AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ಹೊಸ ಅಪಾರ್ಟ್‌ಮೆಂಟ್‌ ಖರೀದಿಸಿದ ವಿವೇಕ್ ಅಗ್ನಿಹೋತ್ರಿ? ತಮ್ಮದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟ ನಿರ್ದೇಶಕ

ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ ಯಶಸ್ವಿಯಾದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರು 17.9 ಕೋಟಿ ರೂ. ಮೌಲ್ಯದ ಬೆಲೆಬಾಳುವ ಬಂಗಲೆಯನ್ನು ಖರೀದಿಸಿದ್ದಾರೆ ಎಂಬ ವದಂತಿಗೆ ಖಡ

Vivek Agnihotri: ಹೊಸ ಅಪಾರ್ಟ್‌ಮೆಂಟ್‌ ಖರೀದಿಸಿದ ವಿವೇಕ್ ಅಗ್ನಿಹೋತ್ರಿ? ತಮ್ಮದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟ ನಿರ್ದೇಶಕ
ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 03, 2022 | 6:51 PM

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ’ (The Kashmir Files) ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಯಾವುದೇ ವಿಚಾರ ಮತ್ತು ಇತರರ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಎಂದಿಗೂ ಹಿಂಜರಿಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಇಸ್ರೇಲ್​ ನಿರ್ದೇಶಕ ನಡಾವ್ ಲಪಿಡ್ ಅವರು ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದರು. ಈ ವಿಚಾರ ಎಲ್ಲೆಡೆ ಚರ್ಚೆಗೂ ಗ್ರಾಸವಾಗಿತ್ತು. ಇದಕ್ಕೆ ವಿವೇಕ್​ ಅಗ್ನಿಹೋತ್ರಿ ಅವರು ಯಾವುದೇ ಮುಲಾಜಿಲ್ಲದೇ ಪ್ರತಿಕ್ರಿಯೆ ನೀಡಿದ್ದರು. ಚಿತ್ರದಲ್ಲಿನ ಯಾವುದೇ ಒಂದು ದೃಶ್ಯ ನಕಲಿ ಎಂದು ಸಾಬೀತಾದ್ರೆ ಸಿನಿಮಾ ಮಾಡುವುದನ್ನೇ ಬಿಟ್ಟು ಬಿಡುತ್ತೇನೆ ಎಂದು ಅವರು ಸವಾಲು ಹಾಕಿದ್ದರು. ಆದರೆ ಈಗ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಬೇರೆಯದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ.

ವಿವೇಕ್​ ಅಗ್ನಿಹೋತ್ರಿ ಅವರ ಈ ಹೇಳಿಕೆ ವ್ಯಾಪಕವಾಗಿ ಎಲ್ಲೆಡೆ ಹರಡಿತ್ತು. ಬಳಿಕ ನಡಾವ್ ಲಪಿಡ್ ಅವರು, ‘ನನ್ನ ಹೇಳಿಕೆಯಿಂದ ನಿಮ್ಮ ಭಾವನೆಗಳಿಗೆ ನೋವುಂಟು ಆಗಿದ್ದರೆ ಕ್ಷಮೆಯಾಚಿಸುತ್ತೇನೆ’ ಎಂದು ಹೇಳಿದ್ದರು. ಈ ಘಟನೆಯಾಗಿ ಕೆಲವು ದಿನಗಳು ಕಳೆದಿವೆಯಷ್ಟೇ. ಈಗ ವಿವೇಕ್ ಅಗ್ನಿಹೋತ್ರಿ ಅವರು ಮತ್ತೆ ಸುದ್ದಿಯಾಗಿದ್ದಾರೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಅದ್ಭುತ ಸಿನಿಮಾ ಎಂದು ಹಲವರು ಭಾವಿಸಿದ್ದಾರೆ, ಅದನ್ನು ನಾನು ಒಪ್ಪುವೆ: ನಾದವ್ ಲ್ಯಾಪಿಡ್

‘ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ ಯಶಸ್ವಿಯಾದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರು 17.9 ಕೋಟಿ ರೂ. ಮೌಲ್ಯದ ಬೆಲೆಬಾಳುವ ಬಂಗಲೆಯನ್ನು ಖರೀದಿಸಿದ್ದಾರೆ.  ಐಷಾರಾಮಿ ಪೀಠೋಪಕರಣಗಳನ್ನು ಹೊಂದಿರುವ ಹೊಸ ಅಪಾರ್ಟ್​​ಮೆಂಟ್​ನ  ಖರೀದಿಸಿದ್ದಾರೆ’ ಎಂದು ಸುದ್ದಿ ವೆಬ್​ಸೈಟ್​​ ಒಂದು ವರದಿ ಮಾಡಿತ್ತು. ಇದನ್ನು ಗಮನಿಸಿದ ವಿವೇಕ್ ಅಗ್ನಿಹೋತ್ರಿ ಅವರು ಟ್ವೀಟ್​ ಮಾಡುವ ಮೂಲಕ ಖಡಕ್​ ಆಗಿ ಉತ್ತರ ನೀಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ‘ನನಗಾಗಿ ಪ್ರತಿದಿನ ಹೊಸ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿದ್ದಕ್ಕೆ ಮತ್ತು ಐಷಾರಾಮಿ ಪೀಠೋಪಕರಣಗಳನ್ನು ಒದಗಿಸಿದ್ದಕ್ಕಾಗಿ ನಾನು ಎಲ್ಲಾ ಕಾಂಗ್ರೆಸ್ಸಿಗರಿಗೆ, ಆಪಿಯಾಸ್ ಮತ್ತು ಬಾಲಿವುಡ್​ನ ಕೆಲ ನಿರುದ್ಯೋಗಿ ಜನರಿಗೆ ನಿಜವಾಗಿಯೂ ಕೃತಜ್ಞನಾಗಿದ್ದೇನೆ. ಜನಪಥ್‌ನಿಂದ ಬಂದ ಹತ್ತು ಸೋಫಾ ನನಗೆ ತುಂಬಾ ಇಷ್ಟವಾಯಿತು. ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಬಗ್ಗೆ ಹಬ್ಬಿದ್ದ ವಂದತಿಗೆ ಅವರು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:50 pm, Sat, 3 December 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ