AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಪ್ರಮಾಣ ಪತ್ರಕ್ಕೆ 6.50 ಲಕ್ಷ: ಸಾಕ್ಷಿ ಸಮೇತ ಸಿಬಿಎಫ್​ಸಿ ಅಧಿಕಾರಿಗಳ ವಿರುದ್ಧ ವಿಶಾಲ್ ಆರೋಪ

Vishal: ತಮ್ಮ ಹೊಸ ತಮಿಳು ಸಿನಿಮಾದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರವನ್ನು ಪಡೆಯಲು ಮುಂಬೈನ ಸಿಬಿಎಫ್​ಸಿ ಅಧಿಕಾರಿಗಳು 6.50 ಲಕ್ಷ ಲಂಚ ಕೇಳಿ ಪಡೆದಿದ್ದಾರೆ ಎಂದು ನಟ ವಿಶಾಲ್ ಸಾಕ್ಷಿ ಸಮೇತ ಆರೋಪ ಮಾಡಿದ್ದಾರೆ.

ಸಿನಿಮಾ ಪ್ರಮಾಣ ಪತ್ರಕ್ಕೆ 6.50 ಲಕ್ಷ: ಸಾಕ್ಷಿ ಸಮೇತ ಸಿಬಿಎಫ್​ಸಿ ಅಧಿಕಾರಿಗಳ ವಿರುದ್ಧ ವಿಶಾಲ್ ಆರೋಪ
ವಿಶಾಲ್
ಮಂಜುನಾಥ ಸಿ.
|

Updated on:Sep 28, 2023 | 8:10 PM

Share

ತಮಿಳು ನಟ ವಿಶಾಲ್ (Vishal), ಮುಂಬೈನ ಸಿಬಿಎಫ್​ಸಿ (CBFC) ಅಧಿಕಾರಿಗಳ ವಿರುದ್ಧ ಲಂಚ ಸ್ವೀಕಾರದ ಗುರುತರ ಆರೋಪ ಮಾಡಿದ್ದಾರೆ. ವಿಶಾಲ್ ನಟನೆಯ ‘ಮಾರ್ಕ್ ಆಂಟೊನಿ’ ಸಿನಿಮಾ ಇತ್ತೀಚೆಗಷ್ಟೆ ತಮಿಳುನಾಡಿನಲ್ಲಿ ಬಿಡುಗಡೆ ಆಗಿ ಹಿಟ್ ಆಗಿದೆ. ಸಿನಿಮಾವನ್ನು ಪ್ರೇಕ್ಷಕರು, ವಿಮರ್ಶಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದ ಯಶಸ್ಸಿನಿಂದ ಸ್ಪೂರ್ತಿಹೊಂದಿ, ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೇ ಕಾರಣಕ್ಕೆ ಪ್ರಮಾಣ ಪತ್ರಕ್ಕಾಗಿ ಮುಂಬೈನ ಸಿಬಿಎಫ್​ಸಿ ಕಚೇರಿಗೆ ಕಳುಹಿಸಿದಾಗ ಅಲ್ಲಿನ ಅಧಿಕಾರಿಗಳು ಚಿತ್ರತಂಡದಿಂದ ಲಂಚ ಪಡೆದಿದ್ದಾರೆ. ಇದನ್ನು ವಿಶಾಲ್ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶವನ್ನು ಪ್ರಕಟಿಸಿರುವ ನಟ ವಿಶಾಲ್, ‘ನಾವು ‘ಮಾರ್ಕ್ ಆಂಟೊನಿ’ ಸಿನಿಮಾವನ್ನು ಹಿಂದಿಗೆ ಡಬ್ ಮಾಡಿ ಬಿಡುಗಡೆಗೆ ಯತ್ನಿಸಿದೆವು. ಕೆಲವು ತಾಂತ್ರಿಕ ಕಾರಣಗಳಿಗಾಗಿ ತುಸು ತಡವಾಗಿ ಅಂದರೆ ಸೋಮವಾರ ನಾವು ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದೆವು. ತುಸು ಬೇಗನೆ ಪ್ರಮಾಣ ಪತ್ರ ನೀಡಿ ಎಂದು ಮನವಿ ಮಾಡಿದೆವು. ಅದಕ್ಕೆ ಬದಲಾಗಿ ಅಲ್ಲಿನ ಅಧಿಕಾರಿಗಳು ನಮ್ಮ ಬಳಿ 6.50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟರು” ಎಂದಿದ್ದಾರೆ.

”ಒಂದೇ ದಿನದಲ್ಲಿ ಸಿನಿಮಾದ ಪ್ರಮಾಣ ಪತ್ರ ನೀಡಬೇಕೆಂದರೆ 6.50 ಲಕ್ಷ ಹಣ ನೀಡಬೇಕು ಎಂದು ಸಿಬಿಎಫ್​ಸಿ ಅಧಿಕಾರಿ ಮೇನಕ ಎಂಬುವರು ಹೇಳಿದರು. ನಾವು ಬೇರೆ ಆಪ್ಷನ್ ಇಲ್ಲದೆ ಹಣ ನೀಡಬೇಕಾಯಿತು. ನಮ್ಮ ಸಿನಿಮಾವನ್ನು ಅಧಿಕಾರಿಗಳು ನೋಡಲು ಮೂರು ಲಕ್ಷ, ಪ್ರಮಾಣ ಪತ್ರ ನೀಡಲು 3.50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟರು. ನಮ್ಮ ತಂಡದ ವ್ಯಕ್ತಿ ಅವರ ಬೇಡಿಕೆಯಂತೆ ಹಣವನ್ನು ಅವರು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದರು. ಆ ಬಳಿಕವೇ ನಮಗೆ ಪ್ರಮಾಣ ಪತ್ರ ಸಿಕ್ಕಿತು” ಎಂದಿರುವ ವಿಶಾಲ್, ತಾವು ಹಣ ಕಳಿಸಿದ ಎರಡು ಬ್ಯಾಂಕ್ ಖಾತೆಗಳ ವಿವರವನ್ನೂ ಸಹ ಟ್ವಿಟ್ಟರ್​ನಲ್ಲಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ:ಧಾರ್ಮಿಕ ಭಾವನೆಗಳಿಗೆ ಧಕ್ಕೆ: ‘ಯಾರಿಯಾ 2’ಸಿನಿಮಾದ ವಿರುದ್ಧ ದೂರು

”ತಡವಾಗಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದರೆ 6.50 ಲಕ್ಷ ಹಣ ನೀಡಬೇಕಾಗುತ್ತದೆ. 15 ದಿನಕ್ಕೆ ಮುಂಚೆ ಸಲ್ಲಿಸಿದ್ದರೆ 4 ಲಕ್ಷದಲ್ಲಿ ಕೆಲಸ ಮುಗಿದು ಹೋಗುತ್ತಿತ್ತು’ ಎಂದು ಆ ಅಧಿಕಾರಿ ನಮಗೆ ಹೇಳಿದರು. ಅವರೊಟ್ಟಿಗೆ ಮಾತನಾಡಿದ ಸಂಭಾಷಣೆಯ ರೆಕಾರ್ಡ್ ಸಹ ನಮ್ಮ ಬಳಿ ಇದೆ. ನನ್ನಂಥಹಾ ಜನಪ್ರಿಯ ನಟನ ಸಿನಿಮಾಕ್ಕೆ ಹೀಗಾಗುತ್ತದೆ ಎಂದಾದರೆ ಸಣ್ಣ-ಪುಟ್ಟ ಸಿನಿಮಾಗಳ ಕತೆ ಏನು? ನನ್ನ ವೃತ್ತಿ ಜೀವನದಲ್ಲಿಯೇ ನಾನು ಇದೇ ಮೊದಲ ಬಾರಿಗೆ ಇಂಥಹಾ ಪರಿಸ್ಥಿತಿ ಎದುರಿಸುತ್ತಿದ್ದೇನೆ” ಎಂದಿದ್ದಾರೆ ವಿಶಾಲ್.

”ಮಹಾರಾಷ್ಟ್ರ ಸಿಎಂ ಹಾಗೂ ಪ್ರಧಾನ ಮಂತ್ರಿಗಳಾದ ಮೋದಿಯವರು ದಯವಿಟ್ಟು ಈ ವಿಷಯದ ಕಡೆಗೆ ಗಮನ ಹರಿಸಬೇಕು. ಸಿನಿಮಾದಲ್ಲಿ ಭ್ರಷ್ಟಾಚಾರ ತೋರಿಸುವುದು ಓಕೆ, ಆದರೆ ನಿಜ ಜೀವನದಲ್ಲಿ ಸಿನಿಮಾದವರಿಗೆ ಭ್ರಷ್ಟಾಚಾರ ಎದುರಾದರೆ ಹೇಗೆ?” ಎಂದು ಪ್ರಶ್ನೆ ಮಾಡಿರುವ ವಿಶಾಲ್, ”ಈ ಘಟನೆ ಬಗ್ಗೆ ಸೂಕ್ತ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ನಂಬಿದ್ದೇನೆ. ನನ್ನ ಬಳಿ ಸಾಕ್ಷ್ಯಗಳಿದ್ದು ಅವುಗಳನ್ನು ನೀಡಲು ನಾನು ಸಿದ್ಧನಾಗಿದ್ದೇನೆ” ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Thu, 28 September 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!