AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾನಿಶ್ ಸೇಠ್ ಮಾತಿಗೆ ಸಿಟ್ಟಾಗಿ ಎದ್ದೇ ಹೋದ ವಿರಾಟ್ ಕೊಹ್ಲಿ

ದಾನಿಶ್ ಸೇಠ್ ಅವರೊಂದಿಗಿನ ಇತ್ತೀಚಿನ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಅವರು ಸಿಟ್ಟಾಗಿ ಎದ್ದೇ ಹೋದ ಘಟನೆ ಚರ್ಚೆಯಾಗಿದೆ. ಸಂದರ್ಶನದಲ್ಲಿ ಆಧ್ಯಾತ್ಮಿಕತೆ ಕುರಿತು ಚರ್ಚೆ ನಡೆದಿದ್ದು, ಕೊಹ್ಲಿ ಅವರು ಧ್ಯಾನದ ಸಲಹೆಗಳನ್ನು ನೀಡಿದ್ದಾರೆ. ದಾನಿಶ್ ಅವರು ಕೊಹ್ಲಿಯನ್ನು ತಬ್ಬಿಕೊಳ್ಳಲು ಯತ್ನಿಸಿದಾಗ ಅವರಿಗೆ ಸಿಟ್ಟು ಬಂದಿದೆ.

ದಾನಿಶ್ ಸೇಠ್ ಮಾತಿಗೆ ಸಿಟ್ಟಾಗಿ ಎದ್ದೇ ಹೋದ ವಿರಾಟ್ ಕೊಹ್ಲಿ
ವಿರಾಟ್, ದಾನಿಶ್
ರಾಜೇಶ್ ದುಗ್ಗುಮನೆ
|

Updated on: Apr 15, 2025 | 1:07 PM

Share

ನಟ ದಾನಿಶ್ ಸೇಠ್ (Danish Sait) ಅವರು ಐಪಿಎಲ್ ಸಂದರ್ಭದಲ್ಲಿ ಆರ್​ಸಿಬಿ ಇನ್​ಸೈಡರ್ ಆಗಿ ಗಮನ ಸೆಳೆಯುತ್ತಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸದಸ್ಯರ ಜೊತೆ ಸಂದರ್ಶನಗಳನ್ನು ಮಾಡಿ ಹಂಚಿಕೊಳ್ಳುತ್ತಾರೆ. ಪ್ರತಿ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಸಂದರ್ಶನ  ಮಾಡುತ್ತಾರೆ. ಈ ಬಾರಿ ಆ ಸಂದರ್ಶನ ಇನ್ನೂ ಬಂದಿರಲಿಲ್ಲ. ಈಗ ದಾನಿಶ್ ಸೇಠ್ ಅವರು ವಿರಾಟ್​ನ ಸಂದರ್ಶಿಸಿದ್ದಾರೆ. ಈ ವೇಳೆ ವಿರಾಟ್ ಸಿಟ್ಟಾಗಿ ಎದ್ದೇ ಹೋಗಿದ್ದಾರೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? ಆ ಬಗ್ಗೆ ಇಲ್ಲಿದೆ ವಿವರ.

ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಆಧ್ಯಾತ್ಮದ ಕಡೆ ವಾಲಿದ್ದಾರೆ. ಪ್ರೇಮಾನಂದ ಗೋವಿಂದ ಶರಣ್ ಮಹಾರಾಜ್ ಹಾಗೂ ಬಾಬಾ ನೀಮ್ ಕರೋಲಿ ಮಂದಿರಕ್ಕೆ ಪತ್ನಿ ಜೊತೆ ತೆರಳಿ ಧ್ಯಾನ ಮಾಡಿದ್ದೂ ಇದೆ. ಈ ಕಾರಣಕ್ಕೆ ಇದೇ ಥೀಮ್​ನಲ್ಲಿ ಸಂದರ್ಶನವನ್ನು ಆಯೋಜನೆ ಮಾಡಲಾಗಿತ್ತು ಅನ್ನೋದು ವಿಶೇಷ. ಸಂದರ್ಶನ ಉದ್ದಕ್ಕೂ ಆಧ್ಯತ್ಮದ ಬಗ್ಗೆ  ಚರ್ಚೆಗಳು ನಡೆದಿವೆ. ಈ ವೇಳೆ ವಿರಾಟ್ ಕೆಲವು ಟಿಪ್ಸ್ ಕೊಟ್ಟಿದ್ದಾರೆ.

‘ನಿಮಗೆ ಕಂಫರ್ಟ್ ಆಗುವ ಆಸನದಲ್ಲಿ ಕುಳಿತುಕೊಳ್ಳಿ. ದೀರ್ಘವಾಗಿ ಮೂಗಿನ ಮೂಲಕ ಉಸಿರು ತೆಗೆದುಕೊಳ್ಳಿ, ಬಾಯಿ ಮೂಲಕ ಉಸಿರನ್ನು ಬಿಡಿ. ಸಮುದ್ರದ ಸೌಂಡ್​ನ ಊಹಿಸಿಕೊಳ್ಳಿ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ರೀತಿಯ ಅನೇಕ ಟಿಪ್ಸ್​ಗಳನ್ನು ಅವರು ನೀಡಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿಯನ್ನು ದಾನಿಶ್ ತಬ್ಬಿಕೊಂಡಿದ್ದಾರೆ. ಇದರಿಂದ ಕೊಹ್ಲಿ ಸಿಟ್ಟಾಗಿದ್ದಾರೆ.

ಇದನ್ನೂ ಓದಿ
Image
ಮಗನನ್ನು ಫ್ಯಾಷನ್ ಶೋಗೆ ಕರೆದುಕೊಂಡು ಹೋಗಿ ಟ್ರೋಲ್ ಆದ ನತಾಶಾ
Image
‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

‘ನೀವೇ ತಾನೇ ಪ್ರೀತಿ ಪಾತ್ರರಿಗೆ ಪ್ರೀತಿ ಕೊಡಿ ಎಂದು ಹೇಳಿದ್ದು’ ಎಂದು ದಾನಿಶ್ ಅವರು ಕೊಹ್ಲಿಗೆ ಕೇಳಿದ್ದಾರೆ. ‘ಸ್ನಾನ ಆದ ಬಳಿಕ ಬಂದು ನೀವು ಹಗ್ ಕೊಡಬೇಕು. ಸ್ನಾನ ಮಾಡದೆ ಬಂದಿದ್ದಕ್ಕೆ ನನ್ನ ಶಾಂತಿಯೆಲ್ಲ ಹಾಳಾಯಿತು. ನಾನು ಹೊಗಬೇಕು, ಸ್ನಾನ ಮಾಡಬೇಕು’ ಎಂದು ಕೊಹ್ಲಿ ಹೊರಟರು. ‘ಶಾಂತಿ ಕಾಪಾಡಿಕೊಳ್ಳಿ’ ಎಂದು ದಾನಿಶ್ ಕೋರಿದರು. ಆದರೆ ಕೊಹ್ಲಿ ಕೂಗಾಡುತ್ತಾ ಹೊರಟೇಬಿಟ್ಟರು.

ಇದನ್ನೂ ಓದಿ:  ದ್ರಾವಿಡ್ ಊರುಗೋಲಿನ ಸಹಾಯದಿಂದ ಮೈದಾನಕ್ಕೆ ಬಂದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ

ಅಂದಹಾಗೆ, ಇದು ಸಂಪೂರ್ಣವಾಗಿ ಸ್ಕ್ರಿಪ್ಟೆಡ್ ಕಾರ್ಯಕ್ರಮ. ವಿರಾಟ್ ಕೊಹ್ಲಿ ಸಿಟ್ಟು ಮಾಡಿಕೊಂಡಿದ್ದು ಕೂಡ ಸ್ಕ್ರಿಪ್ಟ್​ನ ಒಂದು ಭಾಗ ಅಷ್ಟೇ. ಈ ಮೊದಲು ಕೂಡ ಕೊಹ್ಲಿ ಅವರು ದಾನಿಶ್ ಬಗ್ಗೆ ಸಿಟ್ಟಾದಂತೆ ನಟಿಸಿದ ಸಾಕಷ್ಟು ಉದಾಹರಣೆಗಳು ಇವೆ. ಆದರೆ, ಎಲ್ಲವೂ ಸ್ಕ್ರಿಪ್ಟ್​ನ ಭಾಗ ಅಷ್ಟೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ