AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಚಿಕ್ಕವನಲ್ಲ, ತುಂಬಾನೇ ನಾಟಿ!; ರಘು ಗೌಡ ಬಿಚ್ಚಿಟ್ರು ಬಿಗ್​ ಬಾಸ್ ಬಾಲಕನ ಮತ್ತೊಂದು ಮುಖ

ಪ್ರತೀ ಮದುವೆಗೆ ಹೆಣ್ಣುಮಕ್ಕಳನ್ನು ನೋಡೋಕೆ ಅಂತಾನೇ ಹೋಗ್ತಾರಲ್ಲ ಅಂಥವರು ಯಾರಾದರೂ ಬಿಗ್​ ಬಾಸ್ ಮನೆಯಲ್ಲಿ ಇದಾರಾ ಎಂದು ವೀಕೆಂಡ್​ನಲ್ಲಿ ಪ್ರಶ್ನೆ ಮಾಡಿದರು ಸುದೀಪ್​. ಇದಕ್ಕೆ ರಘು ಉತ್ತರ ನೀಡಿದ್ದಾರೆ.

ವಿಶ್ವ ಚಿಕ್ಕವನಲ್ಲ, ತುಂಬಾನೇ ನಾಟಿ!; ರಘು ಗೌಡ ಬಿಚ್ಚಿಟ್ರು ಬಿಗ್​ ಬಾಸ್ ಬಾಲಕನ ಮತ್ತೊಂದು ಮುಖ
ರಘು ಗೌಡ- ವಿಶ್ವನಾಥ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 22, 2021 | 7:24 AM

Share

ಬಿಗ್​ ಬಾಸ್​ ಮನೆ ಸೇರಿರುವ ವಿಶ್ವನಾಥ್​ ಅವರ ವಯಸ್ಸು ಕೇವಲ 19. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲೇ ಇಷ್ಟು ಸಣ್ಣ ವಯಸ್ಸಿನ ಪುರುಷ ಅಭ್ಯರ್ಥಿ ದೊಡ್ಡ ಮನೆಗೆ ಕಾಲಿಟ್ಟಿರಲಿಲ್ಲ. ಇದೇ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ರಘು ಗೌಡ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ವಿಶ್ವ ಚಿಕ್ಕವನಲ್ಲ. ಆತ ಕಳ್ಳ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಅದಕ್ಕೆ ಸಾಕ್ಷಿ ಕೂಡ ನೀಡಿದ್ದಾರೆ. ಪ್ರತೀ ಮದುವೆಗೆ ಹೆಣ್ಣುಮಕ್ಕಳನ್ನು ನೋಡೋಕೆ ಅಂತಾನೇ ಹೋಗ್ತಾರಲ್ಲ ಅಂಥವರು ಯಾರಾದರೂ ಬಿಗ್​ ಬಾಸ್ ಮನೆಯಲ್ಲಿ ಇದಾರಾ ಎಂದು ವೀಕೆಂಡ್​ನಲ್ಲಿ ಪ್ರಶ್ನೆ ಮಾಡಿದರು ಸುದೀಪ್​. ಇದಕ್ಕೆ ರಘು ಉತ್ತರಿಸಿದ್ದಾರೆ. ಹಾಗೆ ಹೋಗೋದಾದ್ರೆ ನಮ್ಮ ವಿಶ್ವ ಹೋಗ್ತಾನೆ. ಆತ ನೋಡೋಕೆ ಎಳೆ ನಿಂಬೆ. ಆದರೆ, ಆತ ಮೂಸುಂಬಿ. ನಾನು ಆರಂಭದಲ್ಲಿ ಆತನನ್ನು ಮುಗ್ಧ ಎಂದುಕೊಂಡಿದ್ದೆ. ಆದರೆ, ಅವನು ಹಾಗಿಲ್ಲ ಎಂದರು ರಘು.

ಇದಕ್ಕೆ ಒಂದೆರಡು ಉದಾಹರಣೆ ಕೊಡುವಂತೆ ಸುದೀಪ್​ ಕೇಳಿದ್ದಾರೆ. ವಿಶ್ವ ಒಂದೆರಡು ಆಲ್ಟರ್​​​ನೇಟ್​ ಸಿನಿಮಾ ಹೀರೋಯಿನ್​ಗಳ ಹೆಸರು ಹೇಳಿದ್ದ ಎಂದರು ರಘು. ಆಗ ಸುದೀಪ್,​ ಒಂದೆರಡು ಹೀರೋಯಿನ್​ಗಳ ಹೆಸರನ್ನು ಹೇಳಿ ಎಂದು ಮರು ಪ್ರಶ್ನೆ ಹಾಕಿದರು. ಇದಕ್ಕೆ ಉತ್ತರಿಸಿದ್ದ ವಿಶ್ವ, ನನಗೇನು ಗೊತ್ತಿಲ್ಲ ಸಾರ್​.. ನಾನು ತುಂಬಾ ಒಳ್ಳೆಯವನು ಎಂದರು. ಈ ಘಟನೆ ನಂತರ ವಿಶ್ವ ತುಂಬಾನೇ ನಾಟಿ ಎನ್ನುವ ವಿಚಾರ ಮನೆ ಮಂದಿಗೆ ಗೊತ್ತಾಗಿದೆ. ಈ ವಿಚಾರ ಕೇಳಿ ಮನೆಯ ಮಂದಿಯೆಲ್ಲ ಅಚ್ಚರಿ ಹೊರ ಹಾಕಿದ್ದಾರೆ. ಸುದೀಪ್​ ಕೂಡ ಈ ವಿಚಾರ ತಿಳಿದು ಭಾರೀ ಅಚ್ಚರಿಗೊಂಡಿದ್ದಾರೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Published On - 7:14 am, Mon, 22 March 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ