ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ನಟ ಮಹೇಶ್​ ಬಾಬು ಅವರು ನಿರ್ದೇಶಕ ಎಸ್​ಎಸ್​ ರಾಜಮೌಳಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾ ಬಗ್ಗೆ ಈಗಾಗಲೇ ಗಾಸಿಪ್​ಗಳು ಹರಿದಾಡಲು ಆರಂಭಿಸಿವೆ. ಆ ಬಗ್ಗೆ ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ. ಕಾಸ್ಟಿಂಗ್​ ಡೈರೆಕ್ಟರ್​ ಬಗ್ಗೆ ಪತ್ರಿಕೆಯೊಂದು ಪ್ರಕಟಿಸಿದ ತಪ್ಪು ಮಾಹಿತಿಯ ಬಗ್ಗೆ ಸ್ವತಃ ನಿರ್ಮಾಪಕರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು
ಮಹೇಶ್​ ಬಾಬು, ರಾಜಮೌಳಿ
Follow us
|

Updated on: May 17, 2024 | 6:18 PM

‘ಆರ್​ಆರ್​ಆರ್​’ ಸಿನಿಮಾದ ಅಭೂತಪೂರ್ವ ಗೆಲುವಿನಿಂದ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರಿಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ಹೆಚ್ಚಿದೆ. ಈಗ ಅವರು ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಮೇಲೆ ಎಲ್ಲಿಲ್ಲದಷ್ಟು ನಿರೀಕ್ಷೆ ಮೂಡಿದೆ. ಟಾಲಿವುಡ್​ನ ಸ್ಟಾರ್​ ನಟ ಮಹೇಶ್​ ಬಾಬು (Mahesh Babu) ಜೊತೆ ರಾಜಮೌಳಿ ಸಿನಿಮಾ ಮಾಡಲಿದ್ದು, ಅದಕ್ಕೆ ಬೇಕಾದ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಈ ಸಿನಿಮಾವನ್ನು ‘SSMB 29’ ಎಂದು ಕರೆಯಲಾಗುತ್ತಿದೆ. ಅಸಲಿ ಶೀರ್ಷಿಕೆ ಇನ್ನೂ ನಿಗದಿ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಗಾಸಿಪ್​ಗಳು ಹಬ್ಬಿವೆ.

ದೊಡ್ಡ ಸಿನಿಮಾ ಎಂದಾಗ ಸಹಜವಾಗಿಯೇ ಒಂದಷ್ಟು ಗಾಸಿಪ್​ಗಳು ಹುಟ್ಟಿಕೊಳ್ಳುತ್ತವೆ. ‘SSMB 29’ ಸಿನಿಮಾದ ಬಗ್ಗೆಯೂ ಒಂದು ಗಾಳಿಸುದ್ದಿ ಕೇಳಿಬಂದಿದೆ. ಈ ಸಿನಿಮಾಗೆ ವೀರೇನ್​ ಸ್ವಾಮಿ ಅವರು ಕಾಸ್ಟಿಂಗ್​ ಡೈರೆಕ್ಟರ್​ ಆಗಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಅದು ನಿರ್ಮಾಪಕರ ಗಮನಕ್ಕೂ ಬಂದಿದ್ದು, ಆ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಸ್ಪಷ್ಟನೆ ನೀಡಲಾಗಿದೆ.

‘ಪ್ರತಿಷ್ಠಿತ ಪತ್ರಿಕೆಯೊಂದು ಎಸ್​.ಎಸ್​. ರಾಜಮೌಳಿ ಹಾಗೂ ಮಹೇಶ್​ ಬಾಬು ಕಾಂಬಿನೇಷನ್​ನ ಸಿನಿಮಾ ಬಗ್ಗೆ ಒಂದು ಲೇಖನ ಪ್ರಕಟಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಅದರ ಬಗ್ಗೆ ನಾವು ಸ್ಪಷ್ಟನೆ ನೀಡುತ್ತಿದ್ದೇವೆ. ವೀರೇನ್​ ಸ್ವಾಮಿ ಅವರು ನಮ್ಮ ಸಿನಿಮಾದ ಯಾವುದೇ ವಿಭಾಗದಲ್ಲೂ ಕೆಲಸ ಮಾಡುತ್ತಿಲ್ಲ. ಅಗತ್ಯವಿದ್ದಾಗ ನಿರ್ಮಾಣ ಸಂಸ್ಥೆಯ ಕಡೆಯಿಂದಲೇ ಎಲ್ಲ ಅಧಿಕೃತ ಪ್ರಕಟಣೆಗಳು ಹೊರಬರಲಿವೆ’ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ಶಾರುಖ್​, ಆಮಿರ್​, ಸಲ್ಮಾನ್​; ‘ರಾಜಮೌಳಿ ನಿರ್ದೇಶನ ಮಾಡ್ಬೇಕು’ ಎಂದ ನೆಟ್ಟಿಗರು

‘SSMB 29’ ಸಿನಿಮಾಗಾಗಿ ಮಹೇಶ್​ ಬಾಬು ಅವರು ವಿದೇಶದಲ್ಲಿ ತರಬೇತಿ ಪಡೆದುಕೊಂಡು ಬಂದಿದ್ದಾರೆ. ಅವರ ಗೆಟಪ್​ ಕೂಡ ಬದಲಾಗಲಿದೆ. ಉದ್ದ ಕೂದಲಿನ ಲುಕ್​ನಲ್ಲಿ ಮಹೇಶ್​ ಬಾಬು ಕಾಣಿಸಿಕೊಳ್ಳಲಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಯಶಸ್ಸಿನ ಬಳಿಕ ರಾಜಮೌಳಿ ಕೈಗೆತ್ತಿಕೊಳ್ಳುತ್ತಿರುವ ಪ್ರಾಜೆಕ್ಟ್​ ಆದ್ದರಿಂದ ‘SSMB 29’ ಚಿತ್ರದ ಮೇಲೆ ನಿರೀಕ್ಷೆ ದೊಡ್ಡದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ