AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿರೂಪಾಕ್ಷ’ ನಿರ್ದೇಶಕನಿಗೆ ಐಷಾರಾಮಿ ಕಾರು ಗಿಫ್ಟ್​ ಮಾಡಿದ ನಿರ್ಮಾಪಕರು

ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದ ‘ವಿರೂಪಾಕ್ಷ’, ಒಟಿಟಿಯಲ್ಲೂ ಮೆಚ್ಚುಗೆ ಪಡೆಯಿತು. ಕಾರ್ತಿಕ್ ಅವರ ಈ ಖುಷಿಯನ್ನು ಹೆಚ್ಚಿಸುವಂತಹ ಕೆಲಸ ನಿರ್ಮಾಪಕರಿಂದ ಆಗಿದೆ.

‘ವಿರೂಪಾಕ್ಷ’ ನಿರ್ದೇಶಕನಿಗೆ ಐಷಾರಾಮಿ ಕಾರು ಗಿಫ್ಟ್​ ಮಾಡಿದ ನಿರ್ಮಾಪಕರು
ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Jun 28, 2023 | 2:08 PM

Share

ಈ ವರ್ಷ ತೆಲುಗಿನಲ್ಲಿ ತೆರೆಗೆ ಬಂದ ‘ವಿರೂಪಾಕ್ಷ’ ಸಿನಿಮಾ (Virupaksha Movie) ಸೂಪರ್ ಹಿಟ್ ಎನಿಸಿಕೊಂಡಿತು. ಹಾರರ್ ಶೈಲಿಯಲ್ಲಿ ಮೂಡಿ ಬಂದ ಈ ಚಿತ್ರದಲ್ಲಿ ಪ್ರೀತಿ, ಪ್ರೇಮದ ಕಥೆಯೂ ಹೈಲೈಟ್ ಆಗಿತ್ತು. ಸಾಯಿ ಧರಮ್ ತೇಜ (Sai Dharam Tej) ಅವರು ಈ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡರು. ಈ ಚಿತ್ರದ ಮೂಲಕ ನಿರ್ದೇಶಕ ಕಾರ್ತಿಕ್ ದಂಡು ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈ ಯಶಸ್ಸಿನಿಂದ ಖುಷಿಯಾಗಿರುವ ನಿರ್ಮಾಪಕರು, ಕಾರ್ತಿಕ್​ಗೆ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸ್ಟಾರ್ ನಟರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತದೆ. ಇದರ ಜೊತೆಗೆ ಕಥೆ ಉತ್ತಮವಾಗಿದ್ದರೆ ಸಿನಿಮಾ ಗೆದ್ದೇ ಗೆಲ್ಲುತ್ತದೆ ಎಂಬುದಕ್ಕೆ ‘ವಿರೂಪಾಕ್ಷ’ ಸಿನಿಮಾ ಉತ್ತಮ ಉದಾಹರಣೆ. ಈ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಿದೆ. ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದ ಈ ಚಿತ್ರ, ಒಟಿಟಿಯಲ್ಲೂ ಮೆಚ್ಚುಗೆ ಪಡೆಯಿತು. ಕಾರ್ತಿಕ್ ಅವರ ಈ ಖುಷಿಯನ್ನು ಹೆಚ್ಚಿಸುವಂತಹ ಕೆಲಸ ನಿರ್ಮಾಪಕರಿಂದ ಆಗಿದೆ.

ಕಾರಿನ ಜೊತೆ ಇರುವ ಫೋಟೋಗಳನ್ನು ಕಾರ್ತಿಕ್ ಹಂಚಿಕೊಂಡಿದ್ದಾರೆ. ‘ವಿರೂಪಾಕ್ಷ ಜೀವಮಾನದ ಒಂದೊಳ್ಳೆಯ ನೆನಪು. ನನ್ನ ಗುರು ಸುಕುಮಾರ್ ಅವರಿಗೆ ನನ್ನ ಧನ್ಯವಾದ. ನನ್ನ ಹೀರೋ ಸಾಯಿ ಧರಮ್ ತೇಜ್, ನಿರ್ಮಾಪಕರಾದ ಬಿವಿಎಸ್​ಎನ್​ ಪ್ರಸಾದ್, ಬಪಿನೀಡು ಭೋಗವಲ್ಲಿಗೆ ಧನ್ಯವಾದ’ ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಕಾರ್ತಿಕ್​ಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಕುಟುಂಬದಿಂದ ನೆರವು ಸಿಕ್ಕಿಲ್ಲ, ಸಹಾಯ ಮಾಡಿ ಹಿಂಸೆ ಅನುಭವಿಸುತ್ತಿದ್ದೇನೆ: ಸಾಯಿ ಧರಮ್ ಜೀವ ಉಳಿಸಿದ ಅಬ್ದುಲ್

‘ವಿರೂಪಾಕ್ಷ’ ಚಿತ್ರದಲ್ಲಿ ಸಾಯಿ ಧರಮ್ ತೇಜಗೆ ಜೊತೆಯಾಗಿ ಸಂಯುಕ್ತಾ ಮೆನನ್ ಕಾಣಿಸಿಕೊಂಡಿದ್ದರು. ಕನ್ನಡದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.  ಈ ಚಿತ್ರ ಏಪ್ರಿಲ್ 21ರಂದು ಥಿಯೇಟರ್ನಲ್ಲಿ ಬಿಡುಗಡೆ ಆಯಿತು. ‘ವಿರೂಪಾಕ್ಷ’ ಸಿನಿಮಾ ಒಂದು ಸೇಡಿನ ಕಥೆಯನ್ನು ಹೊಂದಿದೆ. ಹೊಡೆದು, ಬಡಿದು ರಿವೇಂಜ್ ತೆಗೆದುಕೊಳ್ಳುವ ಕಥೆ ಇದರಲ್ಲಿ ಇಲ್ಲ. ಹಳ್ಳಿಯಲ್ಲಿ ಒಬ್ಬೊಬ್ಬರಾಗಿ ಸಾಯುತ್ತಾರೆ. ಆತ್ಮಹತ್ಯೆಯಂತೆ ಕಂಡರೂ ಸಾವು ನಿಗೂಢ ರೀತಿಯಲ್ಲಿರುತ್ತದೆ. ಇದನ್ನು ಹೀರೋ ಬೆನ್ನುಹತ್ತಿ ಹೋಗುತ್ತಾನೆ. ಆಗ ಕೆಲ ಭಯಾನಕ ಸತ್ಯಗಳು ಗೊತ್ತಾಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?