AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್; ಅಸಮಾಧಾನ ಹೊರಹಾಕಿದ ಫ್ಯಾನ್ಸ್

ಚಿರಂಜೀವಿ ನಟನೆಯ "ವಿಶ್ವಂಭರ" ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿದೆ. ಗ್ರಾಫಿಕ್ಸ್ ಕೆಲಸಗಳು ಇನ್ನೂ ಪೂರ್ಣಗೊಂಡಿಲ್ಲ ಎಂಬುದು ಕಾರಣ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ. ಈ ಚಿತ್ರದ ಜೊತೆಗೆ ಚಿರಂಜೀವಿ ಅವರು ಇನ್ನೂ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಸೋತ ನಂತರ ಅವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾಗಳನ್ನು ಆಯ್ಕೆ ಮಾಡುತ್ತಿದ್ದಾರೆ.

ಚಿರಂಜೀವಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್; ಅಸಮಾಧಾನ ಹೊರಹಾಕಿದ ಫ್ಯಾನ್ಸ್
ಚಿರಂಜೀವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 30, 2025 | 7:47 AM

Share

‘ವಿಶ್ವಂಭರ’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಚಿರಂಜೀವಿ ಅವರು ಹೀರೋ. ಈ ಸಿನಿಮಾ ರಿಲೀಸ್ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದೆ. ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಪ್ರಕಾರ ಸಿನಿಮಾದ ರಿಲೀಸ್ ಮತ್ತಷ್ಟು ವಿಳಂಬ ಆಗಲಿದೆಯಂತೆ. ಇದಕ್ಕೆ ಕಾರಣ ಕೂಡ ಇದೆ ಎನ್ನಲಾಗಿದೆ.

‘ವಿಶ್ವಂಭರ’ ಫ್ಯಾಂಟಸಿ ಡ್ರಾಮ. ಈ ಸಿನಿಮಾದ ಶೂಟ್​ ಭರದಿಂದ ಸಾಗುತ್ತಿದೆ. ಆದರೆ ಚಿತ್ರಕ್ಕೆ ಸಾಕಷ್ಟು ಗ್ರಾಫಿಕ್ಸ್ ಕೆಲಸಗಳು ಬಾಕಿ ಇವೆ. ಈ ಕಾರಣದಿಂದ ಮುಂದಿನ ವರ್ಷ ಬೇಸಿಗೆಗೆ ಚಿತ್ರ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಚಿತ್ರವನ್ನು ಬಿಂಬಿಸಾರ ಖ್ಯಾತಿಯ ವಸಿಷ್ಠ ಅವರು ನಿರ್ದೇಶನಮಾಡುತ್ತಿದ್ದಾರೆ.

ಚಿರಂಜೀವಿ ಹಾಗೂ ನಿರ್ದೇಶಕ ಅನಿಲ್ ರವಿಪುಡಿ ಒಟ್ಟಾಗಿ ಸಿನಿಮಾ ಮಾಡಬೇಕಿದೆ. ಆದರೆ,ಈ ಸಿನಿಮಾ ಇನ್ನೂ ಸೆಟ್ಟೇರಿಲ್ಲ. ಹಾಗಾಗಿ, ಮೊದಲು ಈ ಚಿತ್ರ ರಿಲೀಸ್ ಆಗಿ ಆ ಬಳಿಕ ‘ವಿಶ್ವಂಭರ’ ತೆರೆಗೆ ಬಂದರೂ ಅಚ್ಚರಿ ಏನಿಲ್ಲ ಎನ್ನಲಾಗಿದೆ.

ಇದನ್ನೂ ಓದಿ
Image
ಭಾನುವಾರವೂ ಹೆಚ್ಚಿಲ್ಲ ಕಣ್ಣಪ್ಪ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ
Image
ಹೃದಯಾಘಾತ, ಇಂಜಂಕ್ಷನ್ ಅಲ್ಲ; ಶೆಫಾಲಿ ಸಾವಿನ ಹಿಂದಿನ ರಹಸ್ಯ ತಿಳಿಸಿದ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ
Image
ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ

ಇದನ್ನೂ ಓದಿ: ನಾಗಾರ್ಜುನ, ಚಿರಂಜೀವಿಗೆ ರಶ್ಮಿಕಾ ಮಂದಣ್ಣ ಮೇಲೆ ಉಂಟಾಯ್ತು ಕ್ರಶ್

ಚಿರಂಜೀವಿ ಅವರಿಗೆ ಇತ್ತೀಚೆಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ‘ಆಚಾರ್ಯ’ ಚಿತ್ರವನ್ನು ಸಾಕಷ್ಟು ದೊಡ್ಡ ಮಟ್ಟದಲ್ಲಿ ನಷ್ಟವನ್ನು ಅನುಭವಿಸಿದ್ದನ್ನು ನೀವು ಕಂಡಿರಬಹುದು. ಇದು ಅವರಿಗೆ ಸಾಕಷ್ಟು ಬೇಸರ ಮೂಡಿಸಿತ್ತು. ಇದಾದ ಬಳಿಕ ಅವರು ಮತ್ತೆ ಗೆಲ್ಲುವ ಭರವಸೆಯಲ್ಲಿ ಇದ್ದರು. ಆದರೆ, ಅದು ಸಾಧ್ಯ ಆಗಿರಲಿಲ್ಲ. ಅದೇ ರೀತಿ, ‘ವಾಲ್ಟೇರ್ ವೀರಯ್ಯ’, ‘ಭೋಲಾ ಶಂಕರ್’ ಕೂಡ ಹಿನ್ನಡೆ ಅನುಭವಿಸಿದವು. ಹೀಗಾಗಿ, ಅವರು ಹೆಚ್ಚು ಎಚ್ಚರಿಕೆ ವಹಿಸಿ ಸಿನಿಮಾ ಮಾಡುತ್ತಿದ್ದಾರೆ. ‘ವಿಶ್ವಂಭರ’ ಅಲ್ಲದೆ, ಅವರ ಬಳಿ ಇನ್ನೂ ಎರಡೂ ಸಿನಿಮಾಗಳು ಇದ್ದು ಅದರ ಕೆಲಸ ನಡೆಯುತ್ತಿದೆ. ಕಳೆದ ವರ್ಷ ಅವರಿಗೆ ಪದ್ಮ ವಿಭೂಷಣ ಅವಾರ್ಡ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?