AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಚಿಕ್ಕವನಲ್ಲ, ತುಂಬಾನೇ ನಾಟಿ!; ರಘು ಗೌಡ ಬಿಚ್ಚಿಟ್ರು ಬಿಗ್​ ಬಾಸ್ ಬಾಲಕನ ಮತ್ತೊಂದು ಮುಖ

ಪ್ರತೀ ಮದುವೆಗೆ ಹೆಣ್ಣುಮಕ್ಕಳನ್ನು ನೋಡೋಕೆ ಅಂತಾನೇ ಹೋಗ್ತಾರಲ್ಲ ಅಂಥವರು ಯಾರಾದರೂ ಬಿಗ್​ ಬಾಸ್ ಮನೆಯಲ್ಲಿ ಇದಾರಾ ಎಂದು ವೀಕೆಂಡ್​ನಲ್ಲಿ ಪ್ರಶ್ನೆ ಮಾಡಿದರು ಸುದೀಪ್​. ಇದಕ್ಕೆ ರಘು ಉತ್ತರ ನೀಡಿದ್ದಾರೆ.

ವಿಶ್ವ ಚಿಕ್ಕವನಲ್ಲ, ತುಂಬಾನೇ ನಾಟಿ!; ರಘು ಗೌಡ ಬಿಚ್ಚಿಟ್ರು ಬಿಗ್​ ಬಾಸ್ ಬಾಲಕನ ಮತ್ತೊಂದು ಮುಖ
ರಘು ಗೌಡ- ವಿಶ್ವನಾಥ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:Mar 22, 2021 | 7:24 AM

Share

ಬಿಗ್​ ಬಾಸ್​ ಮನೆ ಸೇರಿರುವ ವಿಶ್ವನಾಥ್​ ಅವರ ವಯಸ್ಸು ಕೇವಲ 19. ಕನ್ನಡ ಬಿಗ್​ ಬಾಸ್​ ಇತಿಹಾಸದಲ್ಲೇ ಇಷ್ಟು ಸಣ್ಣ ವಯಸ್ಸಿನ ಪುರುಷ ಅಭ್ಯರ್ಥಿ ದೊಡ್ಡ ಮನೆಗೆ ಕಾಲಿಟ್ಟಿರಲಿಲ್ಲ. ಇದೇ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಈ ವೇಳೆ ರಘು ಗೌಡ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ವಿಶ್ವ ಚಿಕ್ಕವನಲ್ಲ. ಆತ ಕಳ್ಳ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಅದಕ್ಕೆ ಸಾಕ್ಷಿ ಕೂಡ ನೀಡಿದ್ದಾರೆ. ಪ್ರತೀ ಮದುವೆಗೆ ಹೆಣ್ಣುಮಕ್ಕಳನ್ನು ನೋಡೋಕೆ ಅಂತಾನೇ ಹೋಗ್ತಾರಲ್ಲ ಅಂಥವರು ಯಾರಾದರೂ ಬಿಗ್​ ಬಾಸ್ ಮನೆಯಲ್ಲಿ ಇದಾರಾ ಎಂದು ವೀಕೆಂಡ್​ನಲ್ಲಿ ಪ್ರಶ್ನೆ ಮಾಡಿದರು ಸುದೀಪ್​. ಇದಕ್ಕೆ ರಘು ಉತ್ತರಿಸಿದ್ದಾರೆ. ಹಾಗೆ ಹೋಗೋದಾದ್ರೆ ನಮ್ಮ ವಿಶ್ವ ಹೋಗ್ತಾನೆ. ಆತ ನೋಡೋಕೆ ಎಳೆ ನಿಂಬೆ. ಆದರೆ, ಆತ ಮೂಸುಂಬಿ. ನಾನು ಆರಂಭದಲ್ಲಿ ಆತನನ್ನು ಮುಗ್ಧ ಎಂದುಕೊಂಡಿದ್ದೆ. ಆದರೆ, ಅವನು ಹಾಗಿಲ್ಲ ಎಂದರು ರಘು.

ಇದಕ್ಕೆ ಒಂದೆರಡು ಉದಾಹರಣೆ ಕೊಡುವಂತೆ ಸುದೀಪ್​ ಕೇಳಿದ್ದಾರೆ. ವಿಶ್ವ ಒಂದೆರಡು ಆಲ್ಟರ್​​​ನೇಟ್​ ಸಿನಿಮಾ ಹೀರೋಯಿನ್​ಗಳ ಹೆಸರು ಹೇಳಿದ್ದ ಎಂದರು ರಘು. ಆಗ ಸುದೀಪ್,​ ಒಂದೆರಡು ಹೀರೋಯಿನ್​ಗಳ ಹೆಸರನ್ನು ಹೇಳಿ ಎಂದು ಮರು ಪ್ರಶ್ನೆ ಹಾಕಿದರು. ಇದಕ್ಕೆ ಉತ್ತರಿಸಿದ್ದ ವಿಶ್ವ, ನನಗೇನು ಗೊತ್ತಿಲ್ಲ ಸಾರ್​.. ನಾನು ತುಂಬಾ ಒಳ್ಳೆಯವನು ಎಂದರು. ಈ ಘಟನೆ ನಂತರ ವಿಶ್ವ ತುಂಬಾನೇ ನಾಟಿ ಎನ್ನುವ ವಿಚಾರ ಮನೆ ಮಂದಿಗೆ ಗೊತ್ತಾಗಿದೆ. ಈ ವಿಚಾರ ಕೇಳಿ ಮನೆಯ ಮಂದಿಯೆಲ್ಲ ಅಚ್ಚರಿ ಹೊರ ಹಾಕಿದ್ದಾರೆ. ಸುದೀಪ್​ ಕೂಡ ಈ ವಿಚಾರ ತಿಳಿದು ಭಾರೀ ಅಚ್ಚರಿಗೊಂಡಿದ್ದಾರೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Published On - 7:14 am, Mon, 22 March 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!