಿ ಮಂದಿರಕ್ಕೆ ಪತ್ನಿ ಜೊತೆ ತೆರಳಿ ಧ್ಯಾನ ಮಾಡಿದ್ದೂ ಇದೆ. ಈ ಕಾರಣಕ್ಕೆ ಇದೇ ಥೀಮ್​ನಲ್ಲಿ ಸಂದರ್ಶನವನ್ನು ಆಯೋಜನೆ ಮಾಡಲಾಗಿತ್ತು ಅನ್ನೋದು ವಿಶೇಷ. ಸಂದರ್ಶನ ಉದ್ದಕ್ಕೂ ಆಧ್ಯತ್ಮದ ಬಗ್ಗೆ  ಚರ್ಚೆಗಳು ನಡೆದಿವೆ. ಈ ವೇಳೆ ವಿರಾಟ್ ಕೆಲವು ಟಿಪ್ಸ್ ಕೊಟ್ಟಿದ್ದಾರೆ.

‘ನಿಮಗೆ ಕಂಫರ್ಟ್ ಆಗುವ ಆಸನದಲ್ಲಿ ಕುಳಿತುಕೊಳ್ಳಿ. ದೀರ್ಘವಾಗಿ ಮೂಗಿನ ಮೂಲಕ ಉಸಿರು ತೆಗೆದುಕೊಳ್ಳಿ, ಬಾಯಿ ಮೂಲಕ ಉಸಿರನ್ನು ಬಿಡಿ. ಸಮುದ್ರದ ಸೌಂಡ್​ನ ಊಹಿಸಿಕೊಳ್ಳಿ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ರೀತಿಯ ಅನೇಕ ಟಿಪ್ಸ್​ಗಳನ್ನು ಅವರು ನೀಡಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿಯನ್ನು ದಾನಿಶ್ ತಬ್ಬಿಕೊಂಡಿದ್ದಾರೆ. ಇದರಿಂದ ಕೊಹ್ಲಿ ಸಿಟ್ಟಾಗಿದ್ದಾರೆ.

ಇದನ್ನೂ ಓದಿ
Image
ಮಗನನ್ನು ಫ್ಯಾಷನ್ ಶೋಗೆ ಕರೆದುಕೊಂಡು ಹೋಗಿ ಟ್ರೋಲ್ ಆದ ನತಾಶಾ
Image
‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

‘ನೀವೇ ತಾನೇ ಪ್ರೀತಿ ಪಾತ್ರರಿಗೆ ಪ್ರೀತಿ ಕೊಡಿ ಎಂದು ಹೇಳಿದ್ದು’ ಎಂದು ದಾನಿಶ್ ಅವರು ಕೊಹ್ಲಿಗೆ ಕೇಳಿದ್ದಾರೆ. ‘ಸ್ನಾನ ಆದ ಬಳಿಕ ಬಂದು ನೀವು ಹಗ್ ಕೊಡಬೇಕು. ಸ್ನಾನ ಮಾಡದೆ ಬಂದಿದ್ದಕ್ಕೆ ನನ್ನ ಶಾಂತಿಯೆಲ್ಲ ಹಾಳಾಯಿತು. ನಾನು ಹೊಗಬೇಕು, ಸ್ನಾನ ಮಾಡಬೇಕು’ ಎಂದು ಕೊಹ್ಲಿ ಹೊರಟರು. ‘ಶಾಂತಿ ಕಾಪಾಡಿಕೊಳ್ಳಿ’ ಎಂದು ದಾನಿಶ್ ಕೋರಿದರು. ಆದರೆ ಕೊಹ್ಲಿ ಕೂಗಾಡುತ್ತಾ ಹೊರಟೇಬಿಟ್ಟರು.

ಇದನ್ನೂ ಓದಿ:  ದ್ರಾವಿಡ್ ಊರುಗೋಲಿನ ಸಹಾಯದಿಂದ ಮೈದಾನಕ್ಕೆ ಬಂದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ

ಅಂದಹಾಗೆ, ಇದು ಸಂಪೂರ್ಣವಾಗಿ ಸ್ಕ್ರಿಪ್ಟೆಡ್ ಕಾರ್ಯಕ್ರಮ. ವಿರಾಟ್ ಕೊಹ್ಲಿ ಸಿಟ್ಟು ಮಾಡಿಕೊಂಡಿದ್ದು ಕೂಡ ಸ್ಕ್ರಿಪ್ಟ್​ನ ಒಂದು ಭಾಗ ಅಷ್ಟೇ. ಈ ಮೊದಲು ಕೂಡ ಕೊಹ್ಲಿ ಅವರು ದಾನಿಶ್ ಬಗ್ಗೆ ಸಿಟ್ಟಾದಂತೆ ನಟಿಸಿದ ಸಾಕಷ್ಟು ಉದಾಹರಣೆಗಳು ಇವೆ. ಆದರೆ, ಎಲ್ಲವೂ ಸ್ಕ್ರಿಪ್ಟ್​ನ ಭಾಗ ಅಷ್ಟೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು