AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ಹೊಸ ಅಪಾರ್ಟ್‌ಮೆಂಟ್‌ ಖರೀದಿಸಿದ ವಿವೇಕ್ ಅಗ್ನಿಹೋತ್ರಿ? ತಮ್ಮದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟ ನಿರ್ದೇಶಕ

ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ ಯಶಸ್ವಿಯಾದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರು 17.9 ಕೋಟಿ ರೂ. ಮೌಲ್ಯದ ಬೆಲೆಬಾಳುವ ಬಂಗಲೆಯನ್ನು ಖರೀದಿಸಿದ್ದಾರೆ ಎಂಬ ವದಂತಿಗೆ ಖಡ

Vivek Agnihotri: ಹೊಸ ಅಪಾರ್ಟ್‌ಮೆಂಟ್‌ ಖರೀದಿಸಿದ ವಿವೇಕ್ ಅಗ್ನಿಹೋತ್ರಿ? ತಮ್ಮದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟ ನಿರ್ದೇಶಕ
ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
TV9 Web
| Edited By: |

Updated on:Dec 03, 2022 | 6:51 PM

Share

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ’ (The Kashmir Files) ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಯಾವುದೇ ವಿಚಾರ ಮತ್ತು ಇತರರ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಎಂದಿಗೂ ಹಿಂಜರಿಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಇಸ್ರೇಲ್​ ನಿರ್ದೇಶಕ ನಡಾವ್ ಲಪಿಡ್ ಅವರು ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದರು. ಈ ವಿಚಾರ ಎಲ್ಲೆಡೆ ಚರ್ಚೆಗೂ ಗ್ರಾಸವಾಗಿತ್ತು. ಇದಕ್ಕೆ ವಿವೇಕ್​ ಅಗ್ನಿಹೋತ್ರಿ ಅವರು ಯಾವುದೇ ಮುಲಾಜಿಲ್ಲದೇ ಪ್ರತಿಕ್ರಿಯೆ ನೀಡಿದ್ದರು. ಚಿತ್ರದಲ್ಲಿನ ಯಾವುದೇ ಒಂದು ದೃಶ್ಯ ನಕಲಿ ಎಂದು ಸಾಬೀತಾದ್ರೆ ಸಿನಿಮಾ ಮಾಡುವುದನ್ನೇ ಬಿಟ್ಟು ಬಿಡುತ್ತೇನೆ ಎಂದು ಅವರು ಸವಾಲು ಹಾಕಿದ್ದರು. ಆದರೆ ಈಗ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಬೇರೆಯದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ.

ವಿವೇಕ್​ ಅಗ್ನಿಹೋತ್ರಿ ಅವರ ಈ ಹೇಳಿಕೆ ವ್ಯಾಪಕವಾಗಿ ಎಲ್ಲೆಡೆ ಹರಡಿತ್ತು. ಬಳಿಕ ನಡಾವ್ ಲಪಿಡ್ ಅವರು, ‘ನನ್ನ ಹೇಳಿಕೆಯಿಂದ ನಿಮ್ಮ ಭಾವನೆಗಳಿಗೆ ನೋವುಂಟು ಆಗಿದ್ದರೆ ಕ್ಷಮೆಯಾಚಿಸುತ್ತೇನೆ’ ಎಂದು ಹೇಳಿದ್ದರು. ಈ ಘಟನೆಯಾಗಿ ಕೆಲವು ದಿನಗಳು ಕಳೆದಿವೆಯಷ್ಟೇ. ಈಗ ವಿವೇಕ್ ಅಗ್ನಿಹೋತ್ರಿ ಅವರು ಮತ್ತೆ ಸುದ್ದಿಯಾಗಿದ್ದಾರೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಅದ್ಭುತ ಸಿನಿಮಾ ಎಂದು ಹಲವರು ಭಾವಿಸಿದ್ದಾರೆ, ಅದನ್ನು ನಾನು ಒಪ್ಪುವೆ: ನಾದವ್ ಲ್ಯಾಪಿಡ್

‘ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ ಯಶಸ್ವಿಯಾದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರು 17.9 ಕೋಟಿ ರೂ. ಮೌಲ್ಯದ ಬೆಲೆಬಾಳುವ ಬಂಗಲೆಯನ್ನು ಖರೀದಿಸಿದ್ದಾರೆ.  ಐಷಾರಾಮಿ ಪೀಠೋಪಕರಣಗಳನ್ನು ಹೊಂದಿರುವ ಹೊಸ ಅಪಾರ್ಟ್​​ಮೆಂಟ್​ನ  ಖರೀದಿಸಿದ್ದಾರೆ’ ಎಂದು ಸುದ್ದಿ ವೆಬ್​ಸೈಟ್​​ ಒಂದು ವರದಿ ಮಾಡಿತ್ತು. ಇದನ್ನು ಗಮನಿಸಿದ ವಿವೇಕ್ ಅಗ್ನಿಹೋತ್ರಿ ಅವರು ಟ್ವೀಟ್​ ಮಾಡುವ ಮೂಲಕ ಖಡಕ್​ ಆಗಿ ಉತ್ತರ ನೀಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ‘ನನಗಾಗಿ ಪ್ರತಿದಿನ ಹೊಸ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿದ್ದಕ್ಕೆ ಮತ್ತು ಐಷಾರಾಮಿ ಪೀಠೋಪಕರಣಗಳನ್ನು ಒದಗಿಸಿದ್ದಕ್ಕಾಗಿ ನಾನು ಎಲ್ಲಾ ಕಾಂಗ್ರೆಸ್ಸಿಗರಿಗೆ, ಆಪಿಯಾಸ್ ಮತ್ತು ಬಾಲಿವುಡ್​ನ ಕೆಲ ನಿರುದ್ಯೋಗಿ ಜನರಿಗೆ ನಿಜವಾಗಿಯೂ ಕೃತಜ್ಞನಾಗಿದ್ದೇನೆ. ಜನಪಥ್‌ನಿಂದ ಬಂದ ಹತ್ತು ಸೋಫಾ ನನಗೆ ತುಂಬಾ ಇಷ್ಟವಾಯಿತು. ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಬಗ್ಗೆ ಹಬ್ಬಿದ್ದ ವಂದತಿಗೆ ಅವರು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:50 pm, Sat, 3 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್