AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್​ರ ಭೇಟಿಯಾದ ವಿಶಾಲ್, ಹೂಗುಚ್ಛ, ಶಾಲು ಬದಲಿಗೆ ಕೊಟ್ಟಿದ್ದೇನು?

Thalapathy Vijay: ಇತ್ತೀಚೆಗಷ್ಟೆ ತಮಿಳು ಚಿತ್ರರಂಗದ ನಟ ವಿಶಾಲ್ ಕೂಡ ಸಿಎಂ ವಿಜಯ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರಿಗೆ ಹೂಗುಚ್ಛ ಅಥವಾ ಇನ್ಯಾವುದೇ ಉಡುಗೊರೆ ನೀಡಿಲ್ಲ, ಬದಲಿಗೆ ಒಂದೊಳ್ಳೆ ಕಾರ್ಯವನ್ನು ವಿಜಯ್ ಹೆಸರಿನಲ್ಲಿ ಮಾಡಿದ್ದಾರೆ.

ಸಿಎಂ ವಿಜಯ್​ರ ಭೇಟಿಯಾದ ವಿಶಾಲ್, ಹೂಗುಚ್ಛ, ಶಾಲು ಬದಲಿಗೆ ಕೊಟ್ಟಿದ್ದೇನು?
Cm Vijay Vishal
ಮಂಜುನಾಥ ಸಿ.
|

Updated on: Jun 16, 2026 | 6:55 PM

Share

ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ (Vijay) ಅಧಿಕಾರ ಸ್ವೀಕರಿಸಿದ ನಂತರ, ತಮಿಳು ಚಿತ್ರರಂಗದ ಹಲವು ನಟರು, ತಂತ್ರಜ್ಞರು ಅವರನ್ನು ಭೇಟಿಯಾಗಿ ಅಭಿನಂದಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ವಿಶಾಲ್ ಕೂಡ ಸಿಎಂ ವಿಜಯ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರಿಗೆ ಹೂಗುಚ್ಛ ಅಥವಾ ಇನ್ಯಾವುದೇ ಉಡುಗೊರೆ ನೀಡಿಲ್ಲ, ಬದಲಿಗೆ ಒಂದೊಳ್ಳೆ ಕಾರ್ಯವನ್ನು ವಿಜಯ್ ಹೆಸರಿನಲ್ಲಿ ಮಾಡಿದ್ದಾರೆ.

ಸಿಎಂ ಜೊತೆಗಿನ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೊಸ್ಟ್ ಹಂಚಿಕೊಂಡಿರುವ ವಿಜಯ್, ‘ನನ್ನ ಆತ್ಮೀಯ ‘ಡಾರ್ಲಿಂಗ್’ ಸಿಎಂ ವಿಜಯ್, ಲಯೋಲಾ ಕಾಲೇಜಿನಲ್ಲಿ ನಮಗೆ ಪರಿಚಯವಾದಾಗಿನಿಂದ ನಾನು ನಿಮ್ಮನ್ನು ‘ಡಾರ್ಲಿಂಗ್’ ಎಂದೇ ಕರೆಯುತ್ತಿದ್ದೇನೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಒಬ್ಬ ಸಾಮಾನ್ಯ ನಟನಾಗಿ ನಿಮ್ಮ ಪಯಣ ಪ್ರಾರಂಭವಾಯಿತು, ಹಲವು ಅಡೆತಡೆಗಳು ಮತ್ತು ಟೀಕೆಗಳನ್ನು ಮೆಟ್ಟಿ ನಿಂತು, ನಿಮ್ಮ ಮೌನ ಮತ್ತು ಯಶಸ್ಸಿನ ಮೂಲಕ ಅವೆಲ್ಲವನ್ನೂ ದೂರ ತಳ್ಳಿದ್ದೀರಿ. ಒಬ್ಬ ಸೂಪರ್‌ಸ್ಟಾರ್‌ ಆಗಿ ಉನ್ನತ ಶಿಖರವನ್ನು ಏರಿದ ನೀವು, ಇಂದು ತಮಿಳುನಾಡಿನ ಗೌರವಾನ್ವಿತ ಮುಖ್ಯಮಂತ್ರಿಯಾಗಿದ್ದೀರಿ’ ಎಂದಿದ್ದಾರೆ.

‘ಇಂದು ನಿಮ್ಮ ಹುದ್ದೆ ಬದಲಾಗಿದೆ, ಆದರೆ ನೀವು ಬದಲಾಗಿಲ್ಲ. ನಿಮ್ಮನ್ನು ಭೇಟಿಯಾದದ್ದು ನನಗೆ ತುಂಬಾ ಸಂತೋಷವನ್ನು ನೀಡಿತು, ಅದೇ ಹಿಂದಿನ ಅನ್ಯೋನ್ಯತೆಯನ್ನು ಮತ್ತೆ ಅನುಭವಿಸಿದೆ. ನಮ್ಮ ರಾಜ್ಯದ ಮುಖ್ಯಮಂತ್ರಿಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ನನಗೆ ತುಂಬಾ ವಿಶೇಷ ಎನಿಸುತ್ತದೆ. ಈ ಮಧುರ ಕ್ಷಣಗಳು ನನ್ನ ಜೀವನದಲ್ಲಿ ಸದಾ ಉಳಿಯುತ್ತವೆ’ ಎಂದು ವಿಶಾಲ್ ತಿಳಿಸಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

‘ನಿಮಗಾಗಿ ಕೊಡಲಿಚ್ಛಿಸಿದ್ದ ಹೂಗುಚ್ಛ ಮತ್ತು ಶಾಲಿನ ಬದಲಾಗಿ, ಆ ಹಣವನ್ನು ನಿಮ್ಮ ಹೆಸರಿನಲ್ಲಿ ತಮಿಳುನಾಡಿನ ಮೂವರು ಅರ್ಹ ಬಡ ಬಾಲಕಿಯರ ವಿದ್ಯಾಭ್ಯಾಸಕ್ಕಾಗಿ ಬಳಸಿದ್ದೇನೆ. ಆ ಮಕ್ಕಳಿಗಾಗಿ ನೀವು ಪಡುತ್ತಿರುವ ಶ್ರಮವನ್ನು ನೋಡಿ ಅವರು ಖಂಡಿತವಾಗಿಯೂ ಹೆಮ್ಮೆಪಡುತ್ತಾರೆ ಮತ್ತು ನಿಮ್ಮನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತಾರೆ. ನನ್ನ ಹೃತ್ಪೂರ್ವಕ ಧನ್ಯವಾದಗಳು’ ಎಂದು ವಿಶಾಲ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ವಿಶಾಲ್ ಅವರು ವಿಜಯ್ ಅವರ ಹೆಸರಿನಲ್ಲಿ ಮಾಡಿರುವ ಕಾರ್ಯವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಆದರೆ ಇದೇ ವೇಳೆ, ವಿಜಯ್ ಅವರನ್ನು ‘ಡಾರ್ಲಿಂಗ್’ ಎಂದು ಕರೆದಿರುವ ಬಗ್ಗೆ ಸಾಕಷ್ಟು ಟೀಕೆಯನ್ನು ಸಹ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ