AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Vaccine War: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರಕ್ಕೆ ಆರಂಭದಲ್ಲೇ ಹಿನ್ನಡೆ

2020 ಹಾಗೂ 2021ರಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದೆ. ಕೊರೊನಾ ಲಸಿಕೆ ಉತ್ಪಾದನೆಯಲ್ಲಿ ಭಾರತ ಮಹತ್ವದ ಪಾತ್ರವಹಿಸಿತ್ತು. ಇದನ್ನು ಮುಖ್ಯವಾಗಿಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಸಿದ್ಧಗೊಳ್ಳುತ್ತಿದೆ.

The Vaccine War: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರಕ್ಕೆ ಆರಂಭದಲ್ಲೇ ಹಿನ್ನಡೆ
ವಿವೇಕ್​ ಅಗ್ನಿಹೋತ್ರಿ-ಸಪ್ತಮಿ
TV9 Web
| Edited By: |

Updated on:Jan 17, 2023 | 9:58 AM

Share

ವಿವೇಕ್ ಅಗ್ನಿಹೋತ್ರಿ (Vivek Agnihotri) ನಟನೆಯ ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕೆ ಇತ್ತೀಚೆಗೆ ನಾಯಕಿ ಆಗಿ ಸಪ್ತಮಿ ಗೌಡ ಆಯ್ಕೆ ಆಗಿದ್ದಾರೆ. ಈಗ ಈ ಚಿತ್ರಕ್ಕೆ ಆರಂಭದಲ್ಲೇ ಹಿನ್ನಡೆ ಆಗಿದೆ. ಈ ಸಿನಿಮಾದಲ್ಲಿ ನಟಿಸುತ್ತಿರುವ ವಿವೇಕ್ ಅಗ್ನಿಹೋತ್ರಿ ಪತ್ನಿ, ನಟಿ ಪಲ್ಲವಿ ಜೋಶಿಗೆ (Pallavi Joshi Accident) ಗಾಯವಾಗಿದೆ. ಸೆಟ್​​ನಲ್ಲಿ ನಡೆದ ಅವಘಡದಲ್ಲಿ ಪಲ್ಲವಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

2020 ಹಾಗೂ 2021ರಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದೆ. ಕೊರೊನಾ ಲಸಿಕೆ ಉತ್ಪಾದನೆಯಲ್ಲಿ ಭಾರತ ಮಹತ್ವದ ಪಾತ್ರವಹಿಸಿತ್ತು. ಇದನ್ನು ಮುಖ್ಯವಾಗಿಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಪಲ್ಲವಿ ಜೋಶಿ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಸೆಟ್​ಗೆ ತೆರಳಿದ್ದರು. ಆಗ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗಿದೆ. ಈ ವೇಳೆ ಅವರಿಗೆ ಗಾಯಗಳಾಗಿವೆ. ನಂತರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಮಟ್ಟದ ಹಾನಿ ಉಂಟಾಗಿಲ್ಲ ಎಂದು ತಂಡ ನಿಟ್ಟುಸಿರು ಬಿಟ್ಟಿದೆ.

ಇದನ್ನೂ ಓದಿ:  ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದಕ್ಕೆ ಕಾರಣ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾದಿಂದ ವಿವೇಕ್​ ಅಗ್ನಿಹೋತ್ರಿಗೆ ಸಿಕ್ಕ ಜನಪ್ರಿಯತೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.  ಹೀಗಾಗಿ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಇದೆ.

ಪ್ರಮುಖ ಪಾತ್ರದಲ್ಲಿ ಸಪ್ತಮಿ ಗೌಡ

ನಟಿ ಸಪ್ತಮಿ ಗೌಡ ಅವರು ‘ಪಾಪ್​ಕಾರ್ನ್ ಮಂಕಿ ಟೈಗರ್​’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ‘ಕಾಂತಾರ’ ಅವರ ಎರಡನೇ ಸಿನಿಮಾ. ಈ ಚಿತ್ರದಿಂದ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿ ಮಿಂಚಿದರು. ಹೀಗಾಗಿ, ಪರಭಾಷೆಗಳಿಂದ ಅವರಿಗೆ ಆಫರ್ ಬರುತ್ತಿದೆ. ಈಗ ಅವರು ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅವರ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:16 am, Tue, 17 January 23

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ