AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ನಟ ಮಹೇಶ್​ ಬಾಬು ಅವರು ನಿರ್ದೇಶಕ ಎಸ್​ಎಸ್​ ರಾಜಮೌಳಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾ ಬಗ್ಗೆ ಈಗಾಗಲೇ ಗಾಸಿಪ್​ಗಳು ಹರಿದಾಡಲು ಆರಂಭಿಸಿವೆ. ಆ ಬಗ್ಗೆ ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ. ಕಾಸ್ಟಿಂಗ್​ ಡೈರೆಕ್ಟರ್​ ಬಗ್ಗೆ ಪತ್ರಿಕೆಯೊಂದು ಪ್ರಕಟಿಸಿದ ತಪ್ಪು ಮಾಹಿತಿಯ ಬಗ್ಗೆ ಸ್ವತಃ ನಿರ್ಮಾಪಕರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು
ಮಹೇಶ್​ ಬಾಬು, ರಾಜಮೌಳಿ
ಮದನ್​ ಕುಮಾರ್​
|

Updated on: May 17, 2024 | 6:18 PM

Share

‘ಆರ್​ಆರ್​ಆರ್​’ ಸಿನಿಮಾದ ಅಭೂತಪೂರ್ವ ಗೆಲುವಿನಿಂದ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರಿಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ಹೆಚ್ಚಿದೆ. ಈಗ ಅವರು ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಮೇಲೆ ಎಲ್ಲಿಲ್ಲದಷ್ಟು ನಿರೀಕ್ಷೆ ಮೂಡಿದೆ. ಟಾಲಿವುಡ್​ನ ಸ್ಟಾರ್​ ನಟ ಮಹೇಶ್​ ಬಾಬು (Mahesh Babu) ಜೊತೆ ರಾಜಮೌಳಿ ಸಿನಿಮಾ ಮಾಡಲಿದ್ದು, ಅದಕ್ಕೆ ಬೇಕಾದ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಈ ಸಿನಿಮಾವನ್ನು ‘SSMB 29’ ಎಂದು ಕರೆಯಲಾಗುತ್ತಿದೆ. ಅಸಲಿ ಶೀರ್ಷಿಕೆ ಇನ್ನೂ ನಿಗದಿ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಗಾಸಿಪ್​ಗಳು ಹಬ್ಬಿವೆ.

ದೊಡ್ಡ ಸಿನಿಮಾ ಎಂದಾಗ ಸಹಜವಾಗಿಯೇ ಒಂದಷ್ಟು ಗಾಸಿಪ್​ಗಳು ಹುಟ್ಟಿಕೊಳ್ಳುತ್ತವೆ. ‘SSMB 29’ ಸಿನಿಮಾದ ಬಗ್ಗೆಯೂ ಒಂದು ಗಾಳಿಸುದ್ದಿ ಕೇಳಿಬಂದಿದೆ. ಈ ಸಿನಿಮಾಗೆ ವೀರೇನ್​ ಸ್ವಾಮಿ ಅವರು ಕಾಸ್ಟಿಂಗ್​ ಡೈರೆಕ್ಟರ್​ ಆಗಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಅದು ನಿರ್ಮಾಪಕರ ಗಮನಕ್ಕೂ ಬಂದಿದ್ದು, ಆ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಸ್ಪಷ್ಟನೆ ನೀಡಲಾಗಿದೆ.

‘ಪ್ರತಿಷ್ಠಿತ ಪತ್ರಿಕೆಯೊಂದು ಎಸ್​.ಎಸ್​. ರಾಜಮೌಳಿ ಹಾಗೂ ಮಹೇಶ್​ ಬಾಬು ಕಾಂಬಿನೇಷನ್​ನ ಸಿನಿಮಾ ಬಗ್ಗೆ ಒಂದು ಲೇಖನ ಪ್ರಕಟಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಅದರ ಬಗ್ಗೆ ನಾವು ಸ್ಪಷ್ಟನೆ ನೀಡುತ್ತಿದ್ದೇವೆ. ವೀರೇನ್​ ಸ್ವಾಮಿ ಅವರು ನಮ್ಮ ಸಿನಿಮಾದ ಯಾವುದೇ ವಿಭಾಗದಲ್ಲೂ ಕೆಲಸ ಮಾಡುತ್ತಿಲ್ಲ. ಅಗತ್ಯವಿದ್ದಾಗ ನಿರ್ಮಾಣ ಸಂಸ್ಥೆಯ ಕಡೆಯಿಂದಲೇ ಎಲ್ಲ ಅಧಿಕೃತ ಪ್ರಕಟಣೆಗಳು ಹೊರಬರಲಿವೆ’ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ಶಾರುಖ್​, ಆಮಿರ್​, ಸಲ್ಮಾನ್​; ‘ರಾಜಮೌಳಿ ನಿರ್ದೇಶನ ಮಾಡ್ಬೇಕು’ ಎಂದ ನೆಟ್ಟಿಗರು

‘SSMB 29’ ಸಿನಿಮಾಗಾಗಿ ಮಹೇಶ್​ ಬಾಬು ಅವರು ವಿದೇಶದಲ್ಲಿ ತರಬೇತಿ ಪಡೆದುಕೊಂಡು ಬಂದಿದ್ದಾರೆ. ಅವರ ಗೆಟಪ್​ ಕೂಡ ಬದಲಾಗಲಿದೆ. ಉದ್ದ ಕೂದಲಿನ ಲುಕ್​ನಲ್ಲಿ ಮಹೇಶ್​ ಬಾಬು ಕಾಣಿಸಿಕೊಳ್ಳಲಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಯಶಸ್ಸಿನ ಬಳಿಕ ರಾಜಮೌಳಿ ಕೈಗೆತ್ತಿಕೊಳ್ಳುತ್ತಿರುವ ಪ್ರಾಜೆಕ್ಟ್​ ಆದ್ದರಿಂದ ‘SSMB 29’ ಚಿತ್ರದ ಮೇಲೆ ನಿರೀಕ್ಷೆ ದೊಡ್ಡದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ