AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್​​ ಖಾನ್​ಗೆ ವಿವೇಕ್ ಅಗ್ನಿಹೋತ್ರಿ ಟಾಂಗ್; ಶಾರುಖ್​ರ​ನ್ನು ಹೊಗಳಿದ್ದ ಹಳೆಯ ಟ್ವೀಟ್ ವೈರಲ್ ಮಾಡಿದ ಫ್ಯಾನ್ಸ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಗೆದ್ದ ಬಳಿಕ ವಿವೇಕ್ ಅವರು ಸಾಕಷ್ಟು ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಿದ್ದಿದೆ. ಈಗ ಬಾಲಿವುಡ್ ಖಾನ್​ಗಳ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಕಿಂಗ್​​ ಖಾನ್​ಗೆ ವಿವೇಕ್ ಅಗ್ನಿಹೋತ್ರಿ ಟಾಂಗ್; ಶಾರುಖ್​ರ​ನ್ನು ಹೊಗಳಿದ್ದ ಹಳೆಯ ಟ್ವೀಟ್ ವೈರಲ್ ಮಾಡಿದ ಫ್ಯಾನ್ಸ್
ಶಾರುಖ್​-ವಿವೇಕ್
TV9 Web
| Edited By: |

Updated on: Jul 16, 2022 | 6:04 PM

Share

ದಕ್ಷಿಣ ಭಾರತಕ್ಕೆ ಹೋಲಿಕೆ ಮಾಡಿದರೆ ಬಾಲಿವುಡ್ (Bollywood) ಸಿನಿಮಾಗಳು ಹೇಳಿಕೊಳ್ಳುವಂತಹ ಕಲೆಕ್ಷನ್ ಮಾಡುತ್ತಿಲ್ಲ ಎಂಬ ಚರ್ಚೆ ಇದೆ. ಬಾಲಿವುಡ್ ದಿನಕಳೆದಂತೆ ಸೊರಗುತ್ತಿದೆ. ಆಮಿರ್ ಖಾನ್ (Aamir Khan), ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಸಿನಿಮಾಗಳು ಮೊದಲಿನ ಖದರ್ ಉಳಿಸಿಕೊಂಡಿಲ್ಲ. ಈ ಮೂವರಿಂದಲೇ ಬಾಲಿವುಡ್ ಮುಳುಗುತ್ತಿದೆ ಎನ್ನುವ ಆರೋಪವನ್ನು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮಾಡಿದ್ದಾರೆ. ಈ ಹೇಳಿಕೆ ಸಾಕಷ್ಟು ಚರ್ಚೆ ಆಗುತ್ತಿದ್ದು, ಪರ-ವಿರೋಧ ಚರ್ಚೆ ನಡೆಯುತ್ತಿದೆ.

ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆ ವಿಚಾರ ಇಟ್ಟುಕೊಂಡು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶನ ಮಾಡಿದ್ದರು ವಿವೇಕ್ ಆಗ್ನಿಹೋತ್ರಿ. ಈ ಚಿತ್ರದಿಂದ ಅವರಿಗೆ ಅಪಾರ ಜನಪ್ರಿಯತೆ ದೊರೆತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿ ಬೀಗಿದೆ. ಈ ಚಿತ್ರ ಗೆದ್ದ ಬಳಿಕ ವಿವೇಕ್ ಅವರು ಸಾಕಷ್ಟು ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಿದ್ದಿದೆ. ಈಗ ಬಾಲಿವುಡ್ ಖಾನ್​ಗಳ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ
Image
Chiranjeevi Sarja: ಚಿತ್ರರಂಗಕ್ಕೆ ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಎಂಟ್ರಿ ನೀಡುವ ಬಗ್ಗೆ ಅರ್ಜುನ್​ ಸರ್ಜಾ ಹೇಳಿದ್ದೇನು?
Image
RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಮಾಧ್ಯಮವೊಂದು ಶಾರುಖ್ ಖಾನ್ ಬಗ್ಗೆ ಸುದ್ದಿ ಪ್ರಕಟ ಮಾಡಿತ್ತು. ‘ಬಾಲಿವುಡ್​ನಲ್ಲಿ ಶಾರುಖ್ ಖಾನ್ ಈಗಲೂ ಏಕೆ ಕಿಂಗ್?’ ಎಂಬುದನ್ನು ಈ ಸುದ್ದಿಯಲ್ಲಿ ವಿವರಿಸಲಾಗಿತ್ತು. ಈ ಬಗ್ಗೆ ಮಾಡಲಾದ ಟ್ವೀಟ್​ಅನ್ನು ವಿವೇಕ್ ರೀಟ್ವೀಟ್ ಮಾಡಿದ್ದಾರೆ. ‘ಎಲ್ಲಿಯವರೆಗೆ ಬಾಲಿವುಡ್​ನಲ್ಲಿ ಕಿಂಗ್​ಗಳು, ಬಾದ್​ಶಾಗಳು, ಸುಲ್ತಾನ್​ಗಳು ಇರುತ್ತಾರೋ ಅಲ್ಲಿಯವರೆಗೆ ಬಾಲಿವುಡ್ ಮುಳುಗುತ್ತಲೇ ಇರುತ್ತದೆ. ಇದನ್ನು ಜನರ ಇಂಡಸ್ಟ್ರಿಯನ್ನಾಗಿ ಮಾಡಿ. ಜನರ ಕಥೆಗಳನ್ನು ಸಿನಿಮಾ ಮಾಡಿ. ಆಗ ಇದು ಗ್ಲೋಬಲ್ ಇಂಡಸ್ಟ್ರಿಯಾಗಿ ಬದಲಾಗಲಿದೆ’ ಎಂದು ಬರೆದುಕೊಂಡಿರುವ ವಿವೇಕ್ ಅಗ್ನಿಹೋತ್ರಿ FACT (ಸತ್ಯ) ಎಂದು ಹ್ಯಾಶ್​ಟ್ಯಾಗ್ ಹಾಕಿದ್ದಾರೆ.

ಇದನ್ನೂ ಓದಿ: ಶಾರುಖ್ ಖಾನ್ ‘ಜವಾನ್​’ ಚಿತ್ರದಲ್ಲಿ ದಳಪತಿ ವಿಜಯ್​ಗೆ ಅತಿಥಿ ಪಾತ್ರ; ಸಂಭಾವನೆ ಎಷ್ಟು?

ಇದು ಶಾರುಖ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ಶಾರುಖ್ ಖಾನ್ ಅವರನ್ನು ಹೊಗಳಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಆ ಟ್ವೀಟ್​ಗಳ ಸ್ಕ್ರೀನ್​​ಶಾಟ್​ಗಳನ್ನು ಶಾರುಖ್ ಫ್ಯಾನ್ಸ್ ಪೋಸ್ಟ್ ಮಾಡುತ್ತಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ ಅನುಪ್ ಖೇರ್ ಅವರು ಶಾರುಖ್ ಬಗ್ಗೆ ಪಾಸಿಟಿವ್ ಆಗಿ ಮಾಡಿದ ಟ್ವೀಟ್ ಕೂಡ ವೈರಲ್ ಮಾಡಲಾಗುತ್ತಿದೆ.

Follow Us
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ